ಮಹಾರಾಷ್ಟ್ರ ಭೂಕುಸಿತ: 30ಕ್ಕೂ ಹೆಚ್ಚು ಕುಟುಂಬ ಸಿಲುಕಿರುವ ಶಂಕೆ, 4 ಸಾವು, ಮುಂದುವರಿದ ರಕ್ಷಣಾ ಕಾರ್ಯ
ಮುಂಬೈ, ಜುಲೈ 20: ಮಹಾರಾಷ್ಟ್ರ ರಾಜ್ಯದ ರಾಯಗಢ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಭೂಕುಸಿತ ಸಂಭವಿಸಿದೆ. ಪರಿಣಾಮವಾಗಿ ಘಟನೆಯಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ಮಂದಿ ಮೃತಪಟ್ಟ ಬಗ್ಗೆ ಎಎನ್ಐ ವರದಿ ಮಾಡಿದೆ.
ರಾಯಗಢ ಜಿಲ್ಲೆಯ ಖಲಾಪುರ ಬಳಿ ಈ ಭೂಕುಸಿತ ಸಂಭವಿಸಿದೆ. ಇಲ್ಲಿ ಸಾಕಷ್ಟು ಬುಡಕಟ್ಟು ಜನಾಂಗದ ಮನೆಗಳು ಇವೆ ಎಂದು ತಿಳಿದು ಬಂದಿದೆ. ಇರುವ ಖಲಾಪುರ ಬಳಿ ಈ ಘಟನೆ ನಡೆದಿದೆ. ಘಟನೆ ಜರುಗಿದಾಗಿನಿಂದ ಗುರುವಾರ ಬೆಳಗ್ಗೆವರೆಗೆ ಸುಮಾರು 25 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಒಟ್ಟು ನಾಲ್ವರು ಅಸುನೀಗಿದ್ದು, ಉಳಿದ 21 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಭರದಿಂದ ಸಾಗಿರುವ ರಕ್ಷಣೆ ಕಾರ್ಯದಲ್ಲಿ ಪಾಲ್ಗೊಳ್ಳಲು ಇನ್ನೂ ಎರಡು ತಂಡಗಳು ಮುಂಬೈನಿಂದ ಖಲಾಪುರಕ್ಕೆ ಆಗಮಿಸಲಿವೆ.
ಈ ಅವಘಡ ಸಂಭವಿಸಿದ್ದು ರಾತ್ರಿ ಹೀಗಾಗಿ ಅದರ ತೀವ್ರತೆ, ಪರಿಣಾಮ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ. ಗುರುವಾರ ಹಗಲು ಸ್ಥಳಕ್ಕೆ ಬಂದಾಗ ಘಟನಾ ಸ್ಥಳದಲ್ಲಿನ ಸ್ಥಿತಿ ಗತಿ ಕಲ್ಪನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

100 ಕ್ಕೂ ಹೆಚ್ಚು ಜನರಿಂದ ರಕ್ಷಣಾ ಕಾರ್ಯ
ಪ್ರಸ್ತುತ ಪೊಲೀಸ್ ಮತ್ತು ಜಿಲ್ಲಾಡಳಿತದಿಂದ 100 ಕ್ಕೂ ಹೆಚ್ಚು ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ನಾವು ಎನ್ಡಿಆರ್ಎಫ್ ಹಾಗೂ ಸ್ಥಳೀಯರು ಮತ್ತು ಕೆಲವು ಸರ್ಕಾರೇತರ ಸಂಸ್ಥೆಗಳಿಂದ (NGO) ಸಹಾಯ ಪಡೆಯುತ್ತಿದ್ದೇವೆ ಎಂದು ರಾಯಗಢ ಪೊಲೀಸರು ಎಎನ್ಐಗೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಅತ್ಯಧಿಕ ಮಳೆ ದಾಖಲಾಗಿದೆ. ಇಂದು ಸಹ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಯಗಡ ಜಿಲ್ಲೆಯ ಆರು ಪ್ರಮುಖ ನದಿಗಳ ಪೈಕಿ ಎರಡು ನದಿಗಳಾದ ಸಾವಿತ್ರಿ ಮತ್ತು ಪಾತಾಳಗಾನಗಾ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕುಂಡಲಿಕಾ ಮತ್ತು ಅಂಬಾ ನದಿಗಳು ಎಚ್ಚರಿಕೆ ಮಟ್ಟ ಮೀರಿವೆ. ಗಧಿ ಮತ್ತು ಉಲ್ಲಾಸ್ ನದಿಗಳು ಸಹ ಅಪಾರ ಮಟ್ಟ ತಲುಪುತ್ತಿವೆ.
ಭಾರತೀಯ ಹವಾಮಾನ ಇಲಾಖೆ (IMD) ಮುಂಬೈ, ರಾಯಗಢ ಮತ್ತು ಪಾಲ್ಘರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಒಂದೆಡೆ ನದಿ ಹರಿವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮಳೆಯು ಸಹ ನಿಲ್ಲದಾಗಿದೆ. ಈ ಸಂಬಂಧ ಜಿಲ್ಲಾಡಳಿತ ಮತ್ತು ಸರ್ಕಾರಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿವೆ ಎನ್ನಲಾಗಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ NDRF 12 ತಂಡಗಳಾಗಿ ಕಾರ್ಯ ನಿರ್ವಹಿಸುತ್ತಿವೆ. ಮುಂಬೈನಲ್ಲಿ ಐದು ತಂಡಗಳು ಮತ್ತು ಪಾಲ್ಘರ್, ರಾಯಗಡ, ರತ್ನಗಿರಿ, ಕೊಲ್ಲಾಪುರ, ಸಾಂಗ್ಲಿ, ನಾಗ್ಪುರ ಮತ್ತು ಥಾಣೆಯಲ್ಲಿ ತಲಾ ಒಂದೊಂದು ತಂಡಗಳು ನಿಯೋಜನೆಗೊಂಡಿವೆ.
ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಬೈನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಗುರುವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಎಂದು ವರದಿ ಆಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications