Get Updates
Get notified of breaking news, exclusive insights, and must-see stories!

ಅಸ್ಸಾಂ : ಭಯೋತ್ಪಾದಕರ ಸಂಚು ವಿಫಲಗೊಳಿಸಿದ ಸೇನೆ

ನವದೆಹಲಿ, ಆಗಸ್ಟ್ 14 : ಅಸ್ಸಾಂನಲ್ಲಿ ಸಂಭವಿಸಬಹುದಾಗಿದ್ದ ಭಾರೀ ಭಯೋತ್ಪಾದಕ ದಾಳಿಯನ್ನು ಸೇನೆ ವಿಫಲಗೊಳಿಸಿದೆ. ರೈಲ್ವೆ ಹಳಿಯ ಮೇಲೆ ಇಟ್ಟಿದ್ದ ಸ್ಫೋಟಕಗಳನ್ನು ಸೇನೆ ವಶಪಡಿಸಿಕೊಂಡಿದ್ದು, ನಿಷ್ಕ್ರಿಯಗೊಳಿಸಿದೆ.

ಕೋಕ್ರಾಜಾರ್-ಗೌಹಾತಿ ರೈಲ್ವೆ ಹಳಿಯ ಮೇಲೆ ಇಡಲಾಗಿದ್ದ 7 ಕೆಜಿ ಸ್ಫೋಟಕಗಳನ್ನು ಸೇನಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ. ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ ಸೂಚನೆ ರವಾನಿಸಿತ್ತು.

assam

ಪಂಜಾಬ್ ಮತ್ತು ಜಮ್ಮು-ಕಾಶ್ಮೀರದ ಉಧಾಂಪುರ್‌ನಲ್ಲಿ ಕೆಲವು ದಿನಗಳ ಹಿಂದೆ ಭಯೋತ್ಪಾದಕ ದಾಳಿ ನಡೆದಿತ್ತು. ಉಧಾಂಪುರ್‌ನಲ್ಲಿ ಉಗ್ರ ಮೊಹಮ್ಮದ್ ನವೀದ್‌ನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿತ್ತು. ಆದ್ದರಿಂದ ದೇಶದ ಇತರ ರಾಜ್ಯಗಳಲ್ಲಿ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ. [ಉಗ್ರ ನವೀದ್‌ NIA ವಶಕ್ಕೆ]

ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+