Maharashtra: ದಿನಕ್ಕೆ 5 ಬಾರಿ ನಮಾಜ್, 2 ಸಸಿ ನೆಡಬೇಕು- ವಿಭಿನ್ನ ಶಿಕ್ಷೆ ನೀಡಿದ ಕೋರ್ಟ್!
'ದಿನಕ್ಕೆ 5 ಬಾರಿ ನಮಾಜ್, 2 ಸಸಿ ನೆಡಬೇಕು' ಮಹಾರಾಷ್ಟ್ರದ ಮಾಲೆಗಾಂವ್ನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಸ್ಲಿಂ ವ್ಯಕ್ತಿಗೆ ವಿಭಿನ್ನ ಶಿಕ್ಷೆಯನ್ನು ನೀಡಿದೆ.
ಮಹಾರಾಷ್ಟ್ರದ ಮಾಲೆಗಾಂವ್ನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಸ್ಲಿಂ ವ್ಯಕ್ತಿಗೆ ವಿಭಿನ್ನ ಶಿಕ್ಷೆಯನ್ನು ನೀಡಿದೆ. 21 ದಿನಗಳವರೆಗೆ ಐದು ಬಾರಿ ನಾಮಾಜ್ ಮಾಡಲು ಮತ್ತು ಸ್ವಯಂಪ್ರೇರಣೆಯಿಂದ ಎರಡು ಸಸಿಗಳನ್ನು ನೆಡಲು ಆದೇಶಿಸಿದೆ. ರಸ್ತೆ-ಅಪಘಾತ ಜಗಳ ಪ್ರಕರಣದಲ್ಲಿ ಕೋರ್ಟ್ ಈ ಆದೇಶವನ್ನು (ಸೆಕ್ಷನ್ 323 ಐಪಿಸಿ) ಹೊರಡಿಸಿದೆ.
1958ರ ಅಪರಾಧಿಗಳ ಪ್ರೊಬೇಶನ್ ಆಕ್ಟ್ನ ಸೆಕ್ಷನ್ ಮೂರು ಅಪರಾಧವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಿ ಅಪರಾಧಿಯನ್ನು ಬಿಡುಗಡೆ ಮಾಡಲು ಮ್ಯಾಜಿಸ್ಟ್ಏಟ್ಗೆ ಅಧಿಕಾರವನ್ನು ನೀಡುತ್ತದೆ. ಇದರ ಅಡಿಯಲ್ಲಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ತೇಜ್ವಂತ್ ಸಿಂಗ್ ಸಂಧು ಆದೇಶದಲ್ಲಿ ಹೇಳಿದ್ದಾರೆ.

ಕೇವಲ ಎಚ್ಚರಿಕೆ ಸಾಕಾಗುವುದಿಲ್ಲ ಮತ್ತು ಅಪರಾಧಿಯು ತನ್ನ ಕೃತ್ಯಗಳನ್ನು ಪುನರಾವರ್ತಿಸದಂತೆ ಎಚ್ಚರಿಕೆಯನ್ನು ಮತ್ತು ಅವನ ಅಪರಾಧವನ್ನು ನೆನಪಿಸಿಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆ ಮುಸ್ಲಿಂ ಧರ್ಮ ಆಚರಿಸುವ ವ್ಯಕ್ತಿಗೆ ನಮಾಜ್ ಮಾಡುವ ಹಾಗೂ ಸಸಿ ನಡುವ ಜವಬ್ದಾರಿ ನೀಡಿದೆ. ಇದರಿಂದ ಪ್ರತಿ ದಿನವೂ ಆತನಿಗೆ ತನ್ನ ತಪ್ಪಿನ ಅರಿವಾಗಿದೆ ಎಂದು ಮ್ಯಾಜಿಸ್ಟ್ರೇಟ್ ಅಭಿಪ್ರಾಯಪಟ್ಟಿದ್ದಾರೆ.
ವಿಚಾರಣೆ ವೇಳೆ ಅಪರಾಧಿಯೂ ಇಸ್ಲಾಮಿಕ್ ನಂಬಿಕೆಯನ್ನು ಅನುಸರಿಸುವ ವ್ಯಕ್ತಿಯಾಗಿದ್ದರೂ, ಧಾರ್ಮಿಕ ಗ್ರಂಥಗಳಲ್ಲಿ ಸೂಚಿಸಿದಂತೆ ತಾನೂ ನಿಯಮಿತವಾಗಿ ನಮಾಜ್ ಮಾಡುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಇದೇ ಕಾರಣಕ್ಕೆ ಮುಂದಿನ 21 ದಿನಗಳ ಕಾಲ ಐದು ಹೊತ್ತಿನ ನಮಾಜ್ ಮಾಡಲು ಹಾಗೂ ಅಪರಾಧ ಎಸಗಿದ ಸೋನಾಪುರ ಮಸೀದಿಯ ಆವರಣದಲ್ಲಿ ಎರಡು ಮರಗಳನ್ನು ನೆಡಲು ಆದೇಶಿಸಿದೆ.

ಅಪರಾಧಿ 2010 ರ ಪ್ರಕರಣವೊಂದರಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಆರೋಪದ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ಸ್ 323 (ಸ್ವಯಂಪ್ರೇರಣೆಯಿಂದ ನೋಯಿಸುವುದು), 325 (ಸ್ವಯಂಪ್ರೇರಣೆಯಿಂದ ತೀವ್ರ ನೋವನ್ನು ಉಂಟುಮಾಡುವುದು), 504 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications