Mamata Banerjee: ಮಹಾ ಕುಂಭ ಮೇಳವನ್ನು 'ಮೃತ್ಯುಕುಂಭ' ಎಂದು ಕರೆದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ ಜನವರಿ 18: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಮಹಾ ಕುಂಭ ಮೇಳಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಮಹಾ ಕುಂಭವನ್ನು ಮೃತ್ಯು ಮಹಾಕುಂಭ ಮೇಳೆ ಎಂದು ಕರೆದಿದ್ದಾರೆ. ಮಹಾ ಕುಂಭಮೇಳದಲ್ಲಿ ವಿಐಪಿಗಳಿಗೆ ವಿಶೇಷ ಸೌಲಭ್ಯಗಳು ಸಿಗುತ್ತಿವೆ. ಆದರೆ ಸಾಮಾನ್ಯ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಈ ಮೆಗಾ ಕಾರ್ಯಕ್ರಮವನ್ನು ಸರಿಯಾಗಿ ಯೋಜಿಸಲಾಗಿಲ್ಲ. ನಾನು ಮಹಾ ಕುಂಭವನ್ನು ಗೌರವಿಸುತ್ತೇನೆ. ಜೊತೆಗೆ ಪವಿತ್ರ ತಾಯಿ ಗಂಗೆಯನ್ನು ಗೌರವಿಸುತ್ತೇನೆ. ಆದರೆ ಯಾವುದೇ ಯೋಜನೆ ಇಲ್ಲದೆ, ಎಷ್ಟೋ ಜನ ಇಲ್ಲಿನ ಅವ್ಯವಸ್ಥೆಗೆ ಸಮಸ್ಯೆಗಳನ್ನು ಎದುರಿಸಿದ್ದಾರೆ. ಶ್ರೀಮಂತರು, ವಿಐಪಿ ಜನರಿಗೆ 1 ಲಕ್ಷ ರೂ.ವರೆಗಿನ ಟೆಂಟ್ಗಳು ಪಡೆಯಲು ಅವಕಾಶವಿದೆ. ಆದರೆ ಕುಂಭಮೇಳದಲ್ಲಿ ಬಡವರಿಗೆ ಯಾವುದೇ ವ್ಯವಸ್ಥೆ ಇಲ್ಲ. ಜೊತೆಗೆ ಇಲ್ಲಿ ಕಾಲ್ತುಳಿತ ಸಾಮಾನ್ಯ. ಆದರೆ ವ್ಯವಸ್ಥೆ ಮಾಡುವುದು ಮುಖ್ಯ. ಇಲ್ಲಿ ಕಾಲ್ತುಳಿತದಲ್ಲಿ ಮರಣ ಹೊಂದಿದವರಿಗೆ ಮರಣ ಪ್ರಮಾಣ ಪತ್ರವನ್ನೂ ನೀಡಿಲ್ಲ. ಅಲ್ಲಿಯೂ ಡಬಲ್ ಎಂಜಿನ್ (ಕೇಂದ್ರ, ಯುಪಿ) ಸರ್ಕಾರವಿದೆ. ಬಡವರಿಗೂ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ದೀದಿ ಗುಡುಗಿದ್ದಾರೆ.

'ನೀವು ಒಂದು ನಿರ್ದಿಷ್ಟ ಧರ್ಮವನ್ನು ಮಾರಾಟ ಮಾಡುತ್ತಿದ್ದೀರಿ'
ಇದೇ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಕೋಮುವಾದದ ಬಗ್ಗೆ ಮಾತನಾಡುವುದು ಅಥವಾ ಯಾವುದೇ ಧರ್ಮದ ವಿರುದ್ಧ ಪ್ರಚೋದಿಸುವುದು ಎಂದಲ್ಲ. ಇಲ್ಲಿ ನೀವು ಒಂದು ನಿರ್ದಿಷ್ಟ ಧರ್ಮವನ್ನು ಮಾರಾಟ ಮಾಡುತ್ತಿದ್ದೀರಿ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ರಾಜ್ಯ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದರು. ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ಧರ್ಮವನ್ನು ಬಳಸುತ್ತಿದೆ. 'ಹೀಗೇ ಮುಂದುವರೆಯುತ್ತಿದ್ದರೆ ನಾನು ರಾಜೀನಾಮೆ ನೀಡುತ್ತೇನೆ' ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಾವು ವಿರೋಧ ಪಕ್ಷಗಳಿಗೆ ಮಾತನಾಡಲು ಶೇ. 50 ರಷ್ಟು ಸಮಯವನ್ನು ನೀಡಿದ್ದೇವೆ. ಅವರು ಸದನದೊಳಗೆ ಕಾಗದಗಳನ್ನು ಎಸೆದಿದ್ದಾರೆ. ನನ್ನ ವಿರುದ್ಧ ಬಿಜೆಪಿ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಒಗ್ಗಟ್ಟಾಗಿವೆ. ಅವರು ನನ್ನ ಭಾಷಣ ಮಾಡಲು ಬಿಡಲಿಲ್ಲ. ಆದರೂ ಕೂಡ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂಬ ವದಂತಿಗಳನ್ನು ಬಿಜೆಪಿ ಶಾಸಕರು ಹರಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಆಕ್ರೋಶಗೊಂಡರು.
ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ನನ್ನ ಮೇಲೆ ಒಪ್ಪಂದ ಮಾಡಿಕೊಂಡಿರುವುದಾಗಿ ವಿಪಕ್ಷ ಶಾಸಕರು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಪ್ರಧಾನಿ ಮೋದಿಯವರಿಗೆ ದೂರು ನೀಡುತ್ತೇನೆ. ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ನನಗೆ ಸಂಪರ್ಕವಿದೆ ಎಂದು ಬಿಜೆಪಿ ಸಾಬೀತುಪಡಿಸಿದರೆ, ನಾನು ರಾಜೀನಾಮೆ ನೀಡುತ್ತೇನೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications