ಮತ ಓಲೈಕೆಯ ಪರಮಾವಧಿ: ಯಾಕೂಬ್ ಪತ್ನಿಗೆ ಎಂಪಿ ಟಿಕೆಟ್?
ಮುಂಬೈ, ಆಗಸ್ಟ್ 1: ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ ಯಾಕೂಬ್ ಮೆಮನ್ ಅಂತ್ಯಸಂಸ್ಕಾರದ ವೇಳೆ, ಆತನನ್ನು ಮುಂಬೈನ ಕೆಲ ಮತಾಂಧರು ಹುತಾತ್ಮನ ರೀತಿಯಲ್ಲಿ ಬೀಳ್ಕೊಟ್ಟ ದುರಂತ ನಮ್ಮ ಮುಂದಿದೆ.
ಈಗ ಮತಬ್ಯಾಂಕ್ ಓಲೈಕೆಯ ಪರಮಾವಧಿ ಎನ್ನುವಂತೆ ಯಾಕೂಬ್ ಮೆಮನ್ ಪತ್ನಿಗೆ ರಾಜ್ಯಸಭೆಯಲ್ಲಿ ಸ್ಥಾನ ನೀಡುವಂತೆ ಸಮಾಜವಾದಿ ಪಕ್ಷದ ಮುಖಂಡರೊಬ್ಬರು ಒತ್ತಾಯಿಸಿದ್ದಾರೆ.
ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದ ಉಪಾಧ್ಯಕ್ಷ ಫಾರೂಕ್ ಘೋಷಿ, ಮೆಮನ್ ಪತ್ನಿ ರಹೀನ್ ಅವರಿಗೆ ಪಕ್ಷದ ಟಿಕೆಟಿನಿಂದ ರಾಜ್ಯಸಭೆಗೆ ಆಯ್ಕೆ ಮಾಡಬೇಕೆಂದು ಮುಲಾಯಂ ಸಿಂಗ್ ಯಾದವ್ ಅವರಿಗೆ ಪತ್ರ ಬರೆದಿದ್ದಾರೆ.
ಮಾಡದಿದ್ದ ತಪ್ಪಿಗಾಗಿ ಯಾಕೂಬ್ ಮೆಮನ್ ಅವನಿಗೆ ಗಲ್ಲು ಶಿಕ್ಷೆಯಾಗಿದ್ದು, ಇದರಿಂದ ಮೆಮನ್ ಪತ್ನಿಗೆ ಅನ್ಯಾಯವಾಗಿದೆ. ಮೆಮನ್ ಪತ್ನಿಯೂ ಈ ಹಿಂದೆಯೂ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾರೆ.
ಟೈಗರ್ ಮೆಮನ್ ಸಹೋದರ ಎನ್ನುವ ಕಾರಣಕ್ಕಾಗಿ ಯಾಕೂಬ್ ಗೆ ಶಿಕ್ಷೆಯಾಗಿದೆ. ಮೆಮನ್ ಪತ್ನಿಗೆ ರಾಜ್ಯಸಭೆ ಸದಸ್ಯತ್ವ ನೀಡಬೇಕೆಂದು ಎಸ್ಪಿ ಮುಖಂಡ ಪತ್ರ ಮುಖೇನ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಆದರೆ ಫಾರೂಕ್ ಹೇಳಿಕೆಗೆ ಎಸ್ಪಿ ಹೆಚ್ಚಿನ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಂಡಿದ್ದು, ಫಾರೂಕ್ ಹೇಳಿಕೆ ತಪ್ಪು ಎಂದು ಹೇಳಿ ನುಣುಚಿಕೊಂಡಿದೆ.
ಇದೀಗ ಬಂದ ವರದಿಯ ಪ್ರಕಾರ ಸಮಾಜವಾದಿ ಪಕ್ಷ, ವಿವಾದಕಾರಿ ಪತ್ರ ಬರೆದಿದ್ದ ಮಹಾರಾಷ್ಟ್ರ ಘಟಕದ ಉಪಾಧ್ಯಕ್ಷ ಫಾರೂಕ್ ಘೋಷಿ ಅವರನ್ನು ಆ ಸ್ಥಾನದಿಂದ ವಜಾಗೊಳಿಸಿದೆ.
ಕಾಂಗ್ರೆಸ್ ಮುಖಂಡರೂ ಏನೂ ಕಮ್ಮಿಯಿಲ್ಲ..

ಕಾಂಗ್ರೆಸ್ ಮುಖಂಡರು
1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಮೆಮನ್ ನೇಣು ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ್ ಸಿಂಗ್ ಹಾಗೂ ಶಶಿ ತರೂರ್ ನೀಡಿರುವ ಹೇಳಿಕೆ ಹೊಸ ವಿವಾದವನ್ನು ಹುಟ್ಟು ಹಾಕಿತ್ತು.
|
ಶಶಿ ತರೂರ್
ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಾಗಿರುವುದು ಎಲ್ಲರ ಧರ್ಮ. ಆದರೆ, ಮರಣದಂಡನೆ ಶಿಕ್ಷೆ ಎಲ್ಲಿಯೂ ಭಯೋತ್ಪಾದನೆಯನ್ನು ತಡೆದಿಲ್ಲ ಎಂದು ಶಸಿ ತರೂರ್ ಅಭಿಪ್ರಾಯ ಪಟ್ಟಿದ್ದಾರೆ.
|
ದಿಗ್ವಿಜಯ್ ಸಿಂಗ್
ಉಗ್ರ ಕೃತ್ಯದ ಅಪರಾಧಿಯೊಬ್ಬನನ್ನು ಶಿಕ್ಷಿಸುವಲ್ಲಿ ಸರ್ಕಾರ ಹಾಗೂ ನ್ಯಾಯಾಂಗ 'ಮಾದರಿ' ಎನಿಸುವಷ್ಟು ತುರ್ತು ಹಾಗೂ ಬದ್ಧತೆಯನ್ನು ತೋರಿದೆ. ಯಾವುದರ ಹಂಗಿಲ್ಲದೇ ಉಗ್ರ ಕೃತ್ಯದಾ ಎಲ್ಲಾ ಪ್ರಕರಣಗಳಲ್ಲಿ ಸರ್ಕಾರ ಹಾಗೂ ನ್ಯಾಯಾಂಗ ಇದೇ ರೀತಿಯ ಬದ್ಧತೆ ತೋರಲಿದೆ ಎನ್ನುವ ಭರವಸೆ ನನ್ನದು ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದರು.
|
ತ್ರಿಪುರ ರಾಜ್ಯಪಾಲ
ಯಾಕೂಬ್ ಮೆಮನ್ ಅಂತ್ಯಕ್ರಿಯೆಯಲ್ಲಿ ಹಾಜರಾಗಿದ್ದವರು 'ಸಂಭಾವ್ಯ ಭಯೋತ್ಪಾದಕರು'ಎಂದು ತ್ರಿಪುರ ರಾಜ್ಯಪಾಲ ತಥಾಗತ ರಾಯ್ ಟ್ವೀಟ್ ಮಾಡಿ ಬೇಸರ ವ್ಯಕ್ತ ಪಡಿಸಿದ್ದರು.

ಕೆಂಡಕಾರಿದ ಬಿಜೆಪಿ
ಯಾಕೂಬ್ ಮೆಮನ್ ಗಲ್ಲು ಶಿಕ್ಷೆಯ ಬಗ್ಗೆ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆ ವಿರುದ್ದ ಬಿಜೆಪಿ ಕಿಡಿಕಾರಿದೆ. ಇದೊಂದು 'ಬೇಜವಾಬ್ದಾರಿಯುತ' ಹೇಳಿಕೆ. ಈ ಸಂಬಂಧ ಸೋನಿಯಾ ಗಾಂಧಿ ದೇಶದ ಎದುರು ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications