ಕೋಲ್ಕತ್ತಾ : ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಆಕಸ್ಮಿಕ
ಕೋಲ್ಕತ್ತಾ, ಸೆಪ್ಟೆಂಬರ್ 16 : ಕೋಲ್ಕತ್ತಾದ ಪ್ರಮುಖ ವ್ಯಾಪಾರಿ ಕೇಂದ್ರದಲ್ಲಿ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ. 30 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿವೆ.
ಕೋಲ್ಕತ್ತಾದ ಭಾಗ್ರಿ ಮಾರ್ಕೆಟ್ನಲ್ಲಿ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಹುಹಂತದ ಕಟ್ಟಡದ ಹಲವು ಮಹಡಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಸಿಗರೇಟಿನಿಂದಾಗಿ ಸುಟ್ಟು ಕರಕಲಾಯಿತು ಬಹುಮಹಡಿ ಕಟ್ಟಡ
ಅಗ್ನಿ ಆಕಸ್ಮಿಕದಲ್ಲಿ ಇದುವರೆಗೂ ಯಾವುದೇ ಪ್ರಾಣಹಾನಿಯಾಗಿಲ್ಲ. ಮಾರುಕಟ್ಟೆಯ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
ಹೊತ್ತಿ ಉರಿದ 20 ಎಕರೆ ತೋಟ, ರೈತರ ಶ್ರಮ ಕ್ಷಣದಲ್ಲಿ ಬೂದಿ
30 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ಮೂರು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಮಾರುಕಟ್ಟೆಯ ಕೆಳಗಿನ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು, 5 ಗಂಟೆಗಳ ಕಾರ್ಯಾಚರಣೆ ಬಳಿಕವೂ ನಮಗೆ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ಬೆಂಕಿ ದುರಂತ ನಂತರ ಚೇತರಿಕೆಯತ್ತ ಕೆ.ಆರ್. ಮಾರ್ಕೆಟ್: ಚಿತ್ರಗಳು
ಮಾರುಕಟ್ಟೆ ಕಟ್ಟಡದ ಸುತ್ತಮುತ್ತಲೂ ಹೆಚ್ಚು ಜಾಗವಿಲ್ಲ. ಆದ್ದರಿಂದ, ಹೈಡ್ರಾಲಿಕ್ ಉಪಕರಣಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.