ನಿತ್ಯ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಾನೆಂದು ಮಗನಿಗೆ ವಿಷ ಹಾಕಿ ಕೊಂದ ತಂದೆ
ಮಹಾರಾಷ್ಟ್ರ, ಫೆಬ್ರವರಿ 02: ಮಗ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಾನೆ ಎಂದು ತಂದೆಯೇ ಮಗನನ್ನು ವಿಷ ಹಾಕಿ ಕೊಂದ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ 14 ವರ್ಷದ ಮಗನಿಗೆ ವಿಷ ನೀಡಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಮಗ ನಾಪತ್ತೆಯಾಗಿದ್ದ ಕಥೆ ಕಟ್ಟಿದ ತಂದೆ ಈಗ ಜೈಲುಪಾಲಾಗಿದ್ದು, ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸಿದ ಪೊಲೀಸರೇ ಶಾಕ್ ಆಗಿದ್ದಾರೆ.
ವಿಜಯ್ ಬಟ್ಟು ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ವಿಶಾಲ್ ಕೊಲೆಯಾದ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಜಯ್ ಬಟ್ಟು ಟೈಲರ್ ಕೆಲಸ ಮಾಡುತ್ತಿದ್ದು, ಸೋಲಾಪುರ ನಗರದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ. ಸುಖ ಜೀವನ ನಡೆಸುತ್ತಿದ್ದ ಈ ಕುಟುಂಬದಲ್ಲಿ ಮಗನ ವರ್ತನೆ ಬಿರುಗಾಳಿ ಎಬ್ಬಿಸಿದೆ.

ಜನವರಿ 13ರಂದು ವಿಶಾಲ್ ಎಂಬ 14 ವರ್ಷದ ಬಾಲಕ ಕಾಣೆಯಾಗಿದ್ದಾನೆ ಎನ್ನುವ ದೂರು ದಾಖಲಾಗಿತ್ತು. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸ್ರು ತನಿಖೆ ಆರಂಭಿಸಿದ್ದು, ಬಾಲಕನಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕನೊಬ್ಬನ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಬಾಲಕನ ಶವ ಪತ್ತೆ ಬಗ್ಗೆ ವಿಶಾಲ್ ಕುಟುಂಬಸ್ಥರಿಗೆ ತಿಳಿಸಿದ್ದರು.
ಇದಾದ ಬಳಿಕ ಕುಟುಂಬದವರು ಶವವನ್ನು ತಮ್ಮ ಕಾಣೆಯಾದ ಮಗ ವಿಶಾಲ್ ಎಂದು ಗುರುತಿಸಿದ್ದಾರೆ . ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸವ ಮೊದಲು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಾಲಕ ವಿಷ ಸೇವಿಸಿಯಿಂದ ಸಾವನ್ನಪ್ಪಿದ್ದಾನೆ ಎಂದು ವರದಿ ಬಂದಿತ್ತು. ಬಾಲಕನ ಸಾವಿನ ಬಗ್ಗೆ ಅನುಮಾನಗೊಂಡ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರನ್ನು ವಿಚಾರಣೆಗೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ತಂದೆಯ ವರ್ತನೆಯಲ್ಲಿ ಅನುಮಾನ ಬಂದಿದೆ ಎನ್ನಲಾಗಿದೆ.
ತಂದೆ ವಿಜಯ್ ಬಟ್ಟು ಜೊತೆಗೆ ಹೋಗಿದ್ದ ಮಗ ವಾಪಸ್ ಬರುವಾಗ ಇರಲಿಲ್ಲ. ತಂದೆ ಜೊತೆ ಹೋದ ಮಗನೇ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ವಿವಿಧ ಆಯಾಮಾಗಳಲ್ಲಿ ತನಿಖೆ ನಡೆಸಿ ತಂದೆಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ತಂದೆ ವಿಜಯ್ ಬಟ್ಟು ತಾನೇ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
14 ವರ್ಷದ ಮಗನ ಕೊಲೆಗೆ ಕಾರಣವೇನು..?
ತನ್ನ 14 ವರ್ಷದ ಮಗ ಮೊಬೈನಲ್ಲಿ ಪ್ರತಿದಿನ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಎಷ್ಟು ಹೇಳಿದರೂ ಕೇಳುತ್ತಿಲ್ಲ, ಶಾಲೆಯಲ್ಲಿ ಹುಡುಗಿಯರನ್ನು ಚುಡಾಯಿಸುತ್ತಿದ್ದ, ಇದರಿಂದ ಶಾಲೆಗಳಿಂದಲೂ ನಿತ್ಯ ದೂರುಗಳು ಬರುತ್ತಿದ್ದವು. ಹೀಗಾಗಿ ಮಗ ಮಗ ದಾರಿ ತಪ್ಪುತ್ತಿದ್ದಾನೆ ಎಂದು ತಿಳಿದ ತಂದೆ ಅನೇಕ ಬಾರಿ ಬುದ್ಧಿ ಹೇಳಿದ್ದಾರೆ. ಮಗ ಎಷ್ಟು ಹೇಳಿದರೂ ಕೇಳುತ್ತಿಲ್ಲ ಎಂದು ಗೊತ್ತಾದಾಗ ಆರೋಪಿ ಮಗನನ್ನೇ ಕೊಲೆ ಮಾಡಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಜನವರಿ 13 ರಂದು ಮಗನ ಜೊತೆ ತನ್ನ ದ್ವಿಚಕ್ರ ವಾಹನದಲ್ಲಿ ತುಳಜಾಪುರ ರಸ್ತೆಗೆ ಕರೆದೊಯದಿದ್ದ ತಂದೆ ತಂಪು ಪಾನೀಯ ಖರೀದಿಸಿ ಅದರಲ್ಲಿ ವಿಷ ಹಾಕಿ ಮಗನಿಗೆ ನೀಡಿದ್ದಾರೆ. ಶೀಘ್ರದಲ್ಲೇ ವಿಶಾಲ್ ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ್ದು, ಆರೋಪಿ ವಿಜಯ್ ಬಟ್ಟು ಮಗನ ಮೃತದೇಹ ಅಲ್ಲೇ ಬಿಟ್ಟು ಮನೆಗೆ ವಾಪಸ್ ಆಗಿದ್ದಾನೆ ಎನ್ನಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications