Maharashtra: ದೇವೇಂದ್ರ ಫಡ್ನವಿಸ್ ಸಿ.ಎಂ & ಏಕನಾಥ್ ಶಿಂಧೆ ಡಿಸಿಎಂ ಫಿಕ್ಸ್, ಅಜಿತ್ ಪವಾರ್ ಸಸ್ಪೆನ್ಸ್!
Maharashtra government formation: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿವಾಗುತ್ತಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು ಭರ್ಜರಿ ಜಯಗಳಿಸಿದ್ದು, ಇದೀಗ ಎರಡನೇ ಬಾರಿ ಮಹಾಯುತಿಯು ಅಧಿಕಾರ ರಚನೆಗೆ ದಾಪುಗಾಲಿಟ್ಟಿದೆ. ಮೂಲಗಳ ಪ್ರಕಾರ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವರು ಆಯ್ಕೆಯಾಗುವುದು ಬಹುತೇಕ ಫಿಕ್ಸ್ ಆಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿಯು ಧೂಳಿಪಟವಾಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶವು ಇದೇ 23ರಂದು ಪ್ರಕಟವಾಗಿದ್ದು, ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ.
ಮಹಾರಾಷ್ಟ್ರದಲ್ಲಿ ಈ ಹಿಂದೆ ಯಾವುದೇ ಮೈತ್ರಿ ಪಕ್ಷಗಳು ಮಾಡದ ಸಾಧನೆಯನ್ನು ಮಹಾಯುತಿ ಮೈತ್ರಿಕೂಟ ಮಾಡಿದೆ. ಇದೀಗ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ (ಶಿವಸೇನಾ ಬಣದ ನಾಯಕ) ಅವರು ಉಪ ಮುಖ್ಯಮಂತ್ರಿಯಾಗಿ ಆಯ್ಕೆಯುಗುವುದು ಬಹುತೇಕ ಖಚಿತವಾಗಿದೆ. ಇನ್ನು ಅಜಿತ್ ಪವಾರ್ (ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಬಣ) ಅವರಿಗೆ ಯಾವ ಸ್ಥಾನ ಸಿಗಲಿದೆ ಎನ್ನುವುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ದೇವೇಂದ್ರ ಫಡ್ನವಿಸ್ಗೆ ಒಲಿದ ಅದೃಷ್ಟ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗುತ್ತಿದ್ದು, ಅವರು ಈ ಹಿಂದೆಯೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಕಳೆದ ಬಾರಿ ಅಧಿಕಾರದಲ್ಲಿ ಮಹಾಯುತಿ ಸರ್ಕಾರದಲ್ಲಿ ಕೊನೆಯ ಹಂತದಲ್ಲಿ ಅವರು ಉಪ ಮುಖ್ಯಮಂತ್ರಿಯಾಗಿದ್ದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನೀಡಿದಾಗ ಹಾಗೂ ಬಿಜೆಪಿ ಸೋಲು ಕಂಡಾಗಲೂ ದೇವೇಂದ್ರ ಫಡ್ನವಿಸ್ ಅವರು ಬಿಜೆಪಿ ನಾಯಕತ್ವವನ್ನು ವಹಿಸಿಕೊಂಡು ಗಟ್ಟಿಯಾಗಿ ಬಿಜೆಪಿಯನ್ನು ಮುನ್ನಡೆಸಿದ್ದರು. ಅಷ್ಟು ಮಾತ್ರವಲ್ಲ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ನ ಬೆಂಬಲವೂ ದೇವೇಂದ್ರ ಫಡ್ನವಿಸ್ ಅವರಿಗೆ ಇದೆ.
ಏಕನಾಥ್ ಶಿಂಧೆ: ಇನ್ನು ಏಕನಾಥ್ ಶಿಂಧೆ ಅವರು ಸಹ ಮಹಾಯುತಿ ಮೈತ್ರಿಕೂಟದಲ್ಲಿ ಪ್ರಮುಖ ಸ್ಥಾನವನ್ನು ವಹಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅವರ ಶಿವಸೇನಾ ಪಕ್ಷವು 57 ಸ್ಥಾನಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಮಹಾರಾಷ್ಟ್ರದಲ್ಲಿ ಅವರು ಎರಡೂವರೆ ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದರು. ಮಹಾಯುತಿ ಮೈತ್ರಿ ಪಕ್ಷಗಳನ್ನು ಒಂದುಗೂಡಿಸಿ ತೆಗೆದುಕೊಂಡು ಹೋಗುವ ಚಾಣಾಕ್ಷತೆ ಅವರಿಗೆ ಇದೆ. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಅದು ಈ ಬಾರಿ ಅವರಿಗೆ ವರದಾನವಾಗಿದೆ.

ಶಿವಸೇನಾ (ಏಕನಾಥ್ ಶಿಂಧೆ ಬಣ)ದ ಡಿಮ್ಯಾಂಡ್ಗಳೇನು
ಏಕಾನಾಥ್ ಶಿಂಧೆ ಈ ಬಾರಿಯ ಸರ್ಕಾರ ರಚನೆಯಲ್ಲಿ ರೆಬಲ್ ಆಗಲಿದ್ದಾರೆಯೇ ಎನ್ನುವ ಪ್ರಶ್ನೆ ಎದುರಾಗಿತ್ತು. ಈ ರೀತಿ ಇರುವಾಗಲೇ ಬಿಜೆಪಿ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರವೇಶಿಸಿದ್ದರು. ಹೀಗಾಗಿ, ಈ ಗೊಂದಲಗಳಿಗೆ ತೆರೆ ಬಿದ್ದಿದೆ. ಇದೀಗ ಅವರ ಪಕ್ಷಕ್ಕೆ 12 ಸಚಿವ ಸ್ಥಾನ ಹಾಗೂ ಸ್ಪೀಕರ್ ಹುದ್ದೆಯನ್ನು ನೀಡಬೇಕು.
ಗೃಹ ಸಚಿವ ಹಾಗೂ ನಗರಾಭಿವೃದ್ಧಿ ಸೇರಿದಂತೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಅಜಿತ್ ಪವಾರ್ ಅವರೂ ಸಹ ಮಹಾಯುತಿಯ ಮೈತ್ರಿ ಭಾಗವಾಗಿದ್ದು, ಅವರಿಗೆ ಯಾವ ಹುದ್ದೆ ನೀಡಲಾಗುತ್ತದೆ. ಈ ಬಾರಿಯೂ ಮಹಾರಾಷ್ಟ್ರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎನ್ನುವ ಕುತೂಹಲಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications