ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ
ಮುಂಬೈ, ಆಗಸ್ಟ್ 9: ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಮುಂಬೈನಲ್ಲಿ ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥ ಕಾರ್ಯಕ್ರಮಕ್ಕೆ ತೆರಳುವ ಕೆಲವೇ ಕ್ಷಣಗಳ ಮೊದಲು ಪೊಲೀಸರು ಒಂದೆರಡು ಗಂಟೆಗಳ ಕಾಲ ಬಂಧಿಸಿದ್ದ ಘಟನೆ ನಡೆದಿದೆ.
ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥ ಕಾರ್ಯಕ್ರಮವನ್ನು ವಾರ್ಷಿಕವಾಗಿ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆಸಲಾಗುತ್ತದೆ, ಗ್ರಾಂಟ್ ರೋಡ್ ಉಪನಗರ ರೈಲು ನಿಲ್ದಾಣದ ಬಳಿ ಇದನ್ನು ಮೊದಲು ಗೋವಾಲಿಯಾ ಟ್ಯಾಂಕ್ ಮೈದಾನ ಎಂದು ಕರೆಯಲಾಗುತ್ತಿತ್ತು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನಾನು ಆಗಸ್ಟ್ 9 ರ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ನನ್ನನ್ನು ಬಂಧಿಸಲಾಗಿದೆ. ಈ ಐತಿಹಾಸಿಕ ದಿನಾಂಕದಂದು ನನ್ನ ಮುತ್ತಜ್ಜರಾದ ಬಾಪು ಮತ್ತು ಬಾ ಅವರನ್ನು ಸಹ ಬ್ರಿಟಿಷ್ ಪೊಲೀಸರು ಬಂಧಿಸಿದ್ದಾರೆ ಎಂದು ನನಗೆ ಹೆಮ್ಮೆ ಇದೆ ಎಂದು ತುಷಾರ್ ಗಾಂಧಿ ಟ್ವೀಟ್ ಮಾಡಿದ್ದಾರೆ.
आज ९ अगस्तको जब मैं अगस्त क्रांती दिवस पर अगस्त क्रांति मैदान जाने नीकला तो पोल्स मुझे पकड़ कर साँताकृझ पोल्स स्टेशन ले आई डीटेन कर लीया। #मोदी_है_तो_मुमकीन_है।
— Tushar GANDHI (@TusharG) August 9, 2023
ಮತ್ತೊಂದು ಟ್ವೀಟ್ ನಲ್ಲಿ, ನನ್ನನ್ನು ಈಗ ಬಿಡುಗಡೆ ಮಾಡಲಾಗಿದೆ. ಕ್ರಾಂತಿ ಮೈದಾನಕ್ಕೆ ತೆರಳಲು ಅವಕಾಶ ನೀಡಲಾಗಿದೆ. ಇನ್ ಕ್ವಿಲಾಬ್ ಜಿಂದಾಬಾದ್ ಎಂದು ತುಷಾರ್ ಗಾಂಧಿ ಬರೆದುಕೊಂಡಿದ್ದಾರೆ. ಈ ಭ್ರಷ್ಟ ಸರ್ಕಾರ ನಮ್ಮ ಶಾಂತಿ ಮತ್ತು ಅಹಿಂಸೆಗೆ ಭಯ ಪಡುತ್ತಿರುವುದು ಏಕೆ? ಎಂದು ಸರ್ಕಾರದ ವಿರುದ್ಧ ತುಷಾರ್ ಗಾಂಧಿ ಕಿಡಿ ಕಾರಿದ್ದಾರೆ.
ಕೆಲವು ಗಂಟೆಗಳ ನಂತರ ಸಾಂತಾಕ್ರೂಜ್ ಠಾಣೆ ಪೊಲೀಸರು ತುಷಾರ್ ಗಾಂಧಿ ಅವರನ್ನು ಬಿಡುಗಡೆ ಮಾಡಿದರು. ಸರ್ಕಾರದ ಹೊಸ ಅಭಿಯಾನ "ಮೇರಿ ಮಾತಿ, ಮೇರಾ ದೇಶ್" ಅನ್ನು ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಪ್ರಾರಂಭಿಸಿದರು. ಹೀಗಾಗಿ ಸ್ಥಳದಲ್ಲಿ ಕೆಲ ಗಂಟೆಗಳ ಕಾಲ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಇಂದು ಕ್ವಿಟ್ ಇಂಡಿಯಾ ದಿನದ 81 ನೇ ವಾರ್ಷಿಕೋತ್ಸವವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯು 1942 , ಆಗಸ್ಟ್ 9ರಂದು ನಡೆದ ನಾಗರಿಕ ದಂಗೆಯಾಗಿದೆ. ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಆಂದೋಲನವು ಸ್ವಾತಂತ್ರ್ಯಕ್ಕಾಗಿ ಹೋರಾಟದ ಅಂತಿಮ ಹಂತಗಳಲ್ಲಿ ಒಂದಾಗಿದೆ. ಗಮನಾರ್ಹವಾದ ಈ ದಿನ, ಸಾವಿರಾರು ಭಾರತೀಯರು ಬೀದಿಗಿಳಿದು ಬ್ರಿಟಿಷರ ಆಡಳಿತದ ವಿರುದ್ಧ ಪ್ರತಿಭಟಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications