Maharashtra Assembly Election 2024: ಮಹಾರಾಷ್ಟ್ರ: "ಮಹಾ ಇತಿಹಾಸ" ಸೃಷ್ಟಿಸಿದ ಪಕ್ಷಗಳಿಗೆ ಈಗ ಅಸ್ತಿತ್ವದ ಪ್ರಶ್ನೆ, ಯಾಕೆ
ಮಹರಾಷ್ಟ್ರ ವಿಧಾನಸಭೆ ಚುನಾವಣೆ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಮಾತ್ರವಲ್ಲ ಅಲ್ಲಿನ ಸ್ಥಳೀಯ ಹಾಗೂ ಸಣ್ಣ ಪಕ್ಷಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಿದ್ದ ಶಿವಸೇನಾ ಹಾಗೂ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯ ನಾಯಕರಿಗಂತೂ ಇದು ಅತ್ಯಂತ ನಿರ್ಣಾಯಕ ಚುನಾವಣೆ ಯಾಕೆ ಎನ್ನುವ ವಿವರ ಇಲ್ಲಿದೆ.
ಮಹರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಲ್ಲ ಪಕ್ಷಗಳಿಗೂ ನಿರ್ಣಾಯಕವಾಗಿದೆ. ಆದರೆ, ಶಿವಸೇನಾ (ಯುಬಿಟಿ ಉದ್ಧವ್ ಠಾಕ್ರೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್ಸಿಪಿ ಶರದ್ ಪವರ್ ಬಣ)ನಾಯಕರಾದ ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆ ನಾಯಕರಿಗೆ ಇದು ಅತ್ಯಂತ ನಿರ್ಣಾಯಕ ಚುನಾವಣೆಯಾಗಿದೆ.

ಕಳೆದ ಐದು ವರ್ಷದಲ್ಲಿ ಮಹಾರಾಷ್ಟ್ರ ರಾಜಕೀಯದಲ್ಲಿ ಹಲವು ಹೈಡ್ರಾಮಗಳು ನಡೆದು ಹೋಗಿವೆ. ಅವುಗಳಲ್ಲಿ ಮುಖ್ಯವಾಗಿ ಎರಡು ಪ್ರಮುಖ ಪಕ್ಷಗಳ ವಿಭಜನೆ. ಈ ಪಕ್ಷಗಳು ಮಹಾರಾಷ್ಟ್ರದ ಇತಿಹಾಸದಲ್ಲಿ ತಮ್ಮದೇ ದಾಖಲೆಗಳನ್ನು ಸೃಷ್ಟಿ ಮಾಡಿವೆ. ಈ ಪಕ್ಷಗಳು ಇಲ್ಲದೆ ಮಹಾರಾಷ್ಟ್ರ ರಾಜಕೀಯವನ್ನು ನೆನಪಿಸಿಕೊಳ್ಳುವುದು ಸಹ ಕಷ್ಟ ಅನಿಸುವಂತಹ ವಾತಾವರಣ ಇದೆ. ಆದರೆ, ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಗಳು ವಿಭಜನೆಯಾಗಿದೆ. ಈ ಎರಡೂ ಪಕ್ಷಗಳು ವಿಭಜನೆಯಾದ ಮೇಲೆ ಒಂದು ಬಣ ಮಹಾ ವಿಕಾಸ ಅಘಾಡಿಯಲ್ಲೂ ಇನ್ನೊಂದು ಬಣವು ಮಹಾಯುತಿಯಲ್ಲೂ ಗುರುತಿಸಿಕೊಂಡಿವೆ.
ಮಹಾಯುತಿ ಎಂದರೆ ಬಿಜೆಪಿ, ಶಿವಸೇನಾ (ಏಕನಾಥ್ ಶಿಂಧೆ ಬಣ) ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಅಜಿತ್ ಪವಾರ್ ಬಣ)ವಾಗಿದೆ. ಈ ಪಕ್ಷ ಇದೀಗ ಮಹಾರಾಷ್ಟ್ರದಲ್ಲಿ ಆಡಳಿತರೂಢ ಪಕ್ಷವಾಗಿದೆ. ಮಹಾವಿಕಾಸ ಅಘಾಡಿ ಎನ್ನುವುದು ವಿರೋಧ ಪಕ್ಷಗಳ ಒಕ್ಕೂಟವಾಗಿದ್ದು, ಇದರಲ್ಲಿ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಹಾಗೂ ಎನ್ಸಿಪಿ (ಶರದ್ ಪವಾರ್) ಪಕ್ಷಗಳು ಇವೆ.
ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರದಲ್ಲಿ ಅತ್ಯಂತ ನಿರ್ಣಾಯಕ ಪಕ್ಷಗಳು ಎನ್ನುವ ಖ್ಯಾತಿಯನ್ನೇ ಗಳಿಸಿವೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಶರದ್ ಪವಾರ್ (ಬಣ) ಅವರು ಮಹಾರಾಷ್ಟ್ರದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದರು. ಅಲ್ಲದೇ ಉದ್ಧವ್ ಠಾಕ್ರೆ ಅವರು ಸಹ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಶರದ್ ಪವಾರ್ ಅವರು ರಾಷ್ಟ್ರ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದು. ರಕ್ಷಣಾ ಸಚಿವರೂ ಆಗಿದ್ದರು. ಆದರೆ, ಈ ಎರಡೂ ಪಕ್ಷಗಳು ವಿಭಜನೆಯಾದ ಮೇಲೆ ಪ್ರಮುಖ ನಾಯಕರು ಆಡಳಿತ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.
ಪಕ್ಷಗಳ ವಿಭಜನೆ ಹಾಗೂ ಪ್ರಮುಖ ನಾಯಕರು ಪಕ್ಷ ಬಿಟ್ಟಿರುವುದು ಇದೀಗ ಶರದ್ ಪವಾರ್ ಹಾಗೂ ಉದ್ಧವ್ ಠಾಕ್ರೆ ಅವರು ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವುದು ಮಾತ್ರವಲ್ಲ. ತಮ್ಮ ರಾಜಕೀಯ ಭವಿಷ್ಯ ಹಾಗೂ ಅಸ್ತಿತ್ವವನ್ನೂ ಉಳಿಸಿಕೊಳ್ಳುವ ಸವಾಲು ಇದೆ.
ಮಹಾರಾಷ್ಟ್ರ ಚುನಾವಣೆ: ಇನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ನವೆಂಬರ್ 20ರಂದು ಒಂದೇ ಹಂತದಲ್ಲಿ ನಡೆಯಲಿದೆ. ನವೆಂಬರ್ 23ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಕ್ಷೇತ್ರಗಳಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications