'ಬಹುಸಂಖ್ಯೆಯ ಮುಸ್ಲಿಮರೂ ರಾಮಮಂದಿರ ನಿರ್ಮಾಣ ಬಯಸುತ್ತಿದ್ದಾರೆ'
ಲಕ್ನೋ, ಆಗಸ್ಟ್ 21: ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಬಹುಸಂಖ್ಯೆಯ ಮುಸ್ಲಿಮರು ಬಯಸುತ್ತಿದ್ದಾರೆ ಎಂಬುದಾಗಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಅಯೋಧ್ಯಾ ವಿವಾದವನ್ನು ಕಾಂಗ್ರೆಸ್ ಪಕ್ಷವು ರಾಜಕೀಯ ವಿಷಯವನ್ನಾಗಿ ನೋಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಶ್ರೀರಾಮನ ಇತರೆ ಭಕ್ತರಂತೆಯೇ ಅಯೋಧ್ಯಾದಲ್ಲಿ ಆದಷ್ಟು ಬೇಗನೇ ರಾಮಮಂದಿರ ನಿರ್ಮಾಣ ಆಗಬೇಕು ಎಂದು ನಾನು ಕೂಡ ಬಯಸಿದ್ದೇನೆ. ಪ್ರಸ್ತುತ ಈ ವಿವಾದವು ಸುಪ್ರೀಂಕೋರ್ಟ್ನಲ್ಲಿದೆ. ಅದರ ತೀರ್ಪಿಗಾಗಿ ನಾವು ಕಾದಿದ್ದೇವೆ. ಬಿಜೆಪಿಯು ಯಾವಾಗಲೂ ರಾಮಮಂದಿರ ನಿರ್ಮಾಣದ ಪರವಾಗಿ ಇದೆ. ಇದು ರಾಜಕೀಯ ವಿಷಯವಲ್ಲ. ಮಿಗಿಲಾಗಿ ಇದು ನಮ್ಮ ನಂಬಿಕೆಗೆ ಸಂಬಂಧಿಸಿದ್ದು ಎಂದು ಮೌರ್ಯ ತಿಳಿಸಿದ್ದಾರೆ.

ನಾವು ಲೋಕಸಭೆಯಲ್ಲಿ ಬಹುಮತ ಹೊಂದಿದ್ದೇವೆ. ಆದರೆ, ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಸೂದೆ ಅಂಗೀಕರಿಸಲು ರಾಜ್ಯಸಭೆಯಲ್ಲಿ ಅಗತ್ಯ ಬೆಂಬಲವಿಲ್ಲ.
ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಕೂಡ ರಾಮ ಮಂದಿರ ನಿರ್ಮಾಣವನ್ನು ಅಪೇಕ್ಷಿಸಿದ್ದಾರೆ. ಆದರೆ, ಕೆಲವು ರಾಜಕೀಯ ಕಾರಣಗಳಿಂದ, ಮುಖ್ಯವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ನಲ್ಲಿ ಸತತ ವಿಚಾರಣೆ ನಡೆಯುವುದನ್ನು ಬಯಸುತ್ತಿಲ್ಲ. ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣ ಆಗುವುದನ್ನು ಅವರು ಇಷ್ಟಪಡುತ್ತಿಲ್ಲ ಎಂದು ದೂರಿದರು.
ಇದಕ್ಕೂ ಮುನ್ನ ಸೋಮವಾರ ಅವರು, ವಿವಾದ ಬಗೆ ಹರಿಸುವುದಕ್ಕೆ ಎರಡು ಆಯ್ಕೆಗಳನ್ನು ನೀಡಿದ್ದರು. ಅಯೋಧ್ಯಾ ಭೂಮಿಯ ಹಕ್ಕುದಾರರ ನಡುವೆ ಮಾತುಕತೆ ಆರಂಭಿಸಬಹುದು ಅಥವಾ ಸಂಸತ್ನಲ್ಲಿ ಕಾನೂನು ಅಂಗೀಕರಿಸಬಹುದು ಎಂದಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications