ಸರಿಯಾದ ಸಮಯಕ್ಕೆ ಕಾಯುತ್ತೇವೆ; ಮಲ್ಲಿಕಾರ್ಜುನ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ "ಜನರ ಇಚ್ಛೆಯನ್ನು ಬುಡಮೇಲು ಮಾಡುತ್ತಿದ್ದರೂ" ಸದ್ಯಕ್ಕೆ ಇಂಡಿಯಾ ಬಣವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
"ಇಂಡಿಯಾ ಒಕ್ಕೂಟವು ಫ್ಯಾಸಿಸ್ಟ್ ಆಡಳಿತವನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ. ಬಿಜೆಪಿಯಿಂದ ಆಡಳಿತ ನಡೆಸಬಾರದು ಎಂಬ ಜನರ ಬಯಕೆಯನ್ನು ಅರಿತುಕೊಳ್ಳಲು ನಾವು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ" ಎಂದು ಅವರು ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಚಂದ್ರಬಾಬು ನಾಯ್ಡು ಅವರನ್ನು ಇಂಡಿಯಾ ಒಕ್ಕೂಟದತ್ತ ಸೆಳೆಯಲು ಪ್ರಯತ್ನ ಮಾಡುವ ಸೂಚನೆ ಕೊಟ್ಟಿದ್ದಾರೆ.
ಸದ್ಯ ಎರಡು ಮಿತ್ರಪಕ್ಷಗಳು ಔಪಚಾರಿಕ ಬೆಂಬಲ ಪತ್ರಗಳೊಂದಿಗೆ ಎನ್ಡಿಎಗೆ ಬೆಂಬಲ ನೀಡಿವೆ. ಈ ಮೂಲಕ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಕನಸನ್ನು ಕೈಬಿಟ್ಟಿದ್ದು, ಕಾದು ನೋಡುವ ತಂತ್ರಕ್ಕೆ ಶರಣಾಗಿದೆ.
ಬುಧವಾರ ಮಲ್ಲಿಕಾರ್ಜುನ ಖರ್ಗೆ ತಮ್ಮ ಮನೆಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಕಾರ್ಯತಂತ್ರದ ಅಧಿವೇಶನದ ಆರಂಭದಲ್ಲಿ, ಎಲ್ಲಾ ಪಕ್ಷಗಳಿಗೂ ಬಹಿರಂಗ ಆಹ್ವಾನ ನೀಡಿದ್ದರು.
"ನಮ್ಮ ಸಂವಿಧಾನದ ಮುನ್ನುಡಿಯಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಮತ್ತು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಅದರ ಅನೇಕ ನಿಬಂಧನೆಗಳಿಗೆ ತನ್ನ ಮೂಲಭೂತ ಬದ್ಧತೆಯನ್ನು ಹಂಚಿಕೊಳ್ಳುವ ಎಲ್ಲಾ ಪಕ್ಷಗಳನ್ನು ಭಾರತ ಮೈತ್ರಿಕೂಟವು ಸ್ವಾಗತಿಸುತ್ತದೆ" ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳು ಪ್ರಧಾನಿ ಮೋದಿಯವರ ರಾಜೀನಾಮೆಗೆ ಒತ್ತಾಯಿಸಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶಗಳು ಅರವು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಜನರು ಬಯಸುತ್ತಿದ್ದಾರೆ ಎಂದರು.












Click it and Unblock the Notifications