ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ : ಭಯೋತ್ಪಾದಕರ ಸಂಚು ವಿಫಲಗೊಳಿಸಿದ ಸೇನೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಆಗಸ್ಟ್ 14 : ಅಸ್ಸಾಂನಲ್ಲಿ ಸಂಭವಿಸಬಹುದಾಗಿದ್ದ ಭಾರೀ ಭಯೋತ್ಪಾದಕ ದಾಳಿಯನ್ನು ಸೇನೆ ವಿಫಲಗೊಳಿಸಿದೆ. ರೈಲ್ವೆ ಹಳಿಯ ಮೇಲೆ ಇಟ್ಟಿದ್ದ ಸ್ಫೋಟಕಗಳನ್ನು ಸೇನೆ ವಶಪಡಿಸಿಕೊಂಡಿದ್ದು, ನಿಷ್ಕ್ರಿಯಗೊಳಿಸಿದೆ.

ಕೋಕ್ರಾಜಾರ್-ಗೌಹಾತಿ ರೈಲ್ವೆ ಹಳಿಯ ಮೇಲೆ ಇಡಲಾಗಿದ್ದ 7 ಕೆಜಿ ಸ್ಫೋಟಕಗಳನ್ನು ಸೇನಾ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ. ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ ಸೂಚನೆ ರವಾನಿಸಿತ್ತು.

assam

ಪಂಜಾಬ್ ಮತ್ತು ಜಮ್ಮು-ಕಾಶ್ಮೀರದ ಉಧಾಂಪುರ್‌ನಲ್ಲಿ ಕೆಲವು ದಿನಗಳ ಹಿಂದೆ ಭಯೋತ್ಪಾದಕ ದಾಳಿ ನಡೆದಿತ್ತು. ಉಧಾಂಪುರ್‌ನಲ್ಲಿ ಉಗ್ರ ಮೊಹಮ್ಮದ್ ನವೀದ್‌ನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿತ್ತು. ಆದ್ದರಿಂದ ದೇಶದ ಇತರ ರಾಜ್ಯಗಳಲ್ಲಿ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ. [ಉಗ್ರ ನವೀದ್‌ NIA ವಶಕ್ಕೆ]

ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

English summary
A major tragedy has been averted with the army foiling a bid by terrorists attempting to blow up the railway track in Assam on Friday, August 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X