ದೇಶವು ಅಚ್ಛೇ ದಿನವನ್ನು ಸುಳ್ಳು ಭಾಷಣ & ಜಾಹೀರಾತುಗಳಲ್ಲಿ ಹುಡುಕುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಲೇವಡಿ
ನವದೆಹಲಿ, ಜನವರಿ 04: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
कच्चे तेल के दाम लुढ़क रहें हैं, पर मोदी सरकार की लूटखोरी पर कोई लगाम नहीं है।
— Mallikarjun Kharge (@kharge) January 4, 2024
मोदी जी के मंत्री जी खुद कह रहें हैं कि "तेल कंपनियों से दाम घटाने के बारे में कोई बात नहीं हुई है।"
तेल कंपनियां हर एक लीटर पेट्रोल पर जनता से ₹8 से ₹10 और डीज़ल पर ₹3 से ₹4 मुनाफ़ा कमा रहीं… pic.twitter.com/dIJOQP0sVB
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದೆ, ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಲೂಟಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಲೇವಡಿ ಮಾಡಿದ್ದಾರೆ.

ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸಾರ್ವಜನಿಕರಿಂದ ₹8 ರಿಂದ ₹10 ಲಾಭ ಮತ್ತು ಡೀಸೆಲ್ ಮೇಲೆ ₹3 ರಿಂದ ₹4 ಲಾಭ ಗಳಿಸುತ್ತಿವೆ .ತೈಲ ಕಂಪನಿಗಳ ಜೊತೆ ಬೆಲೆ ಇಳಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಮೋದಿ ಸರ್ಕಾರದ ಮಂತ್ರಿಗಳೇ ಹೇಳುತ್ತಿದ್ದಾರೆ. ದೇಶವು ಬಿಜೆಪಿಯ ಅಚ್ಛೇ ದಿನವನ್ನು ಸುಳ್ಳು ಭಾಷಣಗಳಲ್ಲಿ ಮತ್ತು ಪೊಳ್ಳು ಜಾಹೀರಾತುಗಳಲ್ಲಿ ಹುಡುಕುತ್ತಿದೆ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 19 ತಿಂಗಳಲ್ಲಿ ಕಚ್ಚಾ ತೈಲವು ಶೇಕಡಾ 31 ರಷ್ಟು ಕಡಿಮೆಯಾಗಿದೆ ಎಂದು ಹೇಳುವ ಚಾರ್ಟ್ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಬಗ್ಗೆ ಈವರೆಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ.
ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಭಾರೀ ಏರಿಳಿತ ಉಂಟಾಗುತ್ತಿದೆ. ಬಹುತೇಕ ಕಡಿಮೆಯಾಗುತ್ತಿದೆ. ಹೀಗಾಗಿ ದೇಶದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಸದ್ಯಕ್ಕೆ ತೈಲ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಕಚ್ಛಾ ತೈಲ ಬೆಲೆ ವಿಪರೀತ ಏರಿಕೆ ಕಂಡಿದ್ದಾಗ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದವು. ಕಚ್ಛಾ ತೈಲ ಬೆಲೆ ಬೇಡಿಕೆಗೆ ಅನುಗುಣವಾಗಿ ಏರಿಳಿತ ಕಾಣುತ್ತದೆ. ಕೆಲವು ಅಂತಾರಾಷ್ಟ್ರೀಯ ವಿದ್ಯಮಾನಗಳೂ ತೈಲ ಬೆಲೆ ಏರಿಳಿತಕ್ಕೆ ಕಾರಣ ಆಗುತ್ತದೆ. ಹೀಗಾಗಿ ಈ ಲೆಕ್ಕಾಚಾರವನ್ನು ಆಧರಿಸಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕೆಲ ದಿನಗಳ ಮಟ್ಟಿಗೆ ಇಳಿಕೆ ಮಾಡಲು ಆಗುವುದಿಲ್ಲ. ಸದ್ಯದ ಮಟ್ಟಿಗೆ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಳಿತ ಕಂಡು ಬರುತ್ತಿದೆ. ಹೀಗಾಗಿ ತೈಲ ಮಾರುಕಟ್ಟೆ ಕಂಪನಿಗಳು ತೈಲ ಬೆಲೆ ಇಳಿಕೆ ಸಂಬಂಧ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕೇಂದ್ರ ಹರ್ದೀಪ್ ಸಿಂಗ್ ಪುರಿ ಸ್ಪಷ್ಟವಾಗಿ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications