ಬೆಳಗಾವಿ ಗಡಿ ಗಲಾಟೆ: ಕರ್ನಾಟಕಕ್ಕೆ ಬಸ್ ಸೇವೆ ನಿಲ್ಲಿಸಿದ ಮಹಾರಾಷ್ಟ್ರ
ಮುಂಬೈ, ಡಿಸೆಂಬರ್ 06: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರದ ಲಾರಿಗಳಿಗೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಗಡಿ ತಂಟೆಯನ್ನು ವಿರೋಧಿಸಿದ ಕನ್ನಡ ಕಾರ್ಯಕರ್ತರು ಬಸ್ಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ್ದಾರೆ.
ಅತ್ತ ಮಹಾರಾಷ್ಟ್ರದ ಪುಣೆಯಲ್ಲಿ ಕರ್ನಾಟಕದ ಬಸ್ಗಳಿಗೆ ಶಿವಸೇನಾ ಕಾರ್ಯಕರ್ತರು ಮಸಿ ಹಚ್ಚಿದ್ದಾರೆ. ಪರಿಸ್ಥಿತಿ ಬಿಗಾಡಾಯಿಸುತ್ತಿರುವುದನ್ನು ಅರಿತ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬಸ್ಗಳ ಸೇವೆಯನ್ನು ನಿಲ್ಲಿಸಿದೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬೀದರ್ ಮಾರ್ಗವಾಗಿ ಬರುವ ಎಲ್ಲಾ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಮೂಕಪ್ರೇಕ್ಷಕನಂತಾದ ಸರ್ಕಾರ: ಸ್ವಾತಿ ಚತುರ್ವೇದಿ
ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮಹಾರಾಷ್ಟ್ರ ನೋಂದಾಯಿತ ಟ್ರಕ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸದ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮೂಕಪ್ರೇಕ್ಷಕನಂತಾಗಿದೆ ಎಂದು ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸ್ವಾತಿ ಚತುರ್ವೇದಿ, 'ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳು ಹಾನಿಗೊಳಗಾಗಿವೆ. ಕನ್ನಡ ಪರ ಕಾರ್ಯಕರ್ತರು ಮಹಾರಾಷ್ಟ್ರದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ. ಈ ಘಟನೆಗಳನ್ನು ಮಹಾರಾಷ್ಟ್ರ ಸರ್ಕಾರ ಮೂಕ ಪ್ರೇಕ್ಷಕನಂತೆ ನೋಡುತ್ತ ಕುಳಿತಿದೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯೊಂದಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಏಕೆ ಕಠಿಣವಾಗಿ ಮಾತನಾಡಬಾರದು ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದಿರುವ ಘಟನೆಗಳು ಮಹಾರಾಷ್ಟ್ರ ರಾಜಕಾರಣಿಗಳನ್ನು ಕೆರಳುವಂತೆ ಮಾಡಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ಅವರು, 'ಈಗ ನಾವು ನಿರ್ಧರಿಸುವ ಸಮಯ ಬಂದಿದೆ' ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
ಇರಾನ್ ಹೇಳಿಕೆಯಲ್ಲಿ ಗೊಂದಲ ಸೃಷ್ಟಿಸಿದ HE ಪದ: ಇದು ಉದ್ದೇಶಪೂರ್ವಕವೇ? ಮಂಜುನಾಥ ಕೊಳ್ಳೇಗಾಲ ವಿಶ್ಲೇಷಣೆ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ












Click it and Unblock the Notifications