ಮಹಾರಾಷ್ಟ್ರ: ರಾಮ ಮಂದಿರ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ
ಮುಂಬೈ ಮಾರ್ಚ್ 30: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ವಿಷಯ ಉಲ್ಬಣಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಗುಂಪು ದೇವಾಲಯದ ಹೊರಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಹಾರಿಸಲಾಯಿತು. ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿ ಸುಟ್ಟು ಕರಕಲಾದ ವಾಹನಗಳನ್ನು ನಂದಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

''ಛತ್ರಪತಿ ಸಂಭಾಜಿನಗರದ ಕಿರಾಡಪುರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟ, ಕೆಲವು ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಜನರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ. ಕಿಡಿಗೇಡಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ" ಎಂದು ಛತ್ರಪತಿ ಸಂಭಾಜಿನಗರ ಸಿಪಿ, ನಿಖಿಲ್ ಗುಪ್ತಾ ಸುದ್ದಿ ಸಂಸ್ಥೆಗೆ ತಿಳಿಸಿದರು.
Maharashtra | A clash broke out between two groups in Chhatrapati Sambhajinagar's Kiradpura area
— ANI (@ANI) March 30, 2023
Stones were pelted, some private & police vehicles were set on fire. Police used force to disperse the people and now the situation is peaceful. Police will take strict action… pic.twitter.com/u9qa5XYyPk
ವರದಿಯ ಪ್ರಕಾರ, ಕಿರಾದ್ಪುರ ಪ್ರದೇಶದಲ್ಲಿರುವ ರಾಮ ಮಂದಿರದ ಹೊರಗೆ ಬುಧವಾರ ರಾತ್ರಿ 12:30ಕ್ಕೆ ಇಬ್ಬರು ಯುವಕರ ನಡುವೆ ವಾಗ್ವಾದ ನಡೆದಿದೆ. ನಂತರ ವಿಷಯ ಎಲ್ಲಿಯವರೆಗೆ ಸಾಗಿತ್ತೆಂದರೆ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಇದಾದ ನಂತರ ಜನರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು. ದುಷ್ಕರ್ಮಿಗಳು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಘರ್ಷಣೆಗೆ ಕಾರಣವೇನು?
ಕೆಲ ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಮಾಡಿದ್ದು ಈ ಘರ್ಷಣೆಗೆ ಕಾರಣ ಎನ್ನಲಾಗುತ್ತಿದೆ. ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಕೆಲವು ದುಷ್ಕರ್ಮಿಗಳು ದೇವಾಲಯದ ಮೇಲೆ ದಾಳಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದೆ. ಇದೇ ಘಟನೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.
AIMIM Aurangabad MP @imtiaz_jaleel Sahab himself went to the spot Ram Mandir Kiradpura where some false news was spread that some miscreants had attacked the temple, he appealed not to believe on any rumors and both communities to maintain peace in the city. #Aurangabad pic.twitter.com/2ZAgUtAaCI
— Mohammed Naseeruddin (@naseerCorpGhmc) March 29, 2023
ಆರಂಭದಲ್ಲಿ ಕೆಲ ಜನರ ನಡುವೆ ಮಾತ್ರ ಇದ್ದ ಜಗಳ ವಿಕೋಪಕ್ಕೆ ತಿರುಗಿ ಹಲವಾರು ಜನರು ಸ್ಥಳಕ್ಕೆ ಆಗಮಿಸಿದ್ದಾರೆ. ಹೀಗೆ ಸ್ಥಳದಲ್ಲಿ ಎರಡು ಗುಂಪುಗಳಾಗಿದ್ದು ಪರಸ್ಪರ ಕಲ್ಲು ತೂರಾಟ ನಡೆದಿದೆ. ಇದರಿಂದ ಪೊಲೀಸರು ಮದ್ಯೆಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಆರಮಭದಲ್ಲಿ ಅದು ಸಾಧ್ಯವಾಗಿಲ್ಲ. ಉದ್ರಿಕ್ತರು ಪರಸ್ಪರ ಕಲ್ಲು ತೂರಾಟ ಮಾಡಲು ಆರಂಭಿಸುತ್ತಿದ್ದಂತೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಮುಂದಾದಾದಾಗ ಬಲಪ್ರಯೋಗ ನಡೆದಿದೆ. ಈ ವೇಳೆ ಪೊಲೀಸ್ ವಾಹನಗಳು ಹಾಗೂ ಖಾಸಗೀ ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ.

ಘಟನೆಯ ವಿಡಿಯೊ ವೈರಲ್
ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಎಐಎಂಐಎಂನ ರಾಷ್ಟ್ರೀಯ ಕಾರ್ಪೊರೇಟರ್ ಮೊಹಮ್ಮದ್ ನಾಸಿರುದ್ದೀನ್ ಅವರು ಟ್ವಿಟ್ಟರ್ನಲ್ಲಿ ಘಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
"ನಾವು ಪೊಲೀಸ್ ಬಲವನ್ನು ಬಳಸಿಕೊಂಡು ಎಲ್ಲಾ ದುಷ್ಕರ್ಮಿಗಳನ್ನು ಹತ್ತಿಕ್ಕಿದ್ದೇವೆ ಮತ್ತು ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನರು ಶಾಂತವಾಗಿರಲು ನಾನು ಮನವಿ ಮಾಡುತ್ತೇನೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ನಿಖಿಲ್ ಗುಪ್ತಾ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications