Maharashtra Assembly Elections 2024: ಮಹಾರಾಷ್ಟ್ರದಲ್ಲಿ ಈ ಮೈತ್ರಿಕೂಟಕ್ಕೆ ಅಧಿಕಾರ ಗದ್ದುಗೆ: ಸಮೀಕ್ಷೆ
ಬೆಂಗಳೂರು, ನವೆಂಬರ್ 11: ಮಹಾರಾಷ್ಟ್ರದ ಎಲ್ಲ 288 ವಿಧಾನಸಭಾ ಚುನಾವಣೆ 2024 ಇದೇ ನವೆಂಬರ್ 20ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಮಧ್ಯೆ ಮಹತ್ವ ಸಮೀಕ್ಷಾ ವರದಿಯೊಂದು ಪ್ರಟಕಗೊಂಡಿದ್ದು, ಇದರಲ್ಲಿ ಬಿಜೆಪಿ ಮೈತ್ರಿಕೂಟ ಮಹಾಯುತಿ ಭರ್ಜರಿ ಗೆಲುವು ದಾಖಲಿಸಿದೆ ಎಂದು ಭವಿಷ್ಯ ನುಡಿದಿದೆ.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯತಿಗೆ (ಬಿಜೆಪಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ- ಅಜಿತ್ ಪವಾರ್ ಬಣ-), ಶಿವಸೇನಾ (ಏಕ್ನಾಥ್ ಶಿಂಧೆ ಬಣ) ಮಹಾರಾಷ್ಟ್ರ ರಾಜ್ಯದಲ್ಲಿ ಗೆಲುವು ಸಿಗಲಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಇದರಲ್ಲಿಲ ಮಹಾಯುತಿ ಮೈತ್ರಿಕೂಟಕ್ಕೆ 145 ರಿಂದ 165 ಸ್ಥಾನಗಳಲ್ಲಿ ವಿಜಯ ಸಾಧಿಸುವ ಮೂಲಕ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಮ್ಯಾಟ್ರಿಜ್ ಸಮೀಕ್ಷೆಯ ವರದಿ ಮಾಹಿತಿ ನೀಡಿದೆ.
ಮಹಾಯುತಿಗೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿಗೆ (ಕಾಂಗ್ರೆಸ್, ಶಿವಸೇನೆ (ಯುಬಿಟಿ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ, ಬಣ, ಉದ್ಧವ್ ಠಾಕ್ರೆ) ಸರಿಸುಮಾರು 106 ರಿಂದ 126 ಸೀಟುಗಳು ಬರಲಿವೆ ಎಂದು ಈ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ.
ಪ್ರಸಕ್ತ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟ, ಮಹಾಯುತಿ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಮ್ಯಾಟ್ರಿಜ್ ಸಂಸ್ಥೆಯು ಕಳೆದ ಅಕ್ಟೋಬರ್ 10 ಮತ್ತು ನವೆಂಬರ್ 9ರವರೆಗೆ ಒಟ್ಟು 109,000 ಕ್ಕೂ ಹೆಚ್ಚು ಮಂದಿಯ ಪ್ರತಿಕ್ರಿಯೆ ಸಂಗ್ರಹಿಸಿ, ಅಭಿಪ್ರಾಯ ಪರಿಶೀಲಿಸಿ ಸಮೀಕ್ಷೆ ಬಿಡುಗಡೆ ಮಾಡಿದೆ.
ಒಟ್ಟಾರೆ ಮತದಾರರ ಪ್ರಮಾಣದಲ್ಲಿ ನೋಡುವುದಾದರೆ, ಮಹಾವಿಕಾಸ ಆಘಾಡಿಯು ಶೇಕಡಾ 41ರಷ್ಟು ಮತಗಳನ್ನು ಪಡೆದರೆ, ಮಹಾಯುತಿಯು ಸುಮಾರು ಶೇಖಡಾ 47 ರಷ್ಟು ಮತಗಳು ಗಳಿಸಲಿದೆ. ಸಣ್ಣ ಸಣ್ಣ ಪಕ್ಷಗಳು ಸಹಿತ ಒಟ್ಟು ಶೇಕಡಾ 12ರಷ್ಟು ಮತಗಳನ್ನು ಸಂಗ್ರಹಿಸಬಹುದು ಎಂದು ಸಮೀಕ್ಷೆ ತಿಳಿಸಿದೆ.
ಬಿಜೆಪಿ ನೇತೃತ್ವದ ಮಹಾಯುತಿಗೆ ಪಶ್ಚಿಮ ಮಹಾರಾಷ್ಟ್ರದಲ್ಲಿ ಶೇಕಡಾ 48, ವಿದರ್ಭ ಶೇಕಡಾ 48, ಮುಂಬೈನ ಥಾಣೆ ಸೇರಿ ಕೊಂಕಣದಲ್ಲಿ ಶೇಕಡಾ 52 ರಷ್ಟು ಅತ್ಯಧಿಕ ಬೆಂಬಲ ಸಿಗಲಿದೆ. ಇತ್ತ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿಗೆ (MVA) ಉತ್ತರ ಮಹಾರಾಷ್ಟ್ರ ಶೇಕಡಾ 47ರಷ್ಟು, ಮರಾಠವಾಡದಲ್ಲಿ ಶೇಕಡಾ 44ರಷ್ಟು ರಷ್ಟು ಮತ ಹಂಚಿಕೆ ಆಗಲಿವೆ. ಈ ಮೂಲಕ ಬಿಜೆಪಿಗೆ ಟಕ್ಕರ್, ತೀವ್ರ ಪೈಪೋಟಿ ನೀಡಲಿದೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ.
ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ಎದರುಸುವ ಮಹಾರಾಷ್ಟ್ರದಲ್ಲಿ ನವೆಂಬರ್ 23 ಚುನಾವಣೆ ಆಯೋಗದಿಂದ ಫಲಿತಾಂಶ ಪ್ರಕಟಗೊಳ್ಳಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications