ಪ್ರಶ್ನೆಗಾಗಿ ಲಂಚ ಪ್ರಕರಣ: ಸಂಸದೀಯ ಸಮಿತಿ ವಿರುದ್ಧ ಮಹುವಾ ಮೊಯಿತ್ರಾ ಆರೋಪ
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಬುಧವಾರ ಸಂಸದೀಯ ಸಮಿತಿಗೆ ಎರಡು ಪುಟಗಳ ಪತ್ರವನ್ನು ಬರೆದಿದ್ದು,ಸಮಿತಿಯು ಮಾಧ್ಯಮಗಳಿಗೆ ಪ್ರಶ್ನೆಗಾಗಿ ಲಂಚ ಪ್ರಕರಣದ ಕುರಿತು ಸಮನ್ಸ್ ಅನ್ನು ಬಿಡುಗಡೆ ಮಾಡಿದೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಂಸತ್ತಿನಲ್ಲಿ ಅದಾನಿ ಗ್ರೂಪ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮೊಯಿತ್ರಾ ಲಂಚ ಪಡೆಯುತ್ತಿದ್ದರು ಎಂದು ಆರೋಪ ಮಾಡಿರುವ ಕೈಗಾರಿಕೋದ್ಯಮಿ ದರ್ಶನ್ ಹಿರಾನಂದಾನಿ ಅವರನ್ನು ವಿಚಾರಣೆ ಮಾಡುವಂತೆ ಪತ್ರದಲ್ಲಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

"ಎಥಿಕ್ಸ್ ಕಮಿಟಿಯು ನನ್ನ ಸಮನ್ಸ್ ಅನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಲು ಸೂಕ್ತವೆಂದು ಪರಿಗಣಿಸಿರುವುದರಿಂದ ನಾಳೆ ನನ್ನ ವಿಚಾರಣೆಗೆ ಮುಂಚಿತವಾಗಿ ಸಮಿತಿಗೆ ನನ್ನ ಪತ್ರವನ್ನು ಬಿಡುಗಡೆ ಮಾಡುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಎಕ್ಸ್ (ಟ್ವಿಟರ್) ನಲ್ಲಿ ಬರೆದಿದ್ದಾರೆ.
ವಿಚಾರಣೆಗೆ ಹಾಜರಾಗಲು ಒತ್ತಾಯ
ಲೋಕಸಭೆಯ ನೈತಿಕ ಸಮಿತಿಗೆ ವಿಚಾರಣೆಯ ದಿನಾಂಕವನ್ನು ಮುಂದೂಡುವಂತೆ ವಿನಂತಿಸಿದ ಹೊರತಾಗಿಯೂ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಿದರು ಎಂದು ಮೊಯಿತ್ರಾ ಆರೋಪಿಸಿದರು.
ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಉದ್ದೇಶಿಸಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಅಸಂಸದೀಯ ಪದಗಳನ್ನು ಬಳಸಿರುವ ಪ್ರಕರಣವನ್ನು ಉಲ್ಲೇಖಿಸಿದ್ದು, ಒಬ್ಬರಿಗೊಂದು ಮತ್ತೊಬ್ಬರಿಗೊಂದು ನಿಯಮ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ಪ್ರತಿಯಾಗಿ ಉಡುಗೊರೆಗಳನ್ನು ನೀಡಿದ್ದೇನೆ ಎಂದು ಉದ್ಯಮಿ ಈ ಹಿಂದೆ ಸಮಿತಿಗೆ ಅಫಿಡವಿಟ್ನಲ್ಲಿ ತಿಳಿಸಿದ್ದರು, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಈ ವಿಷಯವನ್ನು ಮೊದಲ ಬಾರಿಗೆ ಪ್ರಸ್ತಾಪಿಸಿದಾಗಿನಿಂದ ಮೋಯಿತ್ರಾ ಹಲವು ಬಾರಿ ಆರೋಪವನ್ನು ನಿರಾಕರಿಸುತ್ತಿದ್ದಾರೆ.
ಗೌತಮ್ ಅದಾನಿಯನ್ನು ಗುರಿಯಾಗಿಸಿ ಪ್ರಧಾನಿ ಮೋದಿ ಮೇಲೆ ಆರೋಪ ಮಾಡಿದ್ದು ಮುಜುಗರಕ್ಕೆ ಗುರಿಪಡಿಸಿದ್ದಾರೆ ಎಂದು ದರ್ಶನ್ ಹಿರಾನಂದಾನಿ ಹೇಳಿದ್ದರು. ಸಂಸತ್ತಿನಲ್ಲಿ ಅದಾನಿ ಗ್ರೂಪ್ ಮೇಲೆ ದಾಳಿ ನಡೆಸಿದ ಆಧಾರದ ಮೇಲೆ ಮೊಯಿತ್ರಾ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಹಿರಾನಂದಾನಿ ಅವರನ್ನು 'ಲಂಚ ನೀಡುವವರು' ಎಂದು ಕರೆದ ಟಿಎಂಸಿ ಸಂಸದರು, ಉದ್ಯಮಿಯ ಆರೋಪಗಳು ಕಡಿಮೆ ವಿವರಗಳೊಂದಿಗೆ ಮತ್ತು ಸಾಕ್ಷ್ಯಗಳ ಕೊರತೆಯಿಂದ ಕೂಡಿದೆ ಎಂದು ಹೇಳಿದರು.
ಸಮಿತಿಯು ಪ್ರಕರಣದ ಕುರಿತು ವರದಿಯನ್ನು ಕೇಳಿರುವ ಸಂಬಂಧಿತ ಇಲಾಖೆಗಳನ್ನು ಅಡ್ಡ ಪರೀಕ್ಷೆಗೆ ಒಳಪಡಿಸಬೇಕೆಂದು ಅವರು ಒತ್ತಾಯಿಸಿದರು. ಅಂತಹ ಪ್ರಕರಣಗಳ ಕುರಿತು ಸಮಿತಿಯ ಅಧಿಕಾರ ವ್ಯಾಪ್ತಿ ಇಲ್ಲದಿರುವುದರಿಂದ ಅಂತಹ ಆಪಾದಿತ ಅಪರಾಧವನ್ನು ತನಿಖೆ ಮಾಡಲು ನೈತಿಕ ಸಮಿತಿಯು ಸರಿಯಾದ ವೇದಿಕೆಯಾಗಿದೆಯೇ ಎಂದು ಅವರು ಕೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications