ಮೈನ್ಪುರಿ ಉಪಚುನಾವಣೆ 2022: ಡಿಂಪಲ್ ಯಾದವ್ ಎಸ್ಪಿ ಅಭ್ಯರ್ಥಿ
ಲಕ್ನೋ ನವೆಂಬರ್ 10: ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಮೈನ್ಪುರಿ ಲೋಕಸಭಾ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ಮೈನ್ಪುರಿ ಲೋಕಸಭಾ ಕ್ಷೇತ್ರವು ತೆರವಾಗಿದ್ದು, ಉಪಚುನಾವಣೆ ನಡೆಯುತ್ತಿದೆ. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಎಸ್ಪಿ ನಾಮನಿರ್ದೇಶನ ಮಾಡಿದೆ.
ಡಿಂಪಲ್ ಯಾದವ್ ಅವರನ್ನು ಸ್ಪರ್ಧಿಸಬೇಕು ಎಂದು ಎಸ್ಪಿ ವಕ್ತಾರ ಅನುರಾಗ್ ಭದೌರಿಯಾ ಅವರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಮತ್ತು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ದಾಖಲೆ ಮತಗಳಿಂದ ಗೆದ್ದು ಡಿಂಪಲ್ ಯಾದವ್ ಅವರನ್ನು ಲೋಕಸಭೆಗೆ ಕಳುಹಿಸಲು ಪಕ್ಷ ಯೋಚಿಸಿದೆ.

ಹಲವು ರಾಜ್ಯಗಳ ಐದು ವಿಧಾನಸಭಾ ಸ್ಥಾನಗಳು ಹಾಗೂ ಉತ್ತರಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರಕ್ಕೆ ಡಿಸೆಂಬರ್ 5ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ವಿಧಾನಸಭೆ ಸ್ಥಾನಗಳು ಉತ್ತರಪ್ರದೇಶ, ಒಡಿಶಾ, ಬಿಹಾರ ಹಾಗೂ ಛತ್ತೀಸ್ಗಢದಲ್ಲಿ ಹರಡಿಕೊಂಡಿವೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದಾಗಿ ಮೈನ್ಪುರಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ 2019ರಿಂದ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿತರಾಗಿ, ಶಿಕ್ಷೆಗೆ ಗುರಿಯಾದ ನಂತರ ಅನರ್ಹಗೊಳಸಲ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ರಾಂಪುರ ವಿಧಾನಸಭಾ ಸ್ಥಾನವು ತೆರವಾಗಿತ್ತು.
ಇನ್ನೂ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಒಡಿಶಾದ ಪಡಂಪುರ, ರಾಜಸ್ಥಾನದ ಸರ್ದರ್ಶಹರ್, ಬಿಹಾರದ ಕುರ್ಹಾನಿ ಹಾಗೂ ಛತ್ತೀಸ್ಗಢದ ಭಾನುಪ್ರತಾಪುರ್ದಲ್ಲಿ ಡಿ.5ರಂದು ಉಪಚುನಾವಣೆಯಲ್ಲಿ ಮತದಾನ ನಡೆಯಲಿದೆ. ಎಲ್ಲಾ ಉಪಚುನಾವಣೆಯ ಮತ ಎಣಿಕೆ ಡಿಸೆಂಬರ್ 8ರಂದು ನಡೆಯಲಿದೆ. ಡಿಸೆಂಬರ್ 8ರಂದು ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications