ರಾಜೀನಾಮೆ ನಿರ್ಧಾರದಿಂದ ಉಪ ಮುಖ್ಯಮಂತ್ರಿ ಯು-ಟರ್ನ್!
ಮುಂಬೈ, ಜೂನ್ 08: ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾದ ಬಳಿಕ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ರಾಜಕೀಯದಲ್ಲಿ ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.
ಶನಿವಾರ ಮುಂಬೈನಲ್ಲಿ ಮಾತನಾಡಿದ ದೇವೇಂದ್ರ ಫಡ್ನವಿಸ್, "ನಾನು ಓಡಿಹೋಗುವುದಿಲ್ಲ. ನಾನು ಮನಸ್ಸು ಬದಲಾವಣೆ ಮಾಡಿಕೊಂಡಿದ್ದೇನೆ" ಎಂದು ಹೇಳುವ ಮೂಲಕ ರಾಜೀನಾಮೆ ತೀರ್ಮಾನದಿಂದ ಹಿಂದೆ ಸರಿಯುವ ಕುರಿತು ಮಾತನಾಡಿದರು.

ಶುಕ್ರವಾರ ದೇವೇಂದ್ರ ಫಡ್ನವಿಸ್ ದೆಹಲಿ ಪ್ರವಾಸ ಕೈಗೊಂಡಿದ್ದರು. ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಭೇಟಿ ಮಾಡಿದ್ದರು. ಈ ಭೇಟಿ ಬಳಿಕ ದೇವೇಂದ್ರ ಫಡ್ನವಿಸ್ ರಾಜೀನಾಮೆ ತೀರ್ಮಾನ ವಾಪಸ್ ಪಡೆಯುವ ಕುರಿತು ಮಾತನಾಡಿದ್ದಾರೆ.
ಬಿಜೆಪಿಗೆ ಸೋಲು: ಲೋಕಸಭೆ ಚುನಾವಣೆ 2024ರಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿತ್ತು. ರಾಜ್ಯದಲ್ಲಿ 48 ಲೋಕಸಭಾ ಕ್ಷೇತ್ರಗಳಿವೆ. ಚುನಾವಣೆಯಲ್ಲಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಠಾಕ್ರೆ ಬಣ) 9 ಸ್ಥಾನಗಳಲ್ಲಿ ಜಯಗಳಿಸಿದ್ದವು.
ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷರು ಚಂದ್ರಶೇಖರ ಬಾವಾಂಕುಲೆ. ಆದರೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾದ ಕಾರಣ ಅವರು ಲೋಕಸಭೆ ಚುನಾವಣೆ ಸೋಲಿನ ಸಂಪೂರ್ಣ ಜವಾಬ್ದಾರಿ ಹೊರುತ್ತೇನೆ ಎಂದು ಹೇಳಿದ್ದರು.
"ರಾಜ್ಯದಲ್ಲಿ ಪಕ್ಷವನ್ನು ನಾನು ಮುನ್ನಡೆಸುತ್ತಿದ್ದೇನೆ. ಇಂತಹ ಫಲಿತಾಂಶದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ನಾನು ಪಕ್ಷದ ಹೈಕಮಾಂಡ್ಗೆ ನನ್ನ ಎಲ್ಲಾ ಸರ್ಕಾರದ ಜವಾಬ್ದಾರಿಯಿಂದ ಮುಕ್ತಗೊಳಿಸಿ ಎಂದು ಮನವಿ ಮಾಡುತ್ತೇನೆ. ಆಗ ನಾನು ಪಕ್ಷದ ಕೆಲಸಗಳನ್ನು ಮುಂದಿನ ಚುನಾವಣೆಗಾಗಿ ಪರಿಶ್ರಮದಿಂದ ಮಾಡಲು ಅನುಕೂಲವಾಗಲಿದೆ" ಎಂದು ತಿಳಿಸಿದ್ದರು.
ದೆಹಲಿಯಲ್ಲಿ ಅಮಿತ್ ಶಾ ಭೇಟಿಯ ವೇಳೆ ಅವರು ಮಹಾರಾಷ್ಟ್ರದ ಸರ್ಕಾರದಲ್ಲಿ ಮುಂದುವರೆಯಬೇಕು ಸಲಹೆ ನೀಡಿದ್ದು, ಆದ್ದರಿಂದ ದೇವೇಂದ್ರ ಫಡ್ನವಿಸ್ ತಮ್ಮ ರಾಜೀನಾಮೆ ತೀರ್ಮಾನ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.
"ನಾನು ಎಲ್ಲರ ಮುಖದಲ್ಲೂ ಸಂತೋಷವನ್ನು ನೋಡುತ್ತಿದ್ದೇನೆ, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಈಗ ಪ್ರಪಂಚದಾದ್ಯಂತ ಮೊಳಗುತ್ತಿದೆ. ಶುಕ್ರವಾರ ಎನ್ಡಿಎ ಮೈತ್ರಿಕೂಟ ಅವರ ಹೆಸರನ್ನು ಪ್ರಧಾನಿಯಾಗಿ ಒಪ್ಪಿಕೊಂಡಿದೆ" ಎಂದು ದೇವೇಂದ್ರ ಫಡ್ನವಿಸ್ ಹೇಳಿದರು.
"ರಾಜ್ಯದಲ್ಲಿ ನಾವು ಬಯಸಿದಷ್ಟು ಸ್ಥಾನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ನಾವು ನಮ್ಮ ಭವಿಷ್ಯದ ಕಾರ್ಯತಂತ್ರವನ್ನು ರೂಪಿಸಲು ಸಭೆಯನ್ನು ನಡೆಸಲಿದ್ದೇವೆ. ರಾಜ್ಯದ ಚುನಾವಣೆ ಬಗ್ಗೆ ನಮಗೆ ಸ್ಪಷ್ಟವಾದ ದಿಕ್ಸೂಚಿ ಇದೆ" ಎಂದು ತಿಳಿಸಿದರು.
"ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಬಿಜೆಪಿಯನ್ನು ಮುನ್ನಡೆಸಿದ್ದೆ. ಆದ್ದರಿಂದ ಈ ಸೋಲಿಗೆ ನಾನೇ ಹೊಣೆ ಎಂದು ಹೇಳಿದೆ. ನನ್ನ ಸ್ಥಾನ ತೊರೆಯಲು ಅವಕಾಶ ನೀಡುವಂತೆ ನಾಯಕರನ್ನು ಕೇಳಿದ್ದೆ. ನಾಯಕರಿಗೆ ನನ್ನ ಮೇಲೆ ನಂಬಿಕೆ ಇದೆ. ನಾನು ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದರು.
ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ರಾಜ್ಯದ ಮಾಜಿ ಮುಖ್ಯಮಂತ್ರಿ. ಗೋವಾ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಉಸ್ತುವಾರಿಯಾಗಿ ಕೆಲಸ ಮಾಡಿರುವ ಅನುಭವಿ ನಾಯಕ.
ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿದರು. ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 2 ಜುಲೈ 2023ರಂದು ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಜೂನ್ 4ರಂದು 2024ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಜೂನ್ 5ರ ಬುಧವಾರ ದೇವೇಂದ್ರ ಫಡ್ನವೀಸ್ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಮಾತು ಆಡಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications