Dhananjay Munde: ಮಹಾರಾಷ್ಟ್ರದ ಸಚಿವ ಧನಂಜಯ ಮುಂಡೆ ರಾಜೀನಾಮೆ
ಮುಂಬೈ, ಮಾರ್ಚ್ 03: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಸಚಿವ ಧನಂಜಯ ಮುಂಡೆ ರಾಜೀನಾಮೆ ನೀಡಿದ್ದಾರೆ. 2024ರ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಧನಂಜಯ ಮುಂಡೆ ಎನ್ಸಿಪಿ (ಅಜಿತ್ ಪವಾರ್ ಬಣ) ಪಕ್ಷದ ನಾಯಕರು.
ಸೋಮವಾರ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಧನಂಜಯ ಮುಂಡೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ ಸಲ್ಲಿಕೆ ಮಾಡಿದ್ದು, ಅದನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿಕೊಂಡಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದೆ. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಗಳು. ಅಜಿತ್ ಪವಾರ್, ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಗಳು.
ರಾಜೀನಾಮೆ ಕೇಳಿದ್ದ ಸಿಎಂ: ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಚಿವ ಧನಂಜಯ ಮುಂಡೆ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು ಎಂಬ ಮಾಹಿತಿ ಸಿಕ್ಕಿದೆ.
ಸಚಿವ ಧನಂಜಯ ಮುಂಡೆ ಆಪ್ತ ವಾಲ್ಮಿಕ್ ಕರಾಡ್ನನ್ನು ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಸಿಐಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಆದ್ದರಿಂದ ವಿರೋಧ ಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿದ್ದವು.
2024ರ ಡಿಸೆಂಬರ್ನಲ್ಲಿ ಸಂತೋಷ್ ದೇಶ್ಮುಖ್ ಅಪಹರಣ ಮಾಡಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಮಸ್ಸಾಜೋಗ್ ಗ್ರಾಮದ ಸರ್ಪಂಚ್ ಆಗಿದ್ದ ಅವರ ಕೊಲೆ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿತ್ತು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀಡ್ ಜಿಲ್ಲಾ ಕೋರ್ಟ್ಗೆ 1,200 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಸಿಐಡಿ ಪ್ರಕರಣದಲ್ಲಿ ವಾಲ್ಮಿಕ್ ಕರಾಡ್ ಪ್ರಮುಖ ಆರೋಪಿ ಎಂದು ಹೇಳಿತ್ತು.
ಸಚಿವ ಧನಂಜಯ ಮುಂಡೆ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸಕ್ಕೆ ಭೇಟಿ ನೀಡಿ, ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ಗೆ ಪತ್ರವನ್ನು ಬರೆದಿದ್ದ ದೇವೇಂಧ್ರ ಫಡ್ನವೀಸ್ ಸಚಿವರ ರಾಜೀನಾಮೆ ಪಡೆಯುವಂತೆ ಮನವಿ ಮಾಡಿದ್ದರು.
ಸಂತೋಷ್ ದೇಶ್ಮುಖ್ ಕೊಲೆ ಪ್ರಕರಣದಲ್ಲಿ ಧನಂಜಯ ಮುಂಡೆ 6 ಸಹಾಯಕರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ಸರಿಯಾಗಿ ನಡೆಯಲು ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು.
ಧನಂಜಯ ಮುಂಡೆ ಬೀಡ್ ಜಿಲ್ಲೆಯ ಪಾರ್ಲಿ ಕ್ಷೇತ್ರದ ಎನ್ಸಿಪಿ ಶಾಸಕರು. ಅವರು ಮೊದಲು ಬೀಡ್ ಜಿಲ್ಲಾ ಉಸ್ತುವಾರಿಯಾಗಿಯೂ ಕೆಲಸ ಮಾಡಿದ್ದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಅಸ್ತಿತ್ವಕ್ಕೆ ಬಂದ ಬಳಿಕ 'ಮಹಾಯುತಿ' ಮೈತ್ರಿಕೂಟದ ಮಿತ್ರಪಕ್ಷವಾದ ಎನ್ಸಿಪಿಯ ಧನಂಜಯ ಮುಂಡೆ ಅವರನ್ನು ಸಚಿವರಾಗಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications