ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರನ್ನಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ
ದೆಹಲಿ ಜನವರಿ 13: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಆಪ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ (INDIA bloc) ಮುಖ್ಯಸ್ಥರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದರೆ ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ.
ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಶನಿವಾರ ಒಮ್ಮತ ಮೂಡಿದೆ. ಈ ಬಣದ ನಾಯಕರು ವರ್ಚುಯಲ್ ಸಭೆ ನಡೆಸಿದ್ದು, ಮೈತ್ರಿಕೂಟದ ವಿವಿಧ ಅಂಶಗಳು ಹಾಗೂ 2024ರ ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಚರ್ಚಿಸಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವಿಕೆ ಮತ್ತು ಮೈತ್ರಿಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಇಂದು ಇಂಡಿಯಾ ಮೈತ್ರಿಕೂಟದ ನಾಯಕರು ವರ್ಚುವಲ್ ಸಭೆಯನ್ನು ನಡೆಸಿದ್ದರಿಂದ ಈ ಬೆಳವಣಿಗೆಯಾಗಿದೆ. ಸಭೆಯಲ್ಲಿದ್ದ ಮುಖಂಡರು ನಿತೀಶ್ ಕುಮಾರ್ ಅವರನ್ನು ಬಣದ ಸಂಚಾಲಕರನ್ನಾಗಿ ನೇಮಿಸಲು ನಿರ್ಧರಿಸಿದರು.
ಆದರೆ ನಿತೀಶ್ ಕುಮಾರ್ ಅವರು ಯಾವುದೇ ಸ್ಥಾನಮಾನದ ಹಿಂದೆ ಬಿದ್ದಿಲ್ಲ ಎಂದು ಹೇಳಿದರು. ಬಿಹಾರ ಮುಖ್ಯಮಂತ್ರಿ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕಾಂಗ್ರೆಸ್ನ ಯಾರಾದರೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಸಭೆಯಲ್ಲಿ ನಿರ್ಧರಿಸಲಾಯಿತು.
ತೃಣಮೂಲ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಸಮಾಜವಾದಿ ಪಕ್ಷದ ನಾಯಕರು ಸಭೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ಅವರನ್ನು ನೇಮಿಸುವ ಬಗ್ಗೆ ಒಮ್ಮತ ಮೂಡಿದೆ. ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರನ್ನಾಗಿ ಮಾಡಲು ನಾಯಕರು ನಿರ್ಧರಿಸಿದ್ದಾರೆ, ಆದರೆ ಸಭೆಯಲ್ಲಿ ಭಾಗವಹಿಸದ ಪ್ರತಿನಿಧಿಗಳನ್ನು ಸಂಪರ್ಕಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಮೂಲಗಳು ಹೇಳಿವೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು 28 ವಿರೋಧ ಪಕ್ಷಗಳು INDIA ವೇದಿಕೆಯಡಿ ಒಗ್ಗೂಡಿವೆ. ಆದಾಗ್ಯೂ, ಮುಖ್ಯಸ್ಥರ ಆಯ್ಕೆ ಇಂಡಿಯಾ ಮೈತ್ರಿಕೂಟ ಎದುರಿಸುತ್ತಿರುವ ಹಲವಾರು ಸವಾಲುಗಳ ಒಂದು ಮುಖವಾಗಿದೆ. ಎಲ್ಲಾ ಪಕ್ಷಗಳ ನಡುವಿನ ಸೀಟು ಹಂಚಿಕೆ ಸಮಸ್ಯೆಯನ್ನು ಅವರು ಇನ್ನೂ ನಿಭಾಯಿಸಬೇಕಾಗಿದೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications