ಮಾಲ್ಡೀವ್ಸ್ ಅಗ್ನಿ ಅವಘಡ: 9 ಭಾರತೀಯರು, 1 ಬಾಂಗ್ಲಾದೇಶದ ಪ್ರಜೆ ಸಾವು
ಮಾಲ್ಡೀವ್ಸ್ ನವೆಂಬರ್ 10: ಮಾಲ್ಡೀವ್ಸ್ ರಾಜಧಾನಿ ಮಾಲೆಯ ಗ್ಯಾರೇಜ್ನಲ್ಲಿ ಗುರುವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಹತ್ತು ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಗುರುವಾರ ಬೆಳಿಗ್ಗೆ ಮಾಲ್ಡೀವ್ಸ್ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಟ್ವೀಟ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. "ಮಾಲೆಯಲ್ಲಿ ಅಗ್ನ ಅವಘಡದಿಂದ ಸ್ಥಳಾಂತರಗೊಂಡ ಮತ್ತು ಹಾನಿಗೊಳಗಾದವರಿಗೆ NDMA ಕ್ರೀಡಾಂಗಣದಲ್ಲಿ ಸ್ಥಳಾಂತರಿಸುವ ಕೇಂದ್ರವನ್ನು ಸ್ಥಾಪಿಸಲಾಗಿದೆ. ಪರಿಹಾರ ನೆರವು ಮತ್ತು ಬೆಂಬಲ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಅದರಲ್ಲಿ ಪ್ರಾಣಹಾನಿಗಳ ಬಗ್ಗೆ ಯಾವುದೇ ಉಲ್ಲೇಖಿಸಿಲ್ಲ''.
ದ್ವೀಪಸಮೂಹದ ರಾಜಧಾನಿ ಮಾಲೆ ಉನ್ನತ ಮಾರುಕಟ್ಟೆಯ ರಜಾ ತಾಣವೆಂದು ಪ್ರಸಿದ್ಧವಾಗಿದೆ. ಇದು ವಿಶ್ವದ ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾಗಿದೆ. ಈ ಪ್ರದೇಶದ ನೆಲ ಅಂತಸ್ತಿನ ವಾಹನ ರಿಪೇರಿ ಗ್ಯಾರೇಜ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಕಟ್ಟಡದ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ನಾವು 10 ಶವಗಳನ್ನು ಕಂಡುಕೊಂಡಿದ್ದೇವೆ" ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳನ್ನು ತೆಗೆದುಕೊಳ್ಳಲಾಯಿತು. ಮೃತರಲ್ಲಿ ಒಂಬತ್ತು ಭಾರತೀಯರು ಮತ್ತು ಓರ್ವ ಬಾಂಗ್ಲಾದೇಶ ಪ್ರಜೆಯೂ ಸೇರಿದ್ದಾರೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಲ್ಡೀವಿಯನ್ ರಾಜಕೀಯ ಪಕ್ಷಗಳು ಘಟನೆಯನ್ನು ಟೀಕಿಸಿವೆ. ಮಾತ್ರವಲ್ಲದೆ ಇಲ್ಲಿನ ವ್ಯವಸ್ಥೇ ವಿರುದ್ಧವೂ ವಾಗ್ದಾಳಿ ನಡೆಸುತ್ತಿರುತ್ತವೆ. ಮಾಲ್ಡೀವಿನಲ್ಲಿರುವ ಜನಸಂಖ್ಯೆಯ ಅರ್ಧದಷ್ಟು ಭಾಗ ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಭಾವಿಸಲಾಗಿದೆ. ಸ್ಥಳೀಯರಿಗೆ ಹೋಲಿಸಿದರೆ ವಿದೇಶಿ ಕಾರ್ಮಿಕರಿಗೆ ಸೋಂಕು ಮೂರು ಪಟ್ಟು ಹೆಚ್ಚು. ಇದರಿಂದ ಅವರ ಕಳಪೆ ಜೀವನ ಪರಿಸ್ಥಿತಿಗಳು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಇನ್ನಷ್ಟು ಹದಗೆಟ್ಟಿದ್ದವು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications