Exit Poll 2024: ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಮೇಲುಗೈ ಎಂದ ಎಕ್ಸಿಟ್ ಪೋಲ್
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ಇಂದು ಪೂರ್ಣಗೊಂಡಿರುವ ಹಿನ್ನೆಲೆ ಪೀಪಲ್ ಪಲ್ಸ್ ಸಂಸ್ಥೆಯು ಚುನಾವಣೋತ್ತರ ಚುನಾವಣೋತ್ತರ ಫಲಿತಾಂಶ (Exit poll) ಪ್ರಕಟಿಸಿದೆ. ಇದರಂತೆ ಈ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.
ಪೀಪಲ್ ಪಲ್ಸ್ ಹೇಳುವಂತೆ ಬಿಜೆಪಿ 102-120 ಸ್ಥಾನ ಪಡೆಯಲಿದೆ. ಶಿವಸೇನೆ (ಇಎಸ್) 42-61 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಈಗಾಗಲೇ ಬಿಜೆಪಿ ಜೊತೆಗೆ ಶಿವಸೇನೆ ಕೈಜೋಡಿಸಿದ್ದು, ಈ ಎರಡೂ ಸಂಖ್ಯೆಗಳು ಸೇರಿದರೆ ಮೈತ್ರಿ ಸರ್ಕಾರ ರಚನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದೆ.

ಇನ್ನುಳಿದಂತೆ ಎನ್ಸಿಪಿ (ಎಪಿ) 14-25 ಸ್ಥಾನ, ಐಎನ್ಸಿ (ಕಾಂಗ್ರೆಸ್) 24-44, ಶಿವಸೇನಾ (ಯುಬಿಟಿ) 21-36, ಎನ್ಸಿಪಿ (ಎಸ್ಪಿ) 28-41 ಹಾಗೂ ಇತರೆ 6-12 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ 145 ಮ್ಯಾಜಿಕ್ ನಂಬರ್ ಆಗಲಿದೆ. ಶಿವಸೇನಾ, ಬಿಜೆಪಿ ಹಾಗೂ ಎನ್ಸಿಪಿ (ಎಪಿ) ಒಳಗೊಂಡ ಮಹಾಯುತಿ ಒಕ್ಕೂಟವು 175ರಿಂದ 195 ಸ್ಥಾನಗಳನ್ನು ಪಡೆಯಲಿದ್ದು, ಮಹಾ ವಿಕಾಸ್ ಅಘಾಡಿಯು 85ರಿಂದ 112 ಸ್ಥಾನಗಳನ್ನು ಪಡೆಯಲಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಇಂದು ಮುಕ್ತಾಯಗೊಂಡ ಬೆನ್ನಲ್ಲೇ ವಿವಿಧ ಸಂಸ್ಥೆಗಳು ಚುನಾವಣೋತ್ತರ ಫಲಿತಾಂಶ (Exit poll) ಪ್ರಕಟಿಸಿವೆ. ಅದರಂತೆ ಈ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವುದು ಬಹುತೇಕ ಪಕ್ಕಾ ಎಂದು ಭವಿಷ್ಯ ನುಡಿದಿವೆ.
ಎಲೆಕ್ಟೋರಲ್ ಎಡ್ಜ್ ಸಂಸ್ಥೆಯ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ 78 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ 60, ಎನ್ಸಿಪಿ-ಎಸ್ಪಿ 46, ಶಿವಸೇನಾ (ಯುಬಿಟಿ) 44, ಎಸ್ಎಚ್ಎಸ್ 26, ಎನ್ಸಿಪಿ-ಎಪಿ 14 ಹಾಗೂ ಇತರೆ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಡಲಿದ್ದು, ಮೈತ್ರಿ ಸರ್ಕಾರ ರಚನೆಯಾಗುವ ಸುಳಿವನ್ನು ಈ ಸಮೀಕ್ಷೆ ಹೇಳುತ್ತಿದೆ. ಇನ್ನು ಮತ ಹಂಚಿಕೆ ನೋಡುವುದಾದರೆ.. ಬಿಜೆಪಿಗೆ ಶೇ 24ರಷ್ಟಿದ್ದರೆ, ಕಾಂಗ್ರೆಸ್ (ಶೇ 17), ಎಸ್ಎಸ್ಯುಬಿಟಿ (ಶೇ 15), ಎನ್ಸಿಪಿ-ಎಸ್ಪಿ (ಶೇ 14), ಇತರೆ (ಶೇ 14), ಎಸ್ಎಚ್ಎಸ್ (ಶೇ 10), ಎನ್ಸಿಪಿ-ಎಪಿ (ಶೇ 6) ಪಾಲಾಗಿವೆ ಎಂದು ಹೇಳಿದೆ.
ಎಬಿಪಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಮಹಾರಾಷ್ಟ್ರದಲ್ಲಿ ಈ ಬಾರಿ ಬಿಜೆಪಿ-ಮಹಾಯುತಿಗೆ 150-170 ಸ್ಥಾನಗಳು, ಕಾಂಗ್ರೆಸ್-ಎಂವಿಎಗೆ 110-130 ಸ್ಥಾನಗಳು ಮತ್ತು ಇತರರಿಗೆ 8-10 ಸ್ಥಾನಗಳು ಸಿಗಲಿವೆ ಎಂದು ಹೇಳಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications