ಅಹ್ಮದ್ ಸಾವು ಪ್ರಕಟಣೆ ತಡವಾಗಿದ್ದು ಅಮಾನವೀಯ : ಖರ್ಗೆ
ಇ ಅಹ್ಮದ್ ಅವರು ಹೃದಯಾಘಾತದಿಂದ ಅಗಲಿದ್ದಾರೆ ಎಂದು ಕೇಂದ್ರ ಸರಕಾರಕ್ಕೆ ಮೊದಲೇ ಗೊತ್ತಿತ್ತು. ಆದರೆ, ಇದನ್ನು ಪ್ರಕಟಿಸುವುದನ್ನು ಮುಂದೂಡಿದ್ದಾರೆ. ಇದು ಅಮಾನವೀಯ ಎಂದು ಖರ್ಗೆ ಅವರು ಆರೋಪಿಸಿದರು.
ನವದೆಹಲಿ, ಫೆಬ್ರವರಿ 01 : ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಘಟನೆಯ ನಾಯಕ ಇ ಅಹ್ಮದ್ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಇಂದು ಮಂಡಿಸಲಾಗುತ್ತಿರುವ ಬಜೆಟ್ಟನ್ನು ಮುಂದೂಡಬೇಕೆಂದು ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇದನ್ನು ನಾವು ಮಾತ್ರ ಆಗ್ರಹಿಸುತ್ತಿಲ್ಲ, ಜೆಡಿಯು ನಾಯಕರು, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಕೂಡ ಆಗ್ರಹಿಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ನುಡಿದರು. [ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]

ಇ ಅಹ್ಮದ್ ಅವರು ಹೃದಯಾಘಾತದಿಂದ ಅಗಲಿದ್ದಾರೆ ಎಂದು ಕೇಂದ್ರ ಸರಕಾರಕ್ಕೆ ಮೊದಲೇ ಗೊತ್ತಿತ್ತು. ಆದರೆ, ಇದನ್ನು ಪ್ರಕಟಿಸುವುದನ್ನು ಮುಂದೂಡಿದ್ದಾರೆ. ಇದು ಅಮಾನವೀಯ ಎಂದು ಖರ್ಗೆ ಅವರು ಆರೋಪಿಸಿದರು.
ಇಂದೇನು ಮಾರ್ಚ್ 31 ಅಲ್ಲ. ಬಜೆಟ್ ಮಂಡನೆಗೆ ಇನ್ನೂ ಸಾಕಷ್ಟು ಸಮಯವಿದೆ. ಆದ್ದರಿಂದ ಬಜೆಟ್ ಮಂಡನೆ ಮುಂದೂಡುವುದೇ ಹಿತಕರ ಎಂದು ಖರ್ಗೆ ಆಗ್ರಹಿಸಿದರು. [ಜೇಟ್ಲಿ ಬಜೆಟ್ 2017 : ತೆರಿಗೆದಾರರ 10 ನಿರೀಕ್ಷೆಗಳು]
ಈಕೂಡಲೆ ನಾನು ಕೇರಳಕ್ಕೆ ಹೋಗುತ್ತಿದ್ದು, ಅಲ್ಲಿನ ಸಂಸದರನ್ನು ಭೇಟಿಯಾಗುವುದಾಗಿ ಅವರು ನುಡಿದರು. ಆದರೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಘಟನೆ, ದೇಶಕ್ಕೆ ಪಕ್ಷ ಮುಖ್ಯವೇನಲ್ಲ, ಆದ್ದರಿಂದ ಬಜೆಟ್ ಮುಂದೂಡುವುದು ಬೇಡ ಎಂದು ಹೇಳಿದೆ.
ಬಜೆಟ್ ಕಾಪಿಗಳು ಈಗಾಗಲೆ ಸಂಸತ್ತಿಗೆ ಬಂದಿರುವುದರಿಂದ ಬಜೆಟ್ ಮಂಡನೆ ಮುಂದೂಡುವುದು ಸರಿಯಲ್ಲ, ಮಾಡಲೂಬಾರದು ಎಂದು ಸಂಸದೀಯ ತಜ್ಞ ಸುಭಾಶ್ ಕಶ್ಯಪ್ ಅವರು ಅಭಿಪ್ರಾಯಪಟ್ಟಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications