ಮಹಾರಾಷ್ಟ್ರ ಚುನಾವಣೆ ರೋಚಕ ತಿರುವು: ಚಿಕ್ಕಪ್ಪ vs ಸಹೋದರ ಮಗ ಸ್ಪರ್ಧೆ!
ಮಹಾರಾಷ್ಟ್ರ ಚುನಾವಣೆ ರೋಚಕ ತಿರುವು ಪಡೆದುಕೊಂಡಿದೆ. ಮಹಾರಾಷ್ಟ್ರ ಚುನಾವಣೆ ಮುಂದಿನ ತಿಂಗಳು 20ರಂದು ನಡೆಯಲಿದೆ. ಈ ಬಾರಿಯ ಮಹಾರಾಷ್ಟ್ರ ಚುನಾವಣೆ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಭಾವಿ ರಾಜಕೀಯ ಪವರ್ ಕುಟುಂಬದಲ್ಲೇ ಸ್ಪರ್ಧೆ ಏರ್ಪಟ್ಟಿದ್ದು, ಚಿಕ್ಕಪ್ಪ ಹಾಗೂ ಸಹೋದರ ಮಗ ಒಂದೇ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಹಾರಾಷ್ಟ್ರ ಚುನಾವಣೆ ಬದಲಾಗಿದೆ.
ಮಹಾರಾಷ್ಟ್ರ ರಾಜಕೀಯದಲ್ಲಿ ಇತಿಹಾಸ ಸೃಷ್ಟಿ ಮಾಡಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯು ಈಚೆಗೆ ಇಬ್ಭಾಗವಾಗಿದೆ. ಮಹಾರಾಷ್ಟ್ರದಲ್ಲಿ ಈಗ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಒಂದು ಬಣ (ಮೂಲ) ಶರದ್ ಪವಾರ್ ಅವರು ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಇದ್ದರೆ, ಆಡಳಿತ ಪಕ್ಷದಲ್ಲಿ ಅಜಿತ್ ಪವಾರ್ ಇದ್ದಾರೆ. ಶರದ್ ಪವಾರ್ ಅವರು ಹಿರಿಯ ರಾಜಕಾರಣಿ. ಕಾಂಗ್ರೆಸ್ನಿಂದ ಹೊರ ಬಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶುರು ಮಾಡಿದ್ದರು. ಕೇಂದ್ರ ಸಚಿವ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಆದರೆ, ಅಜಿತ್ ಪವಾರ್ ಹಾಗೂ ಶರದ್ ಪವಾರ್ ನಡುವೆ ಜಿದ್ದಾಜಿದ್ದಿನ ರಾಜಕೀಯ ಇದೆ.

ಈ ಇಬ್ಬರು ಪ್ರಭಾವಿ ರಾಜಕಾರಣಗಳು ಒಂದೇ ಕುಟುಂಬದವರು ಸಹ. ಶರದ್ ಪವಾರ್ ಅವರು ಅಜಿತ್ ಪವಾರ್ ಅವರಿಗೆ ಚಿಕ್ಕಪ್ಪ ಆಗುತ್ತಾರೆ. ಎರಡು ವರ್ಷಗಳ ಹಿಂದೆ ಅಜಿತ್ ಪವಾರ್ ಅವರು ಮೂಲ ನ್ಯಾಷನಲಿಸ್ಟ್ಕಾಂಗ್ರೆಸ್ ಪಾರ್ಟಿಯಿಂದ ಬೇರ್ಪಟ್ಟು ಆಡಳಿತ ಪಕ್ಷ ಹಾಗೂ ಬಿಜೆಪಿ ಮೈತ್ರಿ ಪಕ್ಷಗಳೊಂದಿಗೆ ಕೈಜೋಡಿಸಿದ್ದರು. ಇದೀಗ ಅಜಿತ್ ಪವಾರ್ ಸೋಲಿಸಲು ಶರದ್ ಪವಾರ್ ಅವರು ತಮ್ಮ ಮೊಮ್ಮಗನನ್ನೇ ಅಖಾಡಕ್ಕೆ ಇಳಿಸಿದ್ದಾರೆ.
ಈ ಮೂಲಕ ಕುಟುಂಬದ ನಡುವೆಯೇ ಮಹಾರಾಷ್ಟ್ರದಲ್ಲಿ ಭಾರೀ ರಾಜಕೀಯ ಜಿದ್ದಾಜಿದ್ದಿ ಶುರುವಾಗುತ್ತಿದೆ. ಅಜಿತ್ ಪವಾರ್ ಅವರು ಶರದ್ ಪವಾರ್ ಅವರ ಮೊಮ್ಮಗ ಯುಗೇಂದ್ರ ಪವಾರ್ ಅವರ ವಿರುದ್ಧ ಸ್ಪರ್ಧೆ ಮಾಡುವಂತಾಗಿದೆ. ಯುಗೇಂದ್ರ ಪವಾರ್ ಅಜಿತ್ ಪವಾರ್ ಅವರ ಸಹೋದರ ಶ್ರೀನಿವಾಸ್ ಪವಾರ್ ಪುತ್ರನಾಗಿದ್ದಾರೆ.
ಜಿದ್ದಾಜಿದ್ದಿನ ಕಣವಾದ ಬಾರಾಮತಿ: ಮಹಾರಾಷ್ಟ್ರದ ಬಾರಾಮತಿ ವಿಧಾನಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ. ಈ ಕ್ಷೇತ್ರದಿಂದ ಅಜಿತ್ ಪವಾರ್ ಅವರು ಸ್ಪರ್ಧಿಸುತ್ತಿದ್ದಾರೆ. ಅವರು ಈಗ ಆಡಳಿತರೂಢ ಪಕ್ಷದಲ್ಲಿದ್ದು, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಅವರ ಸಹೋದರ ಮಗನ ವಿರುದ್ಧ ಅಂದರೆ ಯುಗೇಂದ್ರ ಪವಾರ್ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಸಿನಿಮಾಗಿಂತ ಕಮ್ಮಿ ಇಲ್ಲ: ಮಹಾರಾಷ್ಟ್ರದಲ್ಲಿ ಈ ಬಾರಿ ಚುನಾವಣೆ ಉಳಿದ ವರ್ಷಗಳಿಗಿಂತ ಭಿನ್ನವಾಗಿ ಹಾಗೂ ಸಿನಿಮಾದಂತೆ ಇದೆ. ಪಕ್ಷ ತೊರೆದು ಪಕ್ಷವನ್ನು ದುರ್ಬಲ ಮಾಡಿರುವ ಅಜಿತ್ ಪವಾರ್ ಮೇಲೆ ಹೇಗಾದರೂ ಸೇಡು ತೀರಿಸಿಕೊಳ್ಳಬೇಕು ಎಂದು ಶರದ್ ಪವಾರ್ ಪ್ಲಾನ್ ಮಾಡುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಶಿವಸೇನೆ ಪಕ್ಷವೂ ವಿಭಜನೆಯಾಗಿದೆ. ಬಾಳಾಠಾಕ್ರೆ ಹಾಗೂ ಶಿವಸೇನಾ ಪಾರ್ಟಿಗೆ ಮಹಾರಾಷ್ಟ್ರದಲ್ಲಿ ದೊಡ್ಡ ಇತಿಹಾಸವೇ ಇದೆ.
ಬಾಳಾಠಾಕ್ರೆ ಅವರು ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲ ಹಾಗೂ ಮಹಾರಾಷ್ಟ್ರ ಸ್ವಾಭಿಮಾನವನ್ನು ಎತ್ತಿಹಿಡಿದವರಾಗಿದ್ದರು. ಆದರೆ, ಅಂತಹ ಶಿವಸೇನಾ ಪಾರ್ಟಿಯೇ ಇದೀಗ ಇಬ್ಭಾಗವಾಗಿ ತನ್ನ ಹಳೆಯ ಅಸ್ತಿತ್ವವನ್ನು ಕಳೆದುಕೊಂಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications