ಮಹಾರಾಷ್ಟ್ರದಲ್ಲಿ ಬಿಜೆಪಿ "ಮೈಕ್ರೋ ಪ್ಲಾನಿಂಗ್"ಗೆ ದಂಗಾದ ಕಾಂಗ್ರೆಸ್!
ಮಹಾರಾಷ್ಟ್ರದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಗೆ ಬಿಜೆಪಿ ವಿಭಿನ್ನ ಸೂತ್ರವನ್ನೇ ಅನುಸರಿಸುತ್ತಿದೆ. ಇದೀಗ ಮರಾಠರ ಸಮುದಾಯ ಬಿಜೆಪಿಯಿಂದ ತುಸು ಅಂತರ ಕಾಪಾಡಿಕೊಂಡಿದೆ. ಮೀಸಲಾತಿ ವಿಚಾರದಲ್ಲಿ ಮಹಾರಾಷ್ಟ್ರದಲ್ಲಿ ಮರಾಠರ ಸಮುದಾಯದಿಂದ ಭಾರೀ ಹೋರಾಟಗಳು ನಡೆದಿವೆ. ಇದೀಗ ಬಿಜೆಪಿಯು ಒಬಿಸಿ ಹಾಗೂ ಹಿಂದುಳಿದ ವರ್ಗಗಳ ಮತಬ್ಯಾಂಕ್ನ ಮೇಲೆ ಕಣ್ಣಿಟ್ಟಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಮರಾಠ ಸಮುದಾಯವು ಮೀಸಲಾತಿಗೆ ಆಗ್ರಹಿಸಿ ಈಚೆಗೆ ಮಹಾರಾಷ್ಟ್ರದಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆದಿದ್ದವು. ಈ ಸಮುದಾಯದ ಹಲವು ನಾಯಕರು ಉಪವಾಸ ಸತ್ಯಾಗ್ರಹ ಸಹ ಮಾಡಿದ್ದರು. ಆದರೆ, ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ಸಿಕ್ಕಿಲ್ಲ ಎನ್ನುವುದು ಮರಾಠ ಸಮುದಾಯದ ಆರೋಪವಾಗಿದೆ. ಆದರೆ, ಮರಾಠ ಸಮುದಾಯದ ಕೆಲವರು ಬಿಜೆಪಿಯ ಪರವಾಗಿಯೇ ಇದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 288 ವಿಧಾನಸಭಾ ಕ್ಷೇತ್ರಗಳು ಇವೆ. ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿಯು ಬರೋಬ್ಬರಿ 175 ವಿಧಾನಸಭಾ ಕ್ಷೇತ್ರಗಳಲ್ಲಿ ಒಬಿಸಿ ಹಾಗೂ ಹಿಂದುಳಿದ ಸಮುದಾಯಗಳನ್ನು ಗುರಿಯಾಗಿ ಇರಿಸಿಕೊಂಡು ಮೈಕ್ರೋ (ಸಣ್ಣ ಸಣ್ಣ ಗುಂಪು) ಒಬಿಸಿಗಳಲ್ಲಿ ಜಾಗೃತಿ ಹಾಗೂ ಬಿಜೆಪಿ ಪರವಾದ ಒಲವನ್ನು ಮೂಡಿಸುತ್ತಿದೆ. ಅಂದರೆ, ಬಿಜೆಪಿ ಪರವಾದ ಅಭಿಪ್ರಾಯವನ್ನು ಮೂಡಿಸಲಾಗುತ್ತಿದೆ.
ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ. ಇದನ್ನು ಮಹಾಯುತಿ ಒಕ್ಕೂಟ ಎಂದು ಕರೆಯಲಾಗುತ್ತದೆ. ಈಚೆಗೆ ಮಹಾಯುತಿ ಸರ್ಕಾರವು ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಕೇಂದ್ರ ಒಬಿಸಿ ಪಟ್ಟಿಯಲ್ಲಿ ಏಳು ಹೊಸ ಒಬಿಸಿ ಜಾತಿಗಳನ್ನು ಸೇರಿಸುವುದು ಹಾಗೂ ಆದಾಯ ಮಿತಿಯನ್ನು 8 ಲಕ್ಷ ರೂಪಾಯಿಯಿಂದ 12 ಲಕ್ಷಕ್ಕೆ ಹೆಚ್ಚಳ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು.

ಇನ್ನು ಮಹಾರಾಷ್ಟ್ರದಲ್ಲಿ ಒಬಿಸಿಯಲ್ಲಿ 341 ಜಾತಿಗಳು/ಉಪಜಾತಿಗಳನ್ನು ಒಳಗೊಂಡಿವೆ. ಇವುಗಳಲ್ಲಿ, ಮಾಲಿ, ಧಂಗರ್ ಮತ್ತು ವಂಜಾರಿಗಳು ಪ್ರಮುಖವಾಗಿವೆ. ಅಲ್ಲದೇ ಹೆಚ್ಚು ಜನಸಂಖ್ಯೆ ಇರುವ ಪ್ರಮುಖ ಸಮುದಾಯಗಳಲ್ಲಿ ಈ ಸಮುದಾಯಗಳೂ ಸೇರಿವೆ.
ಬಿಜೆಪಿ ಒಬಿಸಿ ಮಂಚ್ ಅಧ್ಯಕ್ಷ ಪ್ರಕಾಶ್ ಶೆಂಜೆ ಅವರು, ಜಾರಂಗೆ-ಪಾಟೀಲ ಸಮುದಾಯವು ಮರಾಠ ಮೀಸಲಾತಿಯನ್ನು ಒಬಿಸಿ ಕೋಟಾದಲ್ಲಿ ನೀಡುವಂತೆ ಮನವಿ ಮಾಡಿದ್ದವು. ಇದು ಒಬಿಸಿ ಸಮುದಾಯಗಳ ಒಳಗೆ ಅಸಮಾಧಾನಕ್ಕೂ ಕಾರಣವಾಗಿತ್ತು. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಾತಿ ಹಾಗೂ ಮೀಸಲಾತಿ ವಿಚಾರವು ಪ್ರಮುಖ ವಿಷಯವಾಗಲಿದೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ಎಲ್ಲಾ ಪಕ್ಷಗಳು ಅಧಿಕಾರ ನಡೆಸಿವೆ. ಇಲ್ಲಿ ಸರ್ಕಾರ ಬೀಳುವುದು, ಹೊಸ ಸರ್ಕಾರ ರಚನೆಯಾಗುವುದು ಕಾಮನ್ ಎನ್ನುವಂತೆ ಇದೆ. ದೇಶದ ವಿವಿಧ ರಾಜ್ಯಗಳಲ್ಲಿ ಒಂದು ರಾಜಕೀಯವಾದರೆ, ಮಹಾರಾಷ್ಟ್ರ ರಾಜಕೀಯವೇ ಒಂದು ಎನ್ನುವಂತಿದೆ.
ಇನ್ನು ವಂಚಿತ್ ಬಹುಜನ ಅಘಾಡಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಮಹಾರಾಷ್ಟ್ರದಲ್ಲಿ ಮರಾಠರು ಮತ್ತು ಒಬಿಸಿಗಳ ನಡುವಿನ ಧ್ರುವೀಕರಣವು ಅಪಾಯಕಾರಿ ಮಟ್ಟವನ್ನು ತಲುಪಿದೆ ಎಂದು ಹೇಳಿದ್ದಾರೆ. ಅಲ್ಲದೇ ಇದು ಮಹಾರಾಷ್ಟ್ರದ ಸಾಮಾಜಿಕ ರಚನೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಮಹಾರಾಷ್ಟ್ರ ರಾಜಕೀಯವು ಮರಾಠರು ಹಾಗೂ ಒಬಿಸಿಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಅಭಿಪ್ರಾಯ ಮೂಡಲು ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯ ಈ ಮೈಕ್ರೋ ಪ್ಲಾನಿಂಗ್ ಕಾಂಗ್ರೆಸ್ ಮೈತ್ರಿ ಪಕ್ಷಗಳ ನಿದ್ದೆಗೆಡಿಸಿವೆ.
ಮರಾಠ ಸಮುದಾಯ ನಿರ್ಣಾಯಕ
ಮಹಾರಾಷ್ಟ್ರ ರಾಜಕೀಯದಲ್ಲಿ ಮರಾಠ ಸಮುದಾಯವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 288 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದ 160ಕ್ಕೂ ಹೆಚ್ಚು ಮರಾಠ ಸಮುದಾಯದ ಶಾಸಕರು ಗೆದಿದ್ದಾರೆ. ಇನ್ನು 2024 ರ ಲೋಕಸಭೆ ಚುನಾವಣೆಯಲ್ಲಿ 48 ಸಂಸದರಲ್ಲಿ ಮರಾಠ ಸಮುದಾಯಕ್ಕೆ ಸೇರಿದವರು 30 ಪ್ಲಸ್ ಇದ್ದಾರೆ. ರಾಜ್ಯ ರಾಜಕೀಯದಲ್ಲಿ ಮರಾಠರ ಪ್ರಾಬಲ್ಯವು ತೋರಿಸುತ್ತದೆ. ಈ ಬಾರಿಯೂ ಮರಾಠ ಸಮುದಾಯವು ನಿರ್ಣಾಯಕವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications