ವೈದ್ಯಕೀಯ ವಿದ್ಯಾರ್ಥಿಯ ಕತ್ತು ಹಿಸುಕಿ, ಬೆಂಕಿ ಹಚ್ಚಿ ಮರ್ಯಾದೆಗೇಡು ಹತ್ಯೆ; ತಂದೆ ಸೇರಿ ಐವರ ಬಂಧನ
ಪ್ರೀತಿ ಮಾಡುತ್ತಿದ್ದೇನೆ ಎಂದ ಮಗಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಕುಟುಂಬದವರೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ನಡೆದಿದೆ.
ಮುಂಬೈ, ಜನವರಿ. 27: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸಂಬಂಧಿಕರು ಸೇರಿ ಕೊಲೆ ಮಾಡಿದ್ದಾರೆ.
ಮೃತರನ್ನು 22 ವರ್ಷದ ಶುಭಾಂಗಿ ಜೋಗದಂದ್ ಎಂದು ಗುರುತಿಸಲಾಗಿದೆ. ಆಕೆಯ ಪ್ರೇಮ ಪ್ರಕರಣ ಬೆಳಕಿಗೆ ಬಂದ ಕಾರಣ ಕುಟುಂಬದವರೇ ಸೇರಿ ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಶುಭಾಂಗಿ ಜೋಗದಂದ್ ಅವರ ಕತ್ತಿಗೆ ಹಗ್ಗ ಬಿಗಿದು ಆಕೆಯ ಕುಟುಂಬ ಸದಸ್ಯರು ಕೊಂದಿದ್ದಾರೆ. ನಂತರ ಆಕೆಗೆ ಬೆಂಕಿ ಹಚ್ಚಿ, ಸಾಕ್ಷ್ಯ ನಾಶಪಡಿಸಲು ಆಕೆಯ ಮೃತದೇಹದ ಅವಶೇಷಗಳನ್ನು ಹೊಳೆಯಲ್ಲಿ ಎಸೆದಿದ್ದಾರೆ.

ನಾಂದೇಡ್ ಜಿಲ್ಲೆಯ ಲಿಂಬಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಂಪ್ರಿ ಮಹಿಪಾಲ್ ಗ್ರಾಮದಲ್ಲಿ ಜನವರಿ 22 ರಂದು ಈ ಬರ್ಬರ ಹತ್ಯೆ ನಡೆದಿದೆ. ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿ ಬ್ಯಾಚುಲರ್ ಆಫ್ ಹೋಮಿಯೋಪತಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಚ್ಎಂಎಸ್) ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಮದುವೆ ನಿಶ್ಚಯವಾಗಿತ್ತು. ಆದರೆ, ಆಕೆ ತನ್ನದೇ ಗ್ರಾಮದ ಇನ್ನೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವುದಾಗಿ ತನ್ನ ಕುಟುಂಬದವರು ಆಯ್ಕೆ ಮಾಡಿದ ವ್ಯಕ್ತಿಗೆ ತಿಳಿಸಿದ್ದಾಳೆ. ಹೀಗಾಗಿ ಮದುವೆ ಸ್ಥಗಿತಗೊಂಡಿತ್ತು. ಇದರಿಂದ ಸಂತ್ರಸ್ತೆಯ ಕುಟುಂಬ ಆಕೆಯ ಮೇಲೆ ಅಸಮಾಧಾನಗೊಂಡಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಜನವರಿ 22 ರ ರಾತ್ರಿ ಮಹಿಳೆಯ ತಂದೆ, ಸಹೋದರ, ಚಿಕ್ಕಪ್ಪ ಮತ್ತು ಸೋದರಸಂಬಂಧಿಗಳು ಆಕೆಯನ್ನು ಜಮೀನಿಗೆ ಕರೆದೊಯ್ದ, ಹತ್ಯೆ ಮಾಡಿ ಸಾಕ್ಷ್ಯವನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊಲೆಯ ಆರೋಪಿಗಳನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications