ಕಾಶ್ಮೀರಿ ಯುವಕನನ್ನು ಜೀಪಿಗೆ ಕಟ್ಟಿದ 'ಮೇಜರ್'ಗೆ ಸೇನೆಯಿಂದ ಸನ್ಮಾನ
ಬಂಡುಕೋರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಕ್ಕೆ ಮೇಜರ್ ಗೆ ಪದಕ ಪ್ರದಾನ ಮಾಡಲಾಗಿದೆ. ಆದರೆ ಕಾಶ್ಮೀರಿ ಯುವಕನನ್ನು ಜೀಪಿಗೆ ಕಟ್ಟಿದ್ದಕ್ಕೇ ಈ ಸನ್ಮಾನವೋ ಎಂಬುದನ್ನು ಸೇನೆ ಸ್ಪಷ್ಟಪಡಿಸಿಲ್ಲ.
ಕಾಶ್ಮೀರ, ಮೇ 22: ಕಲ್ಲು ತೂರಾಟಗಾರರನ್ನು ಹಾದು ಹೋಗಲು ಸೇನೆಯ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನೇ ಕಟ್ಟಿ ಮಾನವ ಗುರಾಣಿಯಂತೆ ಬಳಸಿಕೊಂಡ ಮೇಜರ್ ತರುಣ್ ಗೊಗೋಯಿಗೆ ಸೇನೆಯೇ ಸನ್ಮಾನ ಮಾಡಿದೆ.
ಗಲಭೆ ನಿಯಂತ್ರಣ ಕಾರ್ಯಾಚರಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕೆ ಮೇಜರ್ ಗೆ ಸೇನಾ ಮುಖ್ಯಸ್ಥರ ಮೆಚ್ಚುಗೆ ಪತ್ರ ಹಾಗೂ ಪದಕ ಪ್ರದಾನ ಮಾಡಲಾಗಿದೆ. ಆದರೆ ಕಾಶ್ಮೀರಿ ಯುವಕನನ್ನು ಜೀಪಿಗೆ ಕಟ್ಟಿದ್ದಕ್ಕೇ ಈ ಸನ್ಮಾನವೋ ಎಂಬುದನ್ನು ಸೇನೆ ಸ್ಪಷ್ಟಪಡಿಸಿಲ್ಲ.

ಏಪ್ರಿಲ್ 9ರಂದು ಕಾಶ್ಮೀರದಲ್ಲಿ ಉಪ ಚುನಾವಣೆ ವೇಳೆ ಬುದ್ಗಾಮ್ ಜಿಲ್ಲೆಯಲ್ಲಿ ಫಾರೂಕ್ ಅಹ್ಮದ್ ಧರ್ ರನ್ನು ಸೇನೆಯ ವಾಹನದ ಮುಂಭಾಗಕ್ಕೆ ಗುರಾಣಿಯಂತೆ ಕಟ್ಟಲಾಗಿತ್ತು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ನಂತರ ಸೇನೆಯ ವಿರುದ್ಧ ಮಾನವ ಹಕ್ಕುಗಳ ಹೋರಾಟಗಾರರು ವಾಗ್ದಾಳಿ ನಡೆಸಿದ್ದರು.
ಈ ಪ್ರಕರಣ ಸಂಬಂಧ ಭೂಸೇನೆಯ ನ್ಯಾಯಾಲಯ ವಿಚಾರಣೆಯನ್ನೂ ಆರಂಭಿಸಿತ್ತು. ಆದರೆ ಇದರ ತನಿಖಾ ವರದಿ ಇನ್ನೂ ಹೊರ ಬಿದ್ದಿಲ್ಲ. ಇನ್ನು ಶುಕ್ರವಾರ ಮಾತನಾಡಿದ್ದ ಅರುಣ್ ಜೇಟ್ಲಿ ಚುನಾವಣಾ ಕೆಲಸಕ್ಕೆ ತೆರಳಿದ ಸಿಬ್ಬಂದಿಗಳನ್ನು ರಕ್ಷಿಸುವುದು ಮಿಲಿಟರಿ ಅಧಿಕಾರಿಯ ಕೆಲಸ ಎಂದು ಹೇಳಿ ಸೇನಾಧಿಕಾರಿಯ ಕ್ರಮವನ್ನು ಪರೋಕ್ಷವಾಗಿ ಬೆಂಬಲಿಸಿದ್ದರು.
ಇದಲ್ಲದೆ ಹಲವು ನಿವೃತ್ತಿ ಅಧಿಕಾರಿಗಳು ಹಾಗೂ ಸೇನಾಧಿಕಾರಿಗಳೇ ಗೊಗೋಯಿ ನಡೆಯನ್ನು ಬೆಂಬಲಿಸಿದ್ದರು. ಮಾತ್ರವಲ್ಲ ಕಾಶ್ಮೀರದಲ್ಲಿ ಕಲ್ಲು ತೂರುವವರಿಗೆ ಹೀಗೆಯೇ ಮಾಡಬೇಕು ಎಂದೂ ಹೇಳಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications