ಅಂಗವಿಕಲರ ಕಲ್ಯಾಣ ಇಲಾಖೆ ಹೊಂದಿದ ಮೊದಲ ರಾಜ್ಯ ಮಹಾರಾಷ್ಟ್ರ
ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರವು ಅಂಗವಿಕಲರ ಕಲ್ಯಾಣಕ್ಕಾಗಿ ಇಲಾಖೆಯನ್ನು ಆರಂಭಿಸಿದ್ದು, ಅದನ್ನು ದಿವ್ಯಾಂಗ್ ಕಲ್ಯಾಣ ಇಲಾಖೆ ಎಂದು ಕರೆಯಲಾಗಿದೆ.
ಅಂಗವಿಕಲರ ಕಲ್ಯಾಣಕ್ಕಾಗಿ ಸ್ವತಂತ್ರ ಇಲಾಖೆ ಹೊಂದಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ. ದಿವ್ಯಾಂಗ ಕಲ್ಯಾಣ ಇಲಾಖೆ ಆರಂಭದೊಂದಿಗೆ ಹಲವು ಪ್ರಶ್ನೆಗಳಿಗೆ ಒಂದೇ ಕಡೆ ಪರಿಹಾರ ದೊರೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರವು ಅಂಗವಿಕಲರ ಕೆಲಸ ಸುಗಮಗೊಳಿಸುವುದಕ್ಕಾಗಿ ಉತ್ತಮ ಹೆಜ್ಜೆ ಇಟ್ಟಿದೆ ಎಂದು ಮುಂಬೈನ ಪ್ರಹಾರ್ ಕ್ರಾಂತಿ ಸಂಘಟನೆಯ ಅಧ್ಯಕ್ಷ ಬಿ ಕೇನ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಅಂಗವಿಕಲರು ತಮ್ಮ ಕೆಲಸ ಕಾರ್ಯಗಳಿಗೆ ಕೆಲವೊಮ್ಮೆ ನಗರಾಭಿವೃದ್ಧಿ ಸಚಿವಾಲಯ, ಕೆಲವೊಮ್ಮೆ ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಸಚಿವಾಲಯ ಉದ್ಯೋಗ, ಪುನರ್ವಸತಿ ಇತ್ಯಾದಿಗಳ ಸಮಸ್ಯೆಗಳಿಗೆ ಓಡಬೇಕಾಗಿತ್ತು. ಈಗ ದಿವ್ಯಾಂಗ ಕಲ್ಯಾಣ ಇಲಾಖೆಯೊಂದಿಗೆ ಅವರಿಗೆ ಒಂದೇ ಸ್ಥಳದಲ್ಲಿ ಎಲ್ಲ ಸೌಲಭ್ಯವು ಸಿಗುತ್ತದೆ ಎಂದು ಕೇನ್ ಹೇಳಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ವಿಕಲಚೇತನರ ಕಲ್ಯಾಣಕ್ಕಾಗಿ ಸ್ವತಂತ್ರ ಇಲಾಖೆಯನ್ನು ಸ್ಥಾಪಿಸುವ ನಿರ್ಧಾರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ವಿಕಲಚೇತನರ ಅಂತಾರಾಷ್ಟ್ರೀಯ ದಿನದ ದಿನದಂದು ರಾಜ್ಯದಲ್ಲಿ ಸ್ವತಂತ್ರ ದಿವ್ಯಾಂಗ ಕಲ್ಯಾಣ ಇಲಾಖೆಯನ್ನು ಘೋಷಿಸಲಾಯಿತು. ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಾಖೆ ಮೂಲಕ ವಿಕಲಚೇತನ ಬಂಧುಗಳು ವರ್ಷಗಟ್ಟಲೇ ನೀಡಿದ ಹೋರಾಟಕ್ಕೆ ನ್ಯಾಯ ದೊರಕಿಸಿಕೊಡಲಾಗಿದೆ ಎಂದು ಶಿಂಧೆ ಟ್ವೀಟ್ ಮಾಡಿದ್ದಾರೆ.

ಏಕನಾಥ್ ಶಿಂಧೆ ಸೇರಿದಂತೆ ಹಲವಾರು ಶಿವಸೇನಾ ಶಾಸಕರು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದು ಮಾಜಿ ಮುಖ್ಯ ಮಂತ್ರಿ ದೇವೇಂದ್ರ ಫಡ್ನವಿಸ್ ಜೊತೆ ಸೇರಿ ಜೂನ್ 30ರಂದು ತಮ್ಮದೆ ಸಮ್ಮಿಶ್ರ ಸರ್ಕಾರ ರಚಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications