ಮಾಲೆಗಾಂವ್ ಸ್ಫೋಟ: ಅನಾರೋಗ್ಯ ನೆಪವೊಡ್ಡಿ ಪ್ರಗ್ಯಾ ಠಾಕೂರ್ ವಿಚಾರಣೆಗೆ ಗೈರು
ನವದೆಹಲಿ, ಡಿಸೆಂಬರ್ 19: ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದ ಕಾರಣಗಳಿಂದ ಈ ವಾರಾಂತ್ಯದ ನ್ಯಾಯಾಲಯದ ವಿಚಾರಣೆಗೆ ಹಾಜರಾಗುತ್ತಿಲ್ಲ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಸಂಸದೆ ಪ್ರಗ್ಯಾ ಮತ್ತು ಇತರೆ ಆರೋಪಿಗಳು ವಿಚಾರಣಾ ನ್ಯಾಯಾಲಯದ ವಿಚಾರಣೆಯ ವೇಳೆ ಖುದ್ದು ಹಾಜರಿರುವಂತೆ ಸೂಚಿಸಲಾಗಿತ್ತು.
ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ಹೊಸದಾಗಿ ನೇಮಕಗೊಂಡಿರುವ ನ್ಯಾಯಾಧೀಶ ಪಿಆರ್ ಸಿಂಟ್ರೆ ವಿಚಾರಣೆ ನಡೆಸಲಿದ್ದಾರೆ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆಯು ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಸುದೀರ್ಘ ವಿಳಂಬದ ಬಳಿಕ ಈ ತಿಂಗಳು ಆರಂಭವಾಗಿದೆ. ಡಿಸೆಂಬರ್ ಆರಂಭದಲ್ಲಿ ವಿಚಾರಣೆ ಶುರುವಾದಾಗ ಎಲ್ಲ ಏಳು ಆರೋಪಿಗಳು ಪ್ರತಿ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಕೋರ್ಟ್ ಆದೇಶಿಸಿತ್ತು.
ಆದರೆ ಮೂವರು ಆರೋಪಿಗಳು ಮಾತ್ರವೇ ವಿಚಾರಣೆಗೆ ಹಾಜರಾಗಿದ್ದು, ಪ್ರಗ್ಯಾ ಠಾಕೂರ್, ರಮೇಶ್ ಉಪಾಧ್ಯಾಯ, ಸುಧಾಕರ್ ದ್ವಿವೇದಿ ಮತ್ತು ಸುಧಾಕರ್ ಚಥುರ್ವೇದಿ ಅವರು ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ನಾಲ್ವರು ಆರೋಪಿಗಳ ಗೈರುಹಾಜರಿಗೆ ಅಂತರ್ ರಾಜ್ಯ ಪ್ರಯಾಣದ ಮೇಲೆ ಕೋವಿಡ್ 19ರ ನಿರ್ಬಂಧಗಳನ್ನು ಕಾರಣವಾಗಿ ವಕೀಲರು ನೀಡಿದ್ದರು. ಹೀಗಾಗಿ ಡಿ. 19ರಂದು ಎಲ್ಲ ಆರೋಪಿಗಳಿಗೂ ಸಮನ್ ನೀಡಲು ವಿಶೇಷ ಎನ್ಐಎ ಕೋರ್ಟ್ ನಿರ್ಧರಿಸಿತ್ತು.

ಆದರೆ ಮುಂಬೈನ ನ್ಯಾಯಾಲಯಕ್ಕೆ ತೆರಳುವ ಮುನ್ನವಷ್ಟೇ ದೆಹಲಿಯ ಏಮ್ಸ್ನಲ್ಲಿ ತಪಾಸಣೆಗೆ ತೆರಳಿದ್ದ ಪ್ರಗ್ಯಾ ಅವರನ್ನು ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಸಾಧ್ವಿ ಅವರು ಮುಂಬೈಗೆ ಎರಡು ದಿನಗಳ ಮಟ್ಟಿಗೆ ಬರಲು ನಿರ್ಧರಿಸಿದ್ದರು. ಆದರೆ ಏಮ್ಸ್ನಲ್ಲಿ ಮಾಮೂಲಿ ತಪಾಸಣೆಗೆ ತೆರಳಿದ್ದಾಗ ಅವರು ಅಲ್ಲಿ ದಾಖಲಾಗುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವಕೀಲರು ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications