ಮಹಾರಾಷ್ಟ್ರ: ಜೈ ಶ್ರೀರಾಮ ಎನ್ನಲು ನಿರಾಕರಿಸಿದ್ದಕ್ಕೆ ಗಡ್ಡ ಕತ್ತರಿಸಿ ಥಳಿತ

ಮುಂಬೈ ಮಾರ್ಚ್ 28: ಜೈ ಶ್ರೀ ರಾಮ್ ಎಂದು ಕೂಗಲು ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರದ ಇಮಾಮ್‌ಗೆ ಥಳಿಸಿ, ಗಡ್ಡ ಕತ್ತರಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಅನ್ವಾ ಗ್ರಾಮದ ಮಸೀದಿಯೊಂದರಲ್ಲಿ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಇಮಾಮ್‌ನ ಮೇಲೆ ಅಪರಿಚಿತ ವ್ಯಕ್ತಿಗಳು ಆರಾಧನಾ ಸ್ಥಳಕ್ಕೆ ನುಗ್ಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಮಾಮ್‌ 'ಜೈ ಶ್ರೀ ರಾಮ್' ಎಂದು ಕೂಗಲು ನಿರಾಕರಿಸಿದ ಕಾರಣಕ್ಕೆ ಥಳಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಇಮಾಮ್, 'ಜಾಕಿರ್ ಸಯ್ಯದ್ ಖಾಜಾ, ಭಾನುವಾರ ಸಂಜೆ 7.30 ರ ಸುಮಾರಿಗೆ ಮಸೀದಿಯೊಳಗೆ ಕುರಾನ್ ಓದುತ್ತಿದ್ದಾಗ ಈ ಘಟನೆ ನಡೆದಿದೆ' ಎಂದು ಹೇಳಿದರು.

Maharashtra: Attackers beat and shaved beards for refusing to call Jai Shri Ram

ಅಪರಿಚಿತ ವ್ಯಕ್ತಿಗಳು ತಮ್ಮ ಮುಖದ ಮೇಲೆ ಬಟ್ಟೆಯನ್ನು ಕಟ್ಟಿಕೊಂಡು ಮಸೀದಿಗೆ ಪ್ರವೇಶಿಸಿದರು. ಇಮಾಮ್ ಅವರು ಕುರಾನ್ ಓದುತ್ತಿದ್ದಾಗ 'ಜೈ ಶ್ರೀ ರಾಮ್' ಎಂದು ಜಪಿಸುವಂತೆ ಒತ್ತಾಯಿಸಿದರು. ಇಮಾಮ್ ಅವರು ಹೇಳಿದಂತೆ ಮಾಡಲು ನಿರಾಕರಿಸಿದಾಗ, ಮೂವರು ವ್ಯಕ್ತಿಗಳು ಅವರನ್ನು ಮಸೀದಿಯ ಹೊರಗೆ ಕರೆದೊಯ್ದು ಥಳಿಸಿದರು. ದಾಳಿಕೋರರು ರಾಸಾಯನಿಕ ಲೇಪಿತ ಬಟ್ಟೆಯನ್ನು ಬಳಸಿ ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿದ್ದಾರೆ ಎಂದು ಇಮಾಮ್ ಹೇಳಿದ್ದಾರೆ. ಅವನಿಗೆ ಪ್ರಜ್ಞೆ ಬಂದಾಗ, ತನ್ನ ಗಡ್ಡವನ್ನು ಕತ್ತರಿಸಿರುವುದನ್ನು ಅವನು ಅರಿತುಕೊಂಡಿದ್ದಾರೆ.

ರಾತ್ರಿ 8 ಗಂಟೆಗೆ ಜನರು ಪ್ರಾರ್ಥನೆಗಾಗಿ ಮಸೀದಿಗೆ ಬಂದಾಗ, ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ಕಂಡುಕೊಂಡಿದ್ದಾರೆ. ತಕ್ಷಣ ಅವರನ್ನು ಸಿಲ್ಲೋಡ್‌ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ನಂತರ ಅವರನ್ನು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಮಸೀದಿ ಇರುವ ಅನ್ವರ್ ಗ್ರಾಮಕ್ಕೆ ಆಗಮಿಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಭೋಕರ್ದನ್‌ನ ಪರಧ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಪ್ರಕಾರ 452 (ಅತಿಕ್ರಮಣ, ಹಲ್ಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳಿಂದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Maharashtra: Attackers beat and shaved beards for refusing to call Jai Shri Ram

ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಸ್ಥಳದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಆರೋಪಿಗಳು ಕ್ಯಾಮರಾ ಇರುವ ಕಡೆಯಲ್ಲಿ ಮುಖ ಮರೆ ಮಾಡಲು ಪ್ರಯತ್ನಿಸಿದ್ದಾರೆ. ಘಟನೆಗೂ ಮುನ್ನ ಅವರು ಮಸೀದಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಇಮಾಮ್‌ ಏಕಾಂಗಿಯಾಗಿ ಕುರಾನ್ ಓದುತ್ತಿರುವ ಸಮಯವನ್ನು ಅವರು ಈ ಹಿಂದೆ ಭೇಟಿ ನೀಡಿದ ವೇಳೆ ಗಮನಿಸಿದ್ದಾರೆ. ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Maharashtra: Attackers beat and shaved beards for refusing to call Jai Shri Ram

ಘಟನೆಯ ವಿರುದ್ಧ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡವುದರೊಂದಿಗೆ ಬಿಗಿಬಂದೋಬಸ್ತ್ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+