ಕ್ರೀಡಾ ದುರಂತ: ಆಟದ ನಡುವೆ ಕುಸಿದು ಪ್ರಾಣ ಬಿಟ್ಟ ಸ್ಪರ್ಧಿ
ತಿರುವನಂತಪುರಂ, ಫೆ.2: ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸೋಮವಾರ ದುರಂತ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ನೆಟ್ ಬಾಲ್ ಆಟಗಾರ ಆಟವಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ನೆಟ್ ಬಾಲ್ ಆಟಗಾರ 21 ವರ್ಷ ವಯಸ್ಸಿನ ಮಯೂರೇಶ್ ಪವಾರ್ ಅವರು ಆಟದ ಮಧ್ಯೆ ಮೈದಾನದಲ್ಲೇ ಸಾವನ್ನಪ್ಪಿರುವ ಘಟನೆ ಆಘಾತ ತಂದಿದೆ. ಎದೆ ಹಿಡಿದುಕೊಂಡು ಕುಸಿದು ಬಿದ್ದ ಆಟಗಾರ ಮಯೂರೇಶ್ ರನ್ನು ತಕ್ಷಣವೇ ವೈದ್ಯರ ಬಳಿ ಕರೆದುಕೊಂಡು ಹೋಗಲಾಯಿತು. ಅದರೆ, ಆಸ್ಪತ್ರೆಗೆ ಬರುವಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ರಾಷ್ಟ್ರೀಯ ಕ್ರೀಡಾಕೂಟದ ಕಾರ್ಯದರ್ಶಿ ಹೇಳಿದ್ದಾರೆ. [ಎದೆಗೆ ಚೆಂಡು ಬಡಿದು ಯುವ ಕ್ರಿಕೆಟರ್ 'ದುರಂತ' ಸಾವು]

ತಿರುವನಂತರಪುರಂನ ಕೃಷಿ ಕಾಲೇಜಿನ ಒಳಾಂಗಣ ಸ್ಟೇಡಿಯಂನಲ್ಲಿ ಚಂಡೀಗಢ್ ಹಾಗೂ ಮಹಾರಾಷ್ಟ್ರ ನಡುವೆ ನೆಟ್ ಬಾಲ್ ಪಂದ್ಯಾವಳಿ ನಡೆಯಿತು. ಮಹಾರಾಷ್ಟ್ರ ಪರ ಮಯೂರೇಶ್ ಪವಾರ್ ಸೋಮವಾರ ಬೆಳಗ್ಗೆ ಪಂದ್ಯವಾಡುತ್ತಿದ್ದರು. ಈ ಸಂದರ್ಭದಲ್ಲಿ ಎದೆ ನೋವು ಎಂದು ಕುಸಿದು ಬಿದ್ದಿದ್ದರು. ಕೂಡಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಅದರೆ, ಫಲಕಾರಿಯಾಗಲಿಲ್ಲ ಎಂದು ತಿಳಿದು ಬಂದಿದೆ.
ಅದರೆ, ಪವಾರ್ ಅವರು ನೆಟ್ ಬಾಲ್ ಪಂದ್ಯಕ್ಕೂ ಮುನ್ನ ಅಭ್ಯಾಸ ನಿರತರಾಗಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಯುವ ಪ್ರತಿಭೆ ಪವಾರ್ ನಿಧನಕ್ಕೆ ಕೇರಳ ಕ್ರೀಡಾ ಸಚಿವ ರಾಧಾಕೃಷ್ಣನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಪವಾರ್ ಮೃತ ಶರೀರ ರವಾನೆಗೆ ಸಂಬಂಧಿಸಿದಂತೆ ಸಂಪೂರ್ಣ ಖರ್ಚು ವೆಚ್ಚವನ್ನು ಕೇರಳ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. [ಆತ ದಾಖಲಿಸಿದ ಗೋಲನ್ನೇ ಗೆದ್ದ ಸಾವು!]
ರಾಮನಗರದಲ್ಲಿ ದುರಂತ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮನಗರದಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಖಾಸಗಿ ಸಂಸ್ಥೆ ಉದ್ಯೋಗಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಪ್ರದೇಶ ಮೂಲಕ 27 ವರ್ಷ ವಯಸ್ಸಿನ ಪ್ರಕಾಶ್ ಗುಪ್ತ ಎಂಬವರು ಆಂಗಾಗ ದಾನ ಅರಿವುದು ಮೂಡಿಸಲು ಮ್ಯಾರಾಥಾನ್ ನಲ್ಲಿ ಪಾಲ್ಗೊಂಡಿದ್ದರು. ಅದರೆ, ಓಟ ಮುಗಿಸಿದ ಮೇಲೆ ಕುಸಿದು ಬಿದ್ದ ಪ್ರಕಾಶ್ ಅವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಯಿತು. ಅದರೆ, ಮಾರ್ಗಮಧ್ಯೆದಲ್ಲೇ ಪ್ರಕಾಶ್ ಸಾವನ್ನಪ್ಪಿದ ಘಟನೆ ನಡೆದಿದೆ. (ಪಿಟಿಐ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications