ಭಾನುವಾರ ಮಹಾರಾಷ್ಟ್ರ, ಹರ್ಯಾಣ ಫಲಿತಾಂಶ
ಬೆಂಗಳೂರು, ಅ.18 : ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ ನಡೆಯಲಿದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ. ಚುನಾವಣೋತ್ತರ ಸಮೀಕ್ಷೆಗಳು ಉಭಯ ರಾಜ್ಯಗಳಲ್ಲೂ ಕೇಸರಿ ರಂಗು ಚೆಲ್ಲಲಿದೆ ಎಂದು ಹೇಳಿದ್ದು, ಜನರು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ.
[ಮಹಾರಾಷ್ಟ್ರ, ಹರಿಯಾಣ ಫಲಿತಾಂಶ ಅಪ್ದೇಟ್ಸ್]
288 ಕ್ಷೇತ್ರಗಳ ಮಹಾರಾಷ್ಟ್ರ ಮತ್ತು 90 ಕ್ಷೇತ್ರಗಳ ಹರ್ಯಾಣ ವಿಧಾನಸಭೆಗೆ ಅ.15ರಂದು ಚುನಾವಣೆ ನಡೆದಿತ್ತು. ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, 11 ಗಂಟೆಯ ವೇಳೆಗೆ ಫಲಿತಾಂಶ ಏನಾಗಬಹುದು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. [ಮತದಾನೋತ್ತರ ಸಮೀಕ್ಷೆ ವಿವರ ಇಲ್ಲಿದೆ]

ಅ.15ರಂದು ನಡೆದ ಚುನಾವಣೆಯಲ್ಲಿ ಹರ್ಯಾಣ ರಾಜ್ಯದಲ್ಲಿ ದಾಖಲೆಯ 76.54ರಷ್ಟು ಮತ್ತು ಮಹಾರಾಷ್ಟ್ರದಲ್ಲಿ 63.13ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಇದು ಮಹತ್ವದ ಚುನಾವಣೆಯಾಗಿದ್ದರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ತಮ್ಮ ಶಕ್ತಿ ಏನೆಂದು ಚುನಾವಣೆ ಮೂಲಕ ತೋರಿಸಲಿವೆ.[ಮೈತ್ರಿಗೆ ಶಿವಸೇನಾ ಓಕೆ, ಬಿಜೆಪಿ ಕೇಳ್ತಿದೆ ಏಕೆ?]
ಉಭಯ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆದ್ದರಿಂದ ಮರಳಿ ಅಧಿಕಾರದ ಗದ್ದುಗೆ ಏರುತ್ತೇವೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೂತನ ಅಧ್ಯಕ್ಷ ಅಮಿತ್ ಶಾ ಚಾಣಾಕ್ಯ ತಂತ್ರಗಾರಿಕೆ ಹೇಗೆ ಕೆಲಸ ಮಾಡಿದೆ? ಎಂದು ಭಾನುವಾರ ತಿಳಿಯಲಿದೆ.
ಚುನಾವಣೆಗೆ ಮುಂಚೆಯೇ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆಗೆ ಮೈತ್ರಿ ಕಡಿದುಕೊಂಡಿರುವ ಬಿಜೆಪಿಗೆ 150 ರಿಂದ 155 ಸ್ಥಾನಗಳು ಬರಬಹುದು ಎಂದು ಸಮೀಕ್ಷೆಗಳು ಹೇಳುತ್ತಿವೆ. ಗೋಪಿನಾಥ್ ಮುಂಡೆ ಪುತ್ರಿ ಪಂಕಜಾ ಮುಂಡೆ ಹಾಗೂ ದೇವೇಂದ್ರ ಫಡ್ನವೀಸ್ ಹೆಸರುಗಳು ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿವೆ.
ಒನ್ ಇಂಡಿಯಾ ಕನ್ನಡ ಬೆಳಗ್ಗೆ 8 ಗಂಟೆಯಿಂದ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿಯನ್ನು ಓದುಗರಿಗೆ ನೀಡಲಿದೆ. ಚುನಾವಣೆ ಮಾಹಿತಿಯನ್ನು ಟ್ವೀಟರ್ನಲ್ಲಿಯೂ ಪಡೆಯಿರಿ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications