ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಬಂದ್‌: ಮತ್ತೋರ್ವನಿಂದ ಆತ್ಮಹತ್ಯೆಗೆ ಯತ್ನ

By Nayana
|
Google Oneindia Kannada News

ಮಹಾರಾಷ್ಟ್ರ, ಜು.24: ಮರಾಠ ಜನಾಂಗಕ್ಕೆ ಸರ್ಕಾರದ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಅನೇಕ ಮರಾಠ ಸಂಘಟನೆಗಳು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ.

ಮಹಾರಾಷ್ಟ್ರ ಬಂದ್‌: ಪಂಢರಪುರಕ್ಕೆ ಹೋಗಲು ಕನ್ನಡಿಗರ ಪರದಾಟ ಮಹಾರಾಷ್ಟ್ರ ಬಂದ್‌: ಪಂಢರಪುರಕ್ಕೆ ಹೋಗಲು ಕನ್ನಡಿಗರ ಪರದಾಟ

ಈ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಗೋವಾದಿಂದ ಮಹಾರಾಷ್ಟ್ರಕ್ಕೆ ತೆರಳುವುದು ಹಾಗೆಯೇ ಮಹಾರಾಷ್ಟ್ರದಿಂದ ಬೇರೆ ಬೇರೆ ರಾಜ್ಯಗಳಿಗೆ ತೆರಳುವವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪಂಢರಪುರದಲ್ಲಿ ಆಷಾಢ ಏಕಾದಶಿಗೆಂದು ಕರ್ನಾಟಕದಿಂದ ಲಕ್ಷಾಂತರ ಮಂದಿ ಭಕ್ತರು ತೆರಳಿದ್ದರು. ಆದರೆ ಹಿಂದಿರುಗಿ ಬರಲಾರದೆ ಕಷ್ಟ ಅನುಭವಿಸುತ್ತಿದ್ದಾರೆ.

ಸೋಮವಾರ ಪ್ರತಿಭಟನಾಕಾರನೊಬ್ಬ ಔರಂಗಾಬಾದ್‌ನ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ, ಇದೀಗ ಮತ್ತೆ ಅಂಥದ್ದೇ ಘಟನೆಗೆ ನಡೆದಿದ್ದು ಅದೃಷ್ಟವಷಾತ್‌ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮರಾಠಾ ಕ್ರಾಂತಿ ಮೋರ್ಚಾ ಕಾರ್ಯಕರ್ತರು ಔರಂಗಾಬಾದ್‌ನ ಗಂಗಾಪುರದಲ್ಲಿ ಟ್ರಗ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

Maharashtra Bandh:one more person attempts suicide

ವಾರಗಟ್ಟಲೇ ವಿಠ್ಠಲ ದರ್ಶನಕ್ಕೆಂದು ವಾರಕರಿ ಸೇವೆ ಮಾಡಿಕೊಂಡು ಪಂಢರಪುರ ಸೇರಿದ ಸಹಸ್ರಾರು ಭಕ್ತರು,ಆಷಾಢ ಏಕಾದಶಿಯಂದು ತುಂಬಿ ಹರಿಯುತ್ತಿದ್ದ ಚಂದ್ರಭಾಗಾನದಿಯಲ್ಲಿ ಮಿಂದೆದ್ದರು. ಸೋಮವಾರ ಆಷಾಢ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆದಿದೆ. ಇದಕ್ಕೆ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಆಂಧ್ರಪ್ರದೇಶದಿಂದ ಮತ್ತಿತರೆ ರಾಜ್ಯಗಳಿಂದ 15 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು ಆದರೆ ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿರುವ ಪರಿಣಾಮ ಭಕ್ತರು ಅಂತಂತ್ರ ಸ್ಥಿತಿಗೆ ಸಿಲುಕುವಂತಾಗಿದೆ.

English summary
One more man in Aurangabad attempts suicide. As protests intensify, internet services in the district have been suspended and bus services have been disrupted. Morcha workers shave their heads in protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X