ಮಹಾವೀರ ಜಯಂತಿ 2022: ಪ್ರಧಾನಿ ಸೇರಿ ಹಲವು ನಾಯಕರಿಂದ ಶುಭಾಶಯ
ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರುಗಳು ಗುರುವಾರ ದೇಶಕ್ಕೆ ಮಹಾವೀರ ಜಯಂತಿಯ ಶುಭಾಶಯ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕೆ ಬೈಸಾಖಿ, ಬೋಹಾಗ್ ಬಿಹು, ಒಡಿಯಾ ಹೊಸ ವರ್ಷ, ತಮಿಳು ಹೊಸ ವರ್ಷದ ಪುತಾಂಡು, ಮಹಾವೀರ ಜಯಂತಿ ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯ ಶುಭಾಶಯ ತಿಳಿಸಿದ್ದಾರೆ.
"ನಿಮ್ಮೆಲ್ಲರಿಗೂ ಮಹಾವೀರ ಜಯಂತಿಯ ಶುಭಾಶಯಗಳು. ಈ ದಿನದಂದು ಭಗವಾನ್ ಮಹಾವೀರರ ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಅದರಲ್ಲೂ ವಿಶೇಷವಾಗಿ ಶಾಂತಿ, ಸಹಾನುಭೂತಿ ಮತ್ತು ಸಹೋದರತ್ವಕ್ಕೆ ಒತ್ತು ನೀಡಿದ್ದೇವೆ," ಎಂದು ಹೇಳಿದ್ದಾರೆ.
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪುತಾಂಡುವಿನ ಶುಭಾಶಯ ಕೂಡಾ ಕೋರಿದ್ದಾರೆ. "ಪುತಾಂಡುವಿನ ಶುಭ ಸಂದರ್ಭದಲ್ಲಿ ಶುಭಾಶಯಗಳು," ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. "ಒಡಿಯಾ ಹೊಸ ವರ್ಷದ ಶುಭಾಶಯಗಳು! ಮುಂಬರುವ ವರ್ಷವು ಸಂತೋಷ ಮತ್ತು ಉತ್ತಮ ಆರೋಗ್ಯದಿಂದ ತುಂಬಿರಲಿ," ಎಂದು ಕೂಡಾ ಒಡಿಯಾ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಭಾಶಯ
ಇನ್ನು ರಾಹುಲ್ ಗಾಂಧಿ ಕೂಡಾ ಮಹಾವೀರ ಜಯಂತಿಯ ಶುಭಾಶಯವನ್ನು ತಿಳಿಸಿದ್ದಾರೆ. ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಭಗವಾನ್ ಮಹಾವೀರರ ಬೋಧನೆಗಳು ಎಲ್ಲರಿಗೂ ಸತ್ಯ, ಶಾಂತಿ ಮತ್ತು ಸಾಮರಸ್ಯದ ಹಾದಿಯಲ್ಲಿ ನಡೆಯಲು ಪ್ರೇರೇಪಿಸಲಿ," ಎಂದು ತಿಳಿಸಿದ್ದಾರೆ.

ಶುಭಾಶಯ ತಿಳಿಸಿದ ಬೊಮ್ಮಾಯಿ
"ನಾಡಿನ ಸಮಸ್ತ ಜನತೆಗೆ ಅಹಿಂಸೆಯೇ ಶ್ರೇಷ್ಠ ಧರ್ಮವೆಂದು ಸಾರಿದ ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು. ಭಗವಾನ್ ಮಹಾವೀರರ ಮಾನವೀಯ ಮೌಲ್ಯಗಳ ಉಪದೇಶಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಂಡು, ಅವರು ತೋರಿದ ಸಾರ್ಥಕ ಜೀವನದ ಮಾರ್ಗದಲ್ಲಿ ಮುನ್ನಡೆಯೋಣ," ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. "ಅಹಿಂಸೆಯೇ ಪರಮ ಧರ್ಮ ಎಂದು ಸಾರಿ ಲೋಕಕಲ್ಯಾಣಕ್ಕಾಗಿ ಸರ್ವಸಂಗ ಪರಿತ್ಯಾಗ ಮಾಡಿದ ಮಹಾಮುನಿ, 24ನೇ ಜೈನ ತೀರ್ಥಂಕರರಾದ ಭಗವಾನ್ ವರ್ಧಮಾನ್ ಮಹಾವೀರ ಜಯಂತಿಯ ಹಾರ್ದಿಕ ಶುಭಾಶಯಗಳು," ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಭಾಶಯ ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಶುಭಾಶಯ
"ಸತ್ಯ ಮತ್ತು ಅಹಿಂಸೆಯ ಪ್ರತೀಕವಾದ ಜೈನ ತತ್ತ್ವಶಾಸ್ತ್ರದ ಪ್ರಸಾರಕ ಭಗವಾನ್ ಮಹಾವೀರ ಯನ ಜಯಂತಿಯ ಶುಭಾಶಯಗಳು!," ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ. ಭಗವಾನ್ ಮಹಾವೀರ ಜಯಂತಿಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಮಹಾವೀರ ಜಯಂತಿ 2022
ಮಹಾವೀರ ಜಯಂತಿ ಜೈನ ಧರ್ಮದ ಜನರಿಗೆ ಮಹತ್ವದ ಹಬ್ಬ. ಈ ಮಹಾವೀರ ಜಯಂತಿಯನ್ನು ಜೈನ ಧರ್ಮದ 24 ನೇ ಮತ್ತು ಕೊನೆಯ ಆಧ್ಯಾತ್ಮಿಕ ನಾಯಕ ಭಗವಾನ್ ಮಹಾವೀರರ ಜನ್ಮದಿನದಂದು ಆಚರಿಸಲಾಗುತ್ತದೆ. ಜೊತೆಗೆ ಈ ದಿನವನ್ನು ಮಹಾವೀರ ತ್ರಯೋದಶಿ ಎಂದೂ ಕರೆಯುತ್ತಾರೆ. ಮಹಾವೀರರು ಆರುನೂರು ವರ್ಷಗಳ ಹಿಂದೆ ಈ ಪುಣ್ಯಭೂಮಿಯಲ್ಲಿ ಹುಟ್ಟಿದರು ಎನ್ನಲಾಗುತ್ತದೆ. ಆದರೆ ಅವರು ಪ್ರತಿಪಾದಿಸಿದ ತತ್ವಗಳು ಅಂದಿನಂತೆಯೇ ಇಂದಿಗೂ ಪ್ರಸ್ತುತವಾಗಿವೆ. ಪ್ರಾಚೀನ ಗ್ರಂಥಗಳ ಸನಾತನ ತತ್ವಗಳನ್ನು ಪ್ರಸ್ತುತ ದೃಷ್ಟಿಕೋನದಲ್ಲಿ ನೋಡಲಾಗುತ್ತದೆ.
ಭಾರತೀಯ ಸಮಾಜದಲ್ಲಿ ಒಂದು ವಿಶಿಷ್ಟವಾದ ಚಳುವಳಿಯನ್ನು ಭಗವಾನ್ ಮಹಾವೀರನು ಕ್ರಿಸ್ತಪೂರ್ವ 6 ನೇ ಶತಮಾನದಲ್ಲಿ ಪ್ರಾರಂಭಿಸಿದರು. ಆ ಅಭಿಯಾನವನ್ನು ಶುದ್ಧತೆಯ ಅಭಿಯಾನ ಎಂದು ಕರೆಯಲಾಗಿದೆ. ಭಗವಾನ್ ಮಹಾವೀರರು ಎರಡು ರೀತಿಯ ಶುದ್ಧತೆಯ ಬಗ್ಗೆ ಮಾತನಾಡಿದ್ದಾರೆ. ಭಗವಾನ್ ಮಹಾವೀರರು ಕ್ರಿಸ್ತಪೂರ್ವ 599 ರಲ್ಲಿ ಹಿಂದೂ ಕ್ಯಾಲೆಂಡರ್ನ ಚೈತ್ರ ಮಾಸದ 13 ನೇ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಅವರ ಜನ್ಮಸ್ಥಳ ಕುಂಡಲಗ್ರಾಮ, ಬಿಹಾರದಲ್ಲಿದೆ. ಇಲ್ಲಿ ಭಗವಾನ್ ಮಹಾವೀರನ ಹಲವಾರು ದೇವಾಲಯಗಳು ಇಂದು ಅಸ್ತಿತ್ವದಲ್ಲಿವೆ. ಅವರನ್ನು ಜೈನ ಧರ್ಮದ ಸ್ಥಾಪಕ ಎಂದು ಪರಿಗಣಿಸಲಾಗಿದೆ. ಇವರು ಧಾರ್ಮಿಕ ಜ್ಞಾನವನ್ನು ನೀಡುವ ಗುರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications