Maharashtra Assembly Elections 2024: ಮಹಾರಾಷ್ಟ್ರ ಚುನಾವಣೆ, ಅಮಿತ್‌ ಶಾ ಮಹತ್ವದ ಕರೆ!

ಮುಂಬೈ, ಸೆಪ್ಟೆಂಬರ್ 25: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ ದಿನಾಂಕದ ಕುರಿತು ಕುತೂಹಲ ಮೂಡಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂಬುದು ಸದ್ಯದ ಸುದ್ದಿ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಸೆಪ್ಟೆಂಬರ್ 27, 28ರಂದು ಮುಂಬೈಗೆ ಭೇಟಿ ನೀಡಲಿದ್ದು, ಚುನಾವಣಾ ತಯಾರಿ ಕುರಿತು ಸಭೆಗಳನ್ನು ನಡೆಸಲಿದ್ದಾರೆ. ಅಕ್ಟೋಬರ್‌ನಲ್ಲಿ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ.

ಕೇಂದ್ರ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಮಹಾರಾಷ್ಟ್ರ ಚುನಾವಣೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಮಹತ್ವದ ಕರೆಯೊಂದನ್ನು ನೀಡಿದ್ದಾರೆ. "ಮುಂಬರುವ ಚುನಾವಣೆಯಲ್ಲಿ ಪ್ರತಿ ಬೂತ್‌ನಲ್ಲಿ ಶೇ 10ರಷ್ಟು ಹೆಚ್ಚು ಮತದಾನವಾಗುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು" ಎಂದು ಹೇಳಿದ್ದಾರೆ.

Maharashtra Elections 2024 Amit Shah Calls For Minimum 10 Per Cent Increase In Voting At Each Booth

ನಾಗ್ಪುರದಲ್ಲಿ ಅಮಿತ್ ಶಾ ಮಹಾರಾಷ್ಟ್ರ ರಾಜ್ಯದ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಪಕ್ಷಗಳ ಸಭೆಯನ್ನು ನಡೆಸಿದರು. ಮಹಾರಾಷ್ಟ್ರ ರಾಜ್ಯದ ಚುನಾವಣೆ ತಯಾರಿ ಕುರಿತು ಪರಿಶೀಲಿಸಲು ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ.

ಅಮಿತ್ ಶಾ ಮಹತ್ವದ ಸಭೆ: ಅಮಿತ್ ಶಾ ವಿದರ್ಭ ಪ್ರಾಂತ್ಯದ 62 ವಿಧಾನಸಭಾ ಕ್ಷೇತ್ರಗಳ ಪ್ರಮುಖ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಚುನಾವಣೆಯ ವೇಳೆ ರಾಮ ಮಂದಿರ ನಿರ್ಮಾಣ, ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು, ತ್ರಿಬಲ್ ತಲಾಖ್ ರದ್ದು ಕುರಿತು ಮತದಾರರಿಗೆ ಅರಿವು ಮೂಡಿಸಿ, ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಬೇಕು ಎಂದು ಹೇಳಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವಿದರ್ಭ ಪ್ರಾಂತ್ಯದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅಮಿತ್ ಶಾ ಕರೆ ನೀಡಿದ್ದಾರೆ. ವಿದರ್ಭ ಪ್ರಾಂತ್ಯದ ಮೂಲಕವೇ ಪಕ್ಷದ ಗೆಲುವಿನ ಅಭಿಯಾನ ಆರಂಭವಾಗಬೇಕಿದೆ. ಇದಕ್ಕಾಗಿ ಹೇಗೆ ಕಾರ್ಯ ನಿರ್ವಹಣೆ ಮಾಡಬೇಕು? ಎಂದು ಅಮಿತ್ ಶಾ ನಾಯಕರಿಗೆ ಸೂಚನೆಗಳನ್ನು ನೀಡಿದ್ದಾರೆ.

ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ವಿದರ್ಭ ಪ್ರಾಂತ್ಯದಲ್ಲಿಯೇ 62 ಸೀಟುಗಳಿವೆ. ಈ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಮತದಾರರಿಗೆ ತಲುಪಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಆದಂತೆ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆ ಆಗಬಾರದು ಎಂದು ಅಮಿತ್ ಶಾ ಹೇಳಿದ್ದಾರೆ.

ಮೈತ್ರಿಕೂಟದ ಪಕ್ಷಗಳಿಂದ ಯಾರೇ ಸಹ ಅಭ್ಯರ್ಥಿಯಾದರೂ ಎಲ್ಲಾ ಕಾರ್ಯಕರ್ತರು ಅದೇ ಉತ್ಸಾಹದಿಂದ ಕೆಲಸ ಮಾಡಬೇಕು. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ವಿರೋಧಿಗಳಿಗೆ ತಲುಪಿಸಬೇಕು ಎಂದು ಕರೆ ನೀಡಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ವಿದರ್ಭ ಪ್ರಾಂತ್ಯದ 44 ಸೀಟುಗಳ ಪೈಕಿ ಬಿಜೆಪಿ 29 ಸೀಟುಗಳನ್ನು ಗೆದ್ದಿತ್ತು. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದಿರುವುದು ಕೇವಲ 2 ಸೀಟು. ಆದ್ದರಿಂದ ಅಮಿತ್ ಶಾ ಪ್ರಾಂತ್ಯದ ಬಿಜೆಪಿ ನಾಯಕರ ಜೊತೆ ವಿಧಾನಸಭೆ ಚುನಾವಣೆ ಕುರಿತು ಸಭೆಯನ್ನು ನಡೆಸುತ್ತಿದ್ದಾರೆ. ಆದರೆ ಈ ಸಭೆಗೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಪ್ರಮುಖ ನಾಯಕರು ನಿಗದಿತ ಕಾರ್ಯಕ್ರಮಗಳ ಕಾರಣ ಗೈರಾಗಿದ್ದರು.

ಚುನಾವಣೆ ಹತ್ತಿರವಾಗುತ್ತಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. 'ಮಹಾಯುತಿ' ಮೈತ್ರಿಕೂಟದ ಭಾಗವಾಗಿಯೇ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಪ್ರತಿ ಕಾರ್ಯಕರ್ತರು ಸಹ ಯಾವ ಪಕ್ಷದ ಅಭ್ಯರ್ಥಿ ನಿಂತರೂ ಅವರ ಪರವಾಗಿ ಕೆಲಸ ಮಾಡಬೇಕು ಎಂದು ಅಮಿತ್ ಶಾ ಸೂಚನೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+