ಮಂಗಗಳೊಂದಿಗೆ ಸೆಲ್ಫಿ ತೆಗೆಯಲು ಹೋಗಿ 500 ಅಡಿ ಕಮರಿಗೆ ಬಿದ್ದ ವ್ಯಕ್ತಿ- ಮುಂದೇನಾಯ್ತು ಓದಿ
ಪುಣೆ, ಡಿಸೆಂಬರ್ 5: ಇಲ್ಲಿಗೆ ಸಮೀಪದ ವರಂಧ ಘಾಟ್ ರಸ್ತೆಯಲ್ಲಿ ಕೋತಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 39 ವರ್ಷದ ವ್ಯಕ್ತಿಯೊಬ್ಬರು 500 ಅಡಿ ಆಳದ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮೃತ ಅಬ್ದುಲ್ ಶೇಖ್ ಅವರ ದೇಹವನ್ನು ಬುಧವಾರ ಮುಂಜಾನೆ ಪಡೆಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನ ಕಾರಿನಲ್ಲಿ ಕೊಂಕಣ ಕಡೆಗೆ ಹೋಗುತ್ತಿದ್ದ ಅಬ್ದುಲ್ ಶೇಖ್, ವರಂಧ ಘಾಟ್ ರಸ್ತೆಯ ವಾಘಜೈ ದೇವಸ್ಥಾನದ ಬಳಿ ತಮ್ಮ ಕಾರನ್ನು ನಿಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ.

'ಸುತ್ತಲೂ ಕೆಲವು ಕೋತಿಗಳು ಇದ್ದವು. ಅವುಗಳೊಂದಿಗೆ ವ್ಯಕ್ತಿಯು ಸೆಲ್ಫಿ ಕ್ಲಿಕ್ಕಿಸಲು ಹೋಗಿದ್ದರು' ಎಂದು ಭೋರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿಠ್ಠಲ್ ದಬಾಡೆ ತಿಳಿಸಿದ್ದಾರೆ.
ಸ್ಥಳೀಯ ಸಹ್ಯಾದ್ರಿ ರಕ್ಷಣಾ ಗುಂಪಿನ ಸಹಾಯದಿಂದ ಪೊಲೀಸರು ಮೃತದೇಹವನ್ನು ಕಮರಿಯಿಂದ ಹೊರತೆಗೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸೆಲ್ಫಿ ಹುಚ್ಚಿಗೆ ನಾಲ್ವರ ಬಲಿ
ಇದೇ ರೀತಿಯ ಘಟನೆಯೊಂದು ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದಲ್ಲಿ ನಡೆದಿತ್ತು. ಕಿತ್ವಾಡ ಪಾಲ್ಸ್ನಲ್ಲಿ ಸೆಲ್ಫಿ ತೆಗೆಯಲು ಹೋದಾಗ ನಾಲ್ವರು ಯುವತಿಯರು ಕಳೆದ ವರ್ಷದ ನವೆಂಬರ್ನಲ್ಲಿ ಮೃತಪಟ್ಟಿದ್ದರು. ಮೃತ ಯುವತಿಯರನ್ನು ಬೆಳಗಾವಿಯ ಉಜ್ವಲ ನಗರದ ಆಸಿಯಾ ಮುಜಾವರ್, ಅನಗೋಳದ ಕುದ್ಸಿಯ ಅಸ್ಮಾ ಪಟೇಲ್, ಜಟ್ಪಟ್ ಕಾಲನಿಯ ರುಕ್ಶಾರ್ ಬಿಸ್ತಿ ಹಾಗೂ ತಸ್ಮಿಯಾ ಎಂದು ಗುರುತಿಸಲಾಗಿತ್ತು. ಈ ನಾಲ್ವರ ಜೊತೆ ಇನ್ನೊಬ್ಬ ಯುವತಿ ತೀವ್ರವಾಗಿ ಗಾಯಗೊಂಡಿದ್ದರು. ಇವರ ದೇಹವನ್ನು ಪೊಲೀಸರು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದರು. ಈ ದುರಂತ ಭಾರೀ ಸದ್ದು ಮಾಡಿತ್ತು. ಪ್ರವಾಸಿ ಸ್ಥಳಗಳಲ್ಲಿ ಸೆಲ್ಫಿಗೆ ಅವಕಾಶ ನೀಡಬಾರದೆಂಬ ಮಾತೂಗಳೂ ಕೇಳಿಬಂದಿದ್ದವು.

ಹನೂರು ತಾಲ್ಲೂಕಿನಲ್ಲೂ ಘಟನೆ
ಹನೂರು ತಾಲ್ಲೂಕಿನ ಹೊಗೆನಕಲ್ ಪಾಲ್ಸ್ನಲ್ಲೂ ಇಂತದೇ ಘಟನೆ ನಡೆದಿತ್ತು. ವಿದ್ಯಾರ್ಥಿಯೊಬ್ಬ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಜಲಪಾತಕ್ಕೆ ಬಿದ್ದು, ನೀರುಪಾಲಾಗಿದ್ದ. ಮೈಸೂರು ಮೂಲಕ ಸಂಗಮೇಶ್ ಎಂಬುವವರ ಪುತ್ರ ಉಮಾಶಂಕರ್ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದ. ಈತ ನರ್ಸಿಂಗ್ ಓದುತ್ತಿದ್ದ. ಈತನಿಗೆ 19 ವರ್ಷ ವಯಸ್ಸಾಗಿತ್ತು.
ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಈತ ಆರಂಭದಿಂದಲೂ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಲೇ ಇದ್ದ. ಸ್ನೇಹಿತರ ಬೇಡವೆಂದರೂ ಜಲಪಾತದ ಬಳಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ. ಆ ಸಮಯದಲ್ಲಿ ಜಲಪಾತಕ್ಕೆ ಬಿದ್ದನೆಂದು ಗೆಳೆಯರು ಮಾಹಿತಿ ನೀಡಿದ್ದರು. 80 ಅಡಿ ಆಳವಾದ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದ. ಮಲೇಮಹದೇಶ್ವರ ಬೆಟ್ಟದ ಪೊಲೀಸರು ಈತನ ಮೃತದೇಹವನ್ನು ಹೊರತೆಗೆದಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications