ತಿರುಪತಿ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ
ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದಾಗಿ ಯಾರಿಗೂ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
#WATCH | A fire broke out in a photo frames manufacturing unit located in a building, in Tirupati, today; no casualties were reported#AndhraPradesh pic.twitter.com/GUDR7TE9YH
— ANI (@ANI) June 16, 2023
ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ದೇವಸ್ಥಾನದ ಸಮೀಪವಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಕಿಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಾಲಯದ ಬಳಿ ಬೆಂಕಿ ಮತ್ತು ಭಾರಿ ಹೊಗೆಯನ್ನು ನೋಡಬಹುದಾಗಿದೆ. ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.












Click it and Unblock the Notifications