ಬೆಳಗಾವಿ ಗಡಿ ಗಲಾಟೆ: ಕರ್ನಾಟಕಕ್ಕೆ ಬಸ್ ಸೇವೆ ನಿಲ್ಲಿಸಿದ ಮಹಾರಾಷ್ಟ್ರ
ಮುಂಬೈ, ಡಿಸೆಂಬರ್ 06: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರದ ಲಾರಿಗಳಿಗೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಗಡಿ ತಂಟೆಯನ್ನು ವಿರೋಧಿಸಿದ ಕನ್ನಡ ಕಾರ್ಯಕರ್ತರು ಬಸ್ಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ.
ಅತ್ತ ಮಹಾರಾಷ್ಟ್ರದ ಪುಣೆಯಲ್ಲಿ ಕರ್ನಾಟಕದ ಬಸ್ಗಳಿಗೆ ಶಿವಸೇನಾ ಕಾರ್ಯಕರ್ತರು ಮಸಿ ಹಚ್ಚಿದ್ದಾರೆ. ಪರಿಸ್ಥಿತಿ ಬಿಗಾಡಾಯಿಸುತ್ತಿರುವುದನ್ನು ಅರಿತ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬಸ್ಗಳ ಸೇವೆಯನ್ನು ನಿಲ್ಲಿಸಿದೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬೀದರ್ ಮಾರ್ಗವಾಗಿ ಬರುವ ಎಲ್ಲಾ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಮೂಕಪ್ರೇಕ್ಷಕನಂತಾದ ಸರ್ಕಾರ: ಸ್ವಾತಿ ಚತುರ್ವೇದಿ
ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮಹಾರಾಷ್ಟ್ರ ನೋಂದಾಯಿತ ಟ್ರಕ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸದ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮೂಕಪ್ರೇಕ್ಷಕನಂತಾಗಿದೆ ಎಂದು ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸ್ವಾತಿ ಚತುರ್ವೇದಿ, 'ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳು ಹಾನಿಗೊಳಗಾಗಿವೆ. ಕನ್ನಡ ಪರ ಕಾರ್ಯಕರ್ತರು ಮಹಾರಾಷ್ಟ್ರದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ. ಈ ಘಟನೆಗಳನ್ನು ಮಹಾರಾಷ್ಟ್ರ ಸರ್ಕಾರ ಮೂಕ ಪ್ರೇಕ್ಷಕನಂತೆ ನೋಡುತ್ತ ಕುಳಿತಿದೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಏಕೆ ಕಠಿಣವಾಗಿ ಮಾತನಾಡಬಾರದು ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದಿರುವ ಘಟನೆಗಳು ಮಹಾರಾಷ್ಟ್ರ ರಾಜಕಾರಣಿಗಳನ್ನು ಕೆರಳುವಂತೆ ಮಾಡಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ಅವರು, 'ಈಗ ನಾವು ನಿರ್ಧರಿಸುವ ಸಮಯ ಬಂದಿದೆ' ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications