ಕೇರಳ ನಟಿ ಮೈಥಿಲಿ ಖಾಸಗಿ ಚಿತ್ರಗಳು ಸೋರಿಕೆ
ತಿರುವನಂತಪುರಂ, ಜುಲೈ 24: ಕೇರಳ ಚಿತ್ರರಂಗದಲ್ಲಿ ಕಲಾವಿದೆಯರಿಗೆ ರಕ್ಷಣೆ ಇಲ್ಲ ಎಂಬ ಮಾತಿಗೆ ಬಲವಾಗಿ ಪುಷ್ಟಿ ನೀಡುವ ಸುದ್ದಿಯೊಂದು ಮಾಲಿವುಡ್ ಅಂಗಳದಿಂದ ತೂರಿ ಬಂದಿದೆ. ಜನಪ್ರಿಯ ನಟಿ ಮೈಥಿಲಿ ಅವರ ಖಾಸಗಿ ಚಿತ್ರಗಳನ್ನು ಆನ್ ಲೈನ್ ನಲ್ಲಿ ಸೋರಿಕೆ ಮಾಡಲಾಗಿದೆ.
ಈ ಕುರಿತಂತೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ, ತನಿಖೆ ಬಳಿಕ, ಮೈಥಿಲಿ ಅವರಿಗೆ ತುಂಬಾ ಬೇಕಾಗಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಪ್ರೊಡೆಕ್ಷನ್ ವಿಭಾಗದಲ್ಲಿ ಕಾರ್ಯಕಾರಿ ಹುದ್ದೆಯಲ್ಲಿರುವ ಕಿರಣ್ ಕುಮಾರ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. 2008ರಿಂದ ಮೈಥಿಲಿ ಜತೆ ಗೆಳೆತನ ಹೊಂದಿರುವ ಈತನ ಉದ್ದೇಶ ಏನು ಎಂಬುದು ಸ್ಪಷ್ಟವಾಗಿಲ್ಲ. ಆತನಿಗೆ ಮದುವೆಯಾಗಿದೆ ಎಂಬ ಸತ್ಯ ತಿಳಿದ ನಂತರ ಅವನ ಗೆಳೆತನಕ್ಕೆ ಮೈಥಿಲಿ ಫುಲ್ ಸ್ಟಾಪ್ ಇಟ್ಟಿದ್ದರು.

ಮೈಥಿಲಿಯ ವೈಯಕ್ತಿಕ ಬದುಕಿನ ಚಿತ್ರಗಳನ್ನು ಸಂಪಾದಿಸಿದ್ದ ಕಿರಣ್, ಆಕೆಗೆ ಬೆದರಿಕೆ ಒಡ್ಡಿ, ಹಣಕ್ಕಾಗಿ ಬೇಡಿಕೆ ಇಟ್ಟಿರುವ ಸಾಧ್ಯತೆಯಿದೆಯೂ ಇದೆ ಎಂದು ಎರ್ನಾಕುಲಂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಾಥಮಿಕ ತನಿಖೆ ನಂತರ ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಚಿತ್ರಗಳನ್ನು ಹಂಚಲು ಕೆಲವರನ್ನು ಬಳಸಿಕೊಂಡಿದ್ದ. ಈ ರೀತಿ ಚಿತ್ರಗಳನ್ನು ಹಂಚುವವರನ್ನು ಕೂಡಲೇ ಬಂಧಿಸಲಾಗುವುದು ಎಂದು ಎರ್ನಾಕುಲಂ ಎಸಿಪಿ ಕೆ ಲಾಲ್ಜಿ ಹೇಳಿದ್ದಾರೆ.
ಕಿರಣ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 354, ಐಟಿ ಕಾಯ್ದೆ 66 (ಎ) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications