ಮಹಾಶಿವರಾತ್ರಿಯಂದು ಜಗದೊಡೆಯ ಈಶ್ವರಗೆ ಗಣ್ಯರ ನಮನ
ಮಹಾಶಿವರಾತ್ರಿಯ ಸಂಭ್ರಮ ಇಂದು ದೇಶದೆಲ್ಲೆಡೆ ಮನೆಮಾಡಿದೆ. ಶಿವಭಕ್ತರು ಶಿವದೇವಾಲಯಗಳಿಗೆ ತೆರಳಿ ಶ್ರದ್ಧೆ ಭಕ್ತಿಯಿಂದ ಪೂಜೆ ಸಲ್ಲಿಸುತ್ತಿದ್ದಾರೆ. ಇಷ್ಟಾರ್ಥ ಪೂರೈಸುವಂತೆ ಜಗದೀಶನಿಗೆ ಹರಕೆ ಹೊತ್ತು ಸಾರ್ಥಕತೆ ಅನುಭವಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಶಿವರಾತ್ರಿ ಹಬ್ಬದ ಶುಭಕೋರಿದ್ದಾರೆ.
ದೆಶದಾದ್ಯಂತ ಭಕ್ತರು ಜಾಗರಣೆ, ಉಪವಾಸ, ವಿವಿಧ ಮನರಂಜನೀಯ ಕಾರ್ಯಕ್ರಮಗಳ ಮೂಲಕ ಶಿವರಾತ್ರಿಯನ್ನು ಆಚರಿಸುತ್ತಿದ್ದಾರೆ. ಭಕ್ತಿ-ಭಾವದಿಂದ ಪೂಜೆ ಸಲ್ಲಿಸಿ, ಜಗದೊಡೆಯ ಶಿವನ ಆಶೀರ್ವಾದ ಬೇಡುತ್ತಿದ್ದಾರೆ.
ದುಷ್ಟ ಶಕ್ತಿಗಳ ನಿರ್ಣಾಮಕ್ಕಾಗಿ ಲಯಕರ್ತನಾದ ಶಿವ ಸಕಲರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂಬುದು ನಮ್ಮೆಲ್ಲರ ಪ್ರಾರ್ಥನೆ.
|
ಉಪರಾಷ್ಟ್ರಪತಿಗಳಿಂದ ಶುಭಾಶಯ
ಶಿವರಾತ್ರಿಯ ಶುಭಾಶಯಗಳು. ತ್ರಿಮೂರ್ತಿಗಳಲ್ಲಿ ಶಿವನೂ ಒಬ್ಬ. ಆತ ಆದಿಯೋಗಿ- ಮೊದಲ ಯೋಗ ಗುರು. ಅವನು ದಕ್ಷಿಣಮೂರ್ತಿ- ಮಹಾನ್ ಶಿಕ್ಷಕ, ಅವನು ರುದ್ರ- ದುಷ್ಟಶಕ್ತಿಗಳ ನಿರ್ಮೂಲನೆಗೆ ಕಂಕಟಬದ್ಧನಾದವನು, ಅವನು ನಟರಾಜ- ನೃತ್ಯದ ರಾಜ ಎಂದು ಟ್ವೀಟ್ ಮಾಡಿದ್ದಾರೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು.
|
ಸ್ನೇಹ-ಸೌಹಾರ್ದ ಹೊತ್ತುತರಲಿ!
ಪವಿತ್ರ ಮಹಾ ಶಿವರಾತ್ರಿಯು ನಾಡಿನ ಸಮಸ್ತ ಜನರ ಬಾಳಲ್ಲಿ ಸಂತಸ, ಸಮೃದ್ಧಿ, ಸ್ನೇಹ-ಸೌಹಾರ್ದತೆಯನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ತಮಗೆಲ್ಲ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ.
|
ಸಮೃದ್ಧಿ ದಯಪಾಲಿಸಲಿ...
ಶಿವರಾತ್ರಿಯ ಶುಭಕಾಮನೆಗಳು. ಭಗವಂತ ಶಿವ ನಮಗೆಲ್ಲರಿಗೂ ಆರೋಗ್ಯ, ಐಶ್ವರ್ಯ, ಸಮೃದ್ಧಿಯನ್ನು ದಯಪಾಲಿಸಲಿ ಎಂದು ಟ್ವೀಟ್ ಮಾಡಿದ್ದಾರೆ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್.
|
ಹಾರ್ದಿಕ ಶುಭಾಶಯಗಳು
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶಿವನ ಮೂರ್ತಿಯ ವಿಡಿಯೋವೊಂದನ್ನು ಟ್ವೀಟ್ ಮಾಡಿ ಮಹಾ ಶಿವರಾತ್ರಿಗೆ ಶುಭಹಾರೈಸಿದ್ದಾರೆ. ನಾಡು ಸಮೃದ್ಧವಾಗಿ, ಜನರೆಲ್ಲರೂ ಸಂತೋಷದಿಂದಿರಲಿ ಎಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications