Get Updates
Get notified of breaking news, exclusive insights, and must-see stories!

ಗೃಹಸಚಿವ ಅಮಿತ್ ಶಾ ಪತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ!

ನವದೆಹಲಿ: ದೇಶದ ಮೂಲೆ ಮೂಲೆಯಲ್ಲೂ ಈಗ ಮಣಿಪುರ ಹಿಂಸಾಚಾರ ಪ್ರತಿಧ್ವನಿಸುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಇದೇ ಅಸ್ತ್ರ ಬಳಸಿ ವಾಗ್ದಾಳಿ ನಡೆಸುತ್ತಿವೆ. ಇದೇ ಹೊತ್ತಲ್ಲಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಅಸಮಾಧಾನ ಹೊರಹಾಕಿದ್ದಾರೆ. ಹಾಗಾದರೆ ಖರ್ಗೆ ಅವರ ಪತ್ರದಲ್ಲಿ ಇರುವ ಅಂಶವಾದರೂ ಏನು? ಬನ್ನಿ ತಿಳಿಯೋಣ.

ಅಂದಹಾಗೆ ಮಣಿಪುರ ಹಿಂಸಾಚಾರ ಸಮಸ್ಯೆ ಬಗ್ಗೆ ಸಂಸತ್ತಲ್ಲಿ ಚರ್ಚಿಸಲು ಪ್ರತಿಪಕ್ಷಗಳ ಅಮೂಲ್ಯ ಸಹಕಾರ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪತ್ರ ಬರೆದಿದ್ದರು. ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಸಾಮರಸ್ಯ ರೀತಿಯಲ್ಲಿ ಕಂಡುಕೊಳ್ಳಲು ಪಕ್ಷ ಭೇದ ಮರೆತು ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಅಮಿತ್ ಶಾ ಅವರಿಗೆ ಪತ್ರವನ್ನ ಬರೆದಿದ್ದು, ಸಂಸತ್ ಅಧಿವೇಶನದಲ್ಲಿ ಮಣಿಪುರ ಹಿಂಸೆಯ ಕುರಿತು ಚರ್ಚೆ ನಡೆಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಈ ಮೂಲಕ ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ನಡುವೆ ಮಣಿಪುರ ವಿಚಾರದಲ್ಲಿ ಕಿರಿಕ್ ಮತ್ತಷ್ಟು ಜೋರಾಗಿದೆ.

mallikarjun-kharge-respond-to-amit-shah

ಎಐಸಿಸಿ ಅಧ್ಯಕ್ಷರ ಪತ್ರದಲ್ಲಿ ಏನಿದೆ?

ಮಲ್ಲಿಕಾರ್ಜುನ ಖರ್ಗೆ ಬರೆದ ಪತ್ರದಲ್ಲಿ ಅಮಿತ್ ಶಾ ಪತ್ರಕ್ಕೆ ಉತ್ತರ ನೀಡಲಾಗಿದೆ. 'ನಾವು ನಿಮ್ಮಿಂದ ಸ್ವೀಕರಿಸಿದ ಪತ್ರವು ವಾಸ್ತವಿಕವಲ್ಲ... ನಿಮ್ಮ ಪತ್ರದಲ್ಲಿರುವ ಪದಗಳಿಗೆ ಮತ್ತು ನಿಮ್ಮ ಕಾರ್ಯವಿಧಾನಕ್ಕೂ ಗಮನಾರ್ಹ ವ್ಯತ್ಯಾಸವಿದೆ. ಸರ್ಕಾರವು ಅಸಹಿಷ್ಣುತೆ ತೋರುತ್ತಿದೆ ಮತ್ತು ಸಂಸತ್ತಿನಲ್ಲಿ ತನ್ನ ಇಚ್ಛೆಯನ್ನು ಒತ್ತಾಯಿಸುತ್ತಿದೆ' ಅಂತಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಈ ಮೂಲಕ ಮೊದಲೇ ಚರ್ಚೆಗೆ ಗುರಿಯಾಗಿರುವ ಮಣಿಪುರ ಘಟನೆಗೆ ರೋಚಕ ತಿರುವು ಸಿಕ್ಕಂತಾಗಿದೆ. ವಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ಕಿರಿಕಿರಿ ಮತ್ತೊಂದು ಹಂತಕ್ಕೆ ಹೋಗುವ ಲಕ್ಷಣ ಕೂಡ ಈ ಮೂಲಕ ಗೋಚರಿಸಿದೆ.

ತಿರುಗೇಟು ನೀಡಿದ ಕೇಂದ್ರ ಸಚಿವ

ಇನ್ನು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದ್ದು, ಈ ಬಗ್ಗೆ ಆಡಳಿತ ಪಕ್ಷದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಜನರಿಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಮೇಲೆ ವಿಶ್ವಾಸವಿದೆ. ಅವರು ಕಳೆದ ಅವಧಿಯಲ್ಲೂ ಅವಿಶ್ವಾಸ ನಿರ್ಣಯ ತಂದರು. ಅವರಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಈ ಮೂಲಕ ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷಗಳ ನಾಯಕರ ನಡುವೆ ಮಣಿಪುರ ಘಟನೆ ದೊಡ್ಡ ಕಿಚ್ಚನ್ನೇ ಹಚಿದಂತೆ ಕಾಣುತ್ತಿದೆ.

ಒಟ್ಟಾರೆ ಹೇಳುವುದಾದ್ರೆ ಸಂಸತ್‌ನ ಮುಂಗಾರು ಅಧಿವೇಶನ ಮಣಿಪುರ ವಿಚಾರವಾಗಿ ಸಾಕಷ್ಟು ಚರ್ಚೆಗೆ ಈಡಾಗಿದೆ. ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಇದೇ ವಿಚಾರ ಹಿಡಿದು ವಾಗ್ದಾಳಿ ನಡೆಸುತ್ತಿದ್ದರೆ, ಆಡಳಿ ಪಕ್ಷದ ನಾಯಕರು ಅದಕ್ಕೆ ತಿರುಗೇಟು ನೀಡುತ್ತಿದ್ದಾರೆ. ಹೀಗೆ ಇಬ್ಬರ ನಡುವೆ ಆರೋಪ ಮತ್ತು ಪ್ರತ್ಯಾರೋಪ ಜೋರಾಗಿದೆ. ಅಧಿವೇಶನ ಮುಗಿಯುವ ತನಕ ಈ ತಿಕ್ಕಾಟ ಕೂಡ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+