ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ನಿಧನ

ಭಿವಿಂಡಿ, ಆಗಸ್ಟ್ 28: ಮಹಾರಾಷ್ಟ್ರದ ಭಿವಿಂಡಿಯ ಸರಾವಳಿ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಥಾಣೆ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಗುರುನಾಥ್ ವಾಮನ್ ಲಾಸ್ನೆ ದುರಂತ ಅಂತ್ಯ ಕಂಡಿದ್ದಾರೆ.

ವೇಗವಾಗಿ ಬರುತ್ತಿದ್ದ ಖಾಸಗೀ ಬಸ್ ವೊಂದಕ್ಕೆ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡದ ಪರಿಣಾಮ ಈ ದುರಂತ ಸಂಭವಿಸಿದೆ. 55 ವರ್ಷದ ನಾಸ್ನೆ ಅವರು ಥಾಣೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಬಸ್ಸಿನ ಚಾಲಕ ನಾಪಲತ್ತೆಯಾಗಿದ್ದು, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304(A), 184 ಮತ್ತು 279ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Maharashtra: BJP leader dies in road accident

ಸೋಮವಾರ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಮಾರುತಿ ಸುಜುಕಿ ವಾಗನ್ ಆರ್ ಕಾರಿನಲ್ಲಿ ಲಾಸ್ನೆ ಅವರು ಪ್ರಯಾಣಿಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇವರ ನಿಧನಕ್ಕೆ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+