Get Updates
Get notified of breaking news, exclusive insights, and must-see stories!

ಒಡಿಶಾ ರೈಲು ದುರಂತ: ಸಂತ್ರಸ್ತ ಕುಟುಂಬಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ , ಜೂನ್. 08: ಒಡಿಶಾದ ಬಾಲಾಸೋರ್ ರೈಲು ಅಪಘಾತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ 86 ಜನರನ್ನು ಗೃಹರಕ್ಷಕರನ್ನಾಗಿ ನೇಮಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ಭೀಕರ ಅಪಘಾತದಲ್ಲಿ ಕೈಕಾಲು ಕಳೆದುಕೊಂಡವರ ಸಂಬಂಧಿಕರಿಗೂ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಈ ಹಿಂದೆ ಘೋಷಿಸಿದ್ದರು.

ಅಪಘಾತದಲ್ಲಿ ಪಶ್ಚಿಮ ಬಂಗಾಳದ ಕನಿಷ್ಠ 103 ಜನರು ಸಾವನ್ನಪ್ಪಿದ್ದಾರೆ ಮತ್ತು 40 ರಿಂದ 50 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಘಟನೆಯಲ್ಲಿ ಬದುಕುಳಿದ ಪಶ್ಚಿಮ ಬಂಗಾಳದ ಕನಿಷ್ಠ ಮೂವರು ತೀವ್ರ ಅಂಗವೈಕಲ್ಯವನ್ನು ಅನುಭವಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿಕಲಚೇತನ ಅಥವಾ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ, ಗೃಹ ರಕ್ಷಕರ ಕೆಲಸ ಮತ್ತು ಒಂದು ಬಾರಿ 10,000 ರೂಪಾಯಿ ಭತ್ಯೆ ನೀಡಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದರು.

Mamata Banerjee issued appointment letters to Odisha train accident victims kin

ರಾಜ್ಯ ಸರ್ಕಾರವು ಮುಂದಿನ ಮೂರು ತಿಂಗಳಲ್ಲಿ ಅಕ್ಕಿ ಮತ್ತು ಬೇಳೆಕಾಳುಗಳಂತಹ ಆಹಾರ ಪದಾರ್ಥಗಳೊಂದಿಗೆ ಗಾಯಾಳುಗಳ ಪ್ರತಿ ಕುಟುಂಬಕ್ಕೆ 2,000 ರೂಪಾಯಿ ನೀಡಲಿದೆ. ಕನಿಷ್ಠ 172 ಜನರಿಗೆ ಗಂಭೀರ ಗಾಯಗಳಾಗಿದ್ದು, ರಾಜ್ಯದ 635 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಸಂತ್ರಸ್ತ ಕುಟುಂಬದಲ್ಲಿ ಯಾರಾದರೂ ಬಯಸಿದರೆ ನಾವು 50 ಹುಡುಗಿಯರು ಮತ್ತು 50 ಹುಡುಗರು ಸೇರಿದಂತೆ 100 ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತೇವೆ. ನಾನು ಈಗಾಗಲೇ ಅಂತಹ ಒಂದು ವಿನಂತಿಯನ್ನು ಸ್ವೀಕರಿಸಿದ್ದೇನೆ ಎಂದಿದ್ದಾರೆ.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತರಾದ ಪ್ರತಿಯೊಬ್ಬರ ಸಂಬಂಧಿಕರಿಗೆ ಪ್ರಧಾನಮಂತ್ರಿ ಕಾರ್ಯಾಲಯವು PMNRF ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ 10 ಲಕ್ಷ ರೂಪಾಯಿ ಹೆಚ್ಚುವರಿಯಾಗಿ ಘೋಷಿಸಿದ್ದಾರೆ.

Mamata Banerjee issued appointment letters to Odisha train accident victims kin

ರಾಜ್ಯ ಪೊಲೀಸರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಾಧ್ಯವಾದರೆ ನೋಡಲು ಇಲಾಕೆಗಳಿಗೆ ಸೂಚಿಸಿದ್ದಾರೆ. ಇತ್ತ, ಪರಿಹಾರವನ್ನು ಪಾವತಿಸಲು ರಾಜ್ಯ ಸರ್ಕಾರವು ಇತರ ಹಂಚಿಕೆಗಳಿಂದ ಹಣವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

"ಪಶ್ಚಿಮ ಬಂಗಾಳ ಸರ್ಕಾರವು ಕೋರಮಂಡಲ್ ಎಕ್ಸ್‌ಪ್ರೆಸ್ ಅಪಘಾತದ ಸಂತ್ರಸ್ತರಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ (BOCWWB) ನಿಧಿಯಿಂದ ಪರಿಹಾರವನ್ನು ಪಾವತಿಸುತ್ತಿದೆ. ಸರಳವಾಗಿ ಹೇಳುವುದಾದರೆ ಮಮತಾ ಬ್ಯಾನರ್ಜಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕಾಗಿ ಉದ್ದೇಶಿಸಲಾದ ಹಣವನ್ನು ಕಿತ್ತುಕೊಳ್ಳುತ್ತಿದ್ದಾರೆ" ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+