ಈ ಕಾರಣಕ್ಕೆ ದಕ್ಷಿಣ ಭಾರತದೊಂದಿಗೆ ಕೈಜೋಡಿಸಿದ ಮಹಾರಾಷ್ಟ್ರ!
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಬೃಹತ್ ಅಭಿಯಾನ ಶುರುವಾಗಿದೆ. ಭಾಷೆಯಾಗಿ ನಾವು ಹಿಂದಿಯನ್ನು ಗೌರವಿಸುತ್ತೇವೆ. ಆದರೆ, ನಮ್ಮ ಮೇಲೆ ಹೇರಿಕೆ ಮಾಡಬೇಡಿ. ಕರ್ನಾಟಕ ಸೇರಿದಂತೆ ಆಯಾ ರಾಜ್ಯಗಳ ಭಾಷೆಯನ್ನು ಬಳಸಬೇಕು ಎಂದು ದಕ್ಷಿಣ ಭಾರತೀಯರು ಒತ್ತಾಯಿಸುತ್ತಿದ್ದಾರೆ. ಇದೀಗ ಹಿಂದಿ ಹೇರಿಕೆ ವಿರುದ್ಧದ ಅಭಿಯಾನದಲ್ಲಿ ಮಹಾರಾಷ್ಟ್ರ ಸಹ ಕೈಜೋಡಿಸಿದೆ. ಈ ಮೂಲಕ ಹಿಂದಿ ವಿರುದ್ಧ ಅಭಿಯಾನಕ್ಕೆ ಇನ್ನಷ್ಟು ಬಲ ಬಂದಂತೆ ಆಗಿದೆ. ಇನ್ನು ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಜನ ತಿರುಗಿ ಬಿದಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಿರುವುದನ್ನು ವಿರೋಧಿಸಲಾಗುತ್ತಿದ್ದು. ಈ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳು ಒಂದಾಗಿವೆ. ಆಂಧ್ರಪ್ರದೇಶ ಸರ್ಕಾರವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾರಣದಿಂದ ಈ ಅಭಿಯಾನದಲ್ಲಿ ಹಿಂದಿದೆಯಾದರೂ, ಅಲ್ಲಿನ ಜನ ಸಹ ಹಿಂದಿ ಹೇರಿಕೆಯ ವಿರುದ್ಧವಾಗಿದ್ದಾರೆ. ಇದೀಗ ದಕ್ಷಿಣ ಭಾರತದ ರಾಜ್ಯಗಳು ಮಾತ್ರವಲ್ಲದೇ ಉತ್ತರ ಭಾರತದ ಕೆಲವು ರಾಜ್ಯಗಳು ಹಾಗೂ ಮಹಾರಾಷ್ಟ್ರ ಸಹ ಹಿಂದಿ ಹೇರಿಕೆ ವಿರುದ್ಧದ ತಮ್ಮ ಅಸಮಾಧಾನವನ್ನು ಹೊರ ಹಾಕಿವೆ. ಈ ಮೂಲಕ ಹಿಂದಿ ಹೇರಿಕೆಯ ವಿರುದ್ಧದ ಅಭಿಯಾನಕ್ಕೆ ದಕ್ಷಿಣ ಭಾರತದ ರಾಜ್ಯಗಳು ವೇದಿಕೆ ಕಲ್ಪಿಸಿದಂತಾಗಿದೆ.

ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆ ವಿರುದ್ಧ ಅಭಿಯಾನ!
ಇನ್ನು ಮಹಾರಾಷ್ಟ್ರದಲ್ಲೂ ಹಿಂದಿ ಹೇರಿಕೆಯ ವಿರುದ್ಧದ ಅಭಿಯಾನ ಶುರುವಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣದ ಸಿಬ್ಬಂದಿ ಹಾಗೂ ಟೆಲಿಕಾಂ ಕಂಪನಿಯ ಸಿಬ್ಬಂದಿ ಹಿಂದಿಯಲ್ಲಿ ಮಾತನಾಡಿದ್ದು. ಇದಕ್ಕೆ ಮರಾಠಿಗರು ವಿರೋಧ ವ್ಯಕ್ತಪಡಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದಲ್ಲಿ ಮರಾಠಿ ಮೊದಲು ಎಂದು ಮರಾಠಿಗರು ಹೇಳುತ್ತಿದ್ದಾರೆ.
ಹೌದು ಇಷ್ಟು ದಿನ ದಕ್ಷಿಣ ಭಾರತಕ್ಕೆ ಸೀಮಿತವಾಗಿದ್ದ ಹಿಂದಿ ಹೇರಿಕೆ ವಿರೋಧಿ ಅಭಿಯಾನವು ಭಾರತದ ವಿವಿಧ ರಾಜ್ಯಗಳಲ್ಲೂ ಶುರುವಾಗಿದೆ. ಮರಾಠಿ ಭಾಷೆಯಲ್ಲಿ ಸೇವೆ ಕೊಡಿ ಹಿಂದಿಯಲ್ಲಿ ಮಾತನಾಡಬೇಡಿ ಎಂದು ಇಲ್ಲಿನ ಜನ ಪ್ರಶ್ನೆ ಮಾಡುವುದಕ್ಕೆ ಶುರು ಮಾಡಿಕೊಂಡಿದ್ದಾರೆ. ಜನ ಪ್ರಶ್ನೆ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜನ ಈ ರಾಜ್ಯದಲ್ಲಿ ಮರಾಠಿ ಭಾಷೆ ಬಳಸದೆ ಇರುವವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಮುಖ್ಯವಾಗಿ ಹಿಂದಿಯಲ್ಲಿ ಮಾತನಾಡುವ ಸರ್ಕಾರಿ ನೌಕರರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ನಾವು ಹೇಳಿದ್ದೂ ಇದೇ ಅಲ್ಲವೇ ?
ಮಹಾರಾಷ್ಟ್ರದಲ್ಲಿ ಮರಾಠಿ ಮಾತನಾಡಬೇಕು. ಮಹಾರಾಷ್ಟ್ರದಲ್ಲಿ ಮರಾಠಿಯೇ ಪ್ರಥಮ ಭಾಷೆ ಅಂತ ಅಲ್ಲಿನ ಜನ ಹೇಳುತ್ತಿದ್ದಾರೆ. ಇನ್ನು ಈ ವೈರಲ್ ವಿಡಿಯೋಗೆ ರಿಯಾಕ್ಟ್ ಮಾಡಿರುವ ಕನ್ನಡಿಗರು ಇಷ್ಟು ದಿನಗಳ ಕಾಲ ನಾವು ಹೇಳಿದ್ದೂ ಅದೇ ಅಲ್ಲವೇ. ನಾವು ಹೇಳಿದಾಗ ನೀವು ಉತ್ತರ ಭಾರತೀಯರು ವಿರೋಧ ಮಾಡುತ್ತಿದ್ದಿರಿ. ಈಗ ಜ್ಞಾನೋದಯವಾಗಿದೆ ಅಂತ ಕನ್ನಡಿಗರು ಹೇಳುತ್ತಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications