ಜಿಎಸ್ ಟಿ ಎಂಬುದು ಕೇಂದ್ರ ಸರ್ಕಾರದ ಎರಡನೇ ಮಹಾಪ್ರಮಾದ!
ಕೋಲ್ಕತ್ತಾ, ಜೂನ್ 28: ಜಿಎಸ್ ಟಿ (goods and service tax) ಎಂಬುದು ನೋಟು ನಿರ್ಬಂಧದ ನಂತರ ಕೇಂದ್ರ ಸರ್ಕಾರ ಮಾಡಿದ ಮತ್ತೊಂದು ಮಹಾನ್ ಪ್ರಮಾದ. ಇಂಥ ಪ್ರಮಾದಕ್ಕೆ ನಮ್ಮ ಬೆಂಬಲ ಖಂಡಿತ ಇಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಜಿಎಸ್ ಟಿಯ ವ್ಯತಿರಿಕ್ತ ಪರಿಣಾಮದ ಕುರಿತ ಬರೆದುಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಕೇಂದ್ರ ಸರ್ಕಾರ ಜಿಎಸ್ ಟಿ ಜಾರಿಗೆ ತರುವಲ್ಲಿ ಅವಸರ ತೋರುತ್ತಿದೆ, ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಜಿಎಸ್ ಟಿಯನ್ನು ಜಾರಿಗೆ ತರಲು ಚಿಂತಿಸುತ್ತಿದ್ದಾಗ ನಾನೂ ಬೆಂಬಲಿಸಿದ್ದೆ.
ಜಿಎಸ್ ಟಿಯ ಸರಿಯಾದ ಜಾರಿಗೆ ನನ್ನ ಬೆಂಬಲವೂ ಇದೆ. ಆದರೆ ಇದೀಗ ಕೇಂದ್ರ ಸರ್ಕಾರ ಜಿಎಸ್ ಟಿಯನ್ನು ಜಾರಿಗೆ ತರುತ್ತಿರುವ ಕ್ರಮದಲ್ಲಿ ಹಲವು ಪ್ರಮಾದಗಳಿವೆ ಎಂದು ಅವರು ಬರೆದುಕೊಂಡಿದ್ದಾರೆ.
ಜಿಎಸ್ ಟಿ ಯನ್ನು ಅಧಿಕೃತವಾಗಿ ಜಾರಿಗೆ ತರುವ ಸಲುವಾಗಿ ಜೂನ್ 30 ರ ಮಧ್ಯ ರಾತ್ರಿ ಕೇಂದ್ರ ಸರ್ಕಾರ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾವು ಸುತಾರಾಂ ಹಾಜರಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ವ್ಯತಿರಿಕ್ತ ಪರಿಣಾಮ
ಜಿಎಸ್ ಟಿ ಜಾರಿಯಾಗುವುದರಿಂದ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳ ಮೇಲೆ ಎಂಥ ವ್ಯತಿರಿಕ್ತ ಪರಿಣಾಮವಾಗಲಿದೆ ಎಂಬ ಅರಿವು ಕೇಂದ್ರ ಸರ್ಕಾರಕ್ಕಿಲ್ಲ. ಇಂಥ ಮಹತ್ವದ ನಿರ್ಧಾರ ಕೈಗೊಳ್ಳುವ ಮೊದಲು ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ಸಮಯಾವಕಾಶ ನೀಡಬೇಕಿತ್ತು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಫೇಸ್ ಬುಕ್ಕಿನಲ್ಲಿ ಹಾಕಿರುವ ಈ ಸ್ಟೇಟಸ್ ಅನ್ನು 370 ಕ್ಕೂ ಹೆಚ್ಚು ಜನ ಶೇರ್ ಮಾಡಿದ್ದು, 2.3 ಸಾವಿರ ಜನ ಲೈಕ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿಗೆ ಬೆಂಬಲ
ಮಮತಾ ಬ್ಯಾನರ್ಜಿಯರ ಈ ಪೋಸ್ಟ್ ಗೆ ಹಲವರು ಪ್ರತಿಕ್ರಿಯೆ ನೀಡಿದ್ದು, ಪರ - ವಿರೋಧ ಚರ್ಚೆ ಆರಂಭವಾಗಿದೆ. ಇಂಥ ಮಹತ್ವದ ಆರ್ಥಿಕ ಸಂಗತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ ಕೇಂದ್ರ ಸರ್ಕಾರ ಪ್ರಬುದ್ಧವಾಗಿ ಯೋಚಿಸಬೇಕಿತ್ತು. ಆದರೆ ಹಾಗೆ ಮಾಡದೆ ಅವಸರದಲ್ಲಿ ಇಂಥ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಶಮಿರ್ ಜಾಫರ್ ಎನ್ನುವವರು ಪ್ರತಿಕ್ರಿಯಿಸಿದ್ದಾರೆ.

ಜಿಎಸ್ ಟಿ ಗೆ ಬೆಂಬಲ
'ಮೇಡಂ, ನೀವು ಹೇಳುತ್ತಿರುವುದು ಖಂಡಿತ ಸತ್ಯ. ಆದರೆ ಜಿಎಸ್ ಟಿ ಒಂದಲ್ಲ ಒಂದು ದಿನ ಜಾರಿಯಾಗಲೇ ಬೇಕಿತ್ತು. ಈಗ ಜಾರಿಯಾಗದಿದ್ದರೆ ಅದು ಮತ್ತಷ್ಟು ವಿಳಂಬವಾಗುತ್ತಿತ್ತು. ಇದರಿಂದ ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳಿಗೆ ಸಂಕಟವಾಗುವುದು ನಿಜವಾದರೂ, ಅವುಗಳ ನಿವಾರಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂಬ ವಿಶ್ವಾಸವಿದೆ. ಏಕೆಂದರೆ ಈಗಾಗಲೇ ಕೇಂದ್ರ ಸರ್ಕಾರ ವ್ಯಾಪಾರಿಗಳಿಗೆ ಮೇಲಿಂದ ಮೇಲೆ ಬೆಂಬಲ ನೀಡುತ್ತಲೇ ಬಂದಿದೆ' ಎಂದು ಜಿಎಸ್ ಟಿಯನ್ನು ಬೆಂಬಲಿಸಿ ಸಾಯಿ ಚರಣ ರೆಡ್ಡಿ ಕುರ್ರಾ ಎನ್ನುವವರು ಕಮೆಂಟ್ ಮಾಡಿದ್ದಾರೆ. ಆದರೆ ಅವರ ಕಮೆಂಟ್ ಇದೀಗ ನಾಪತ್ತೆಯಾಗಿರುವುವದು ಮತ್ತಷ್ಟು ಅಚ್ಚರಿಯ ಸಂಗತಿ!
ಅರ್ಥ ವ್ಯವಸ್ಥೆ ನಾಶವಾಗುತ್ತಿದೆ
ನೋಟು ನಿರ್ಬಂಧದ ಆಘಾತದಿಂದಲೇ ಬಹುಪಾಲು ಜನರು ಇನ್ನೂ ಹೊರಬರದಿರುವಾಗ, ಜಿಎಸ್ ಟಿಯನ್ನು ಪರಿಚಯಿಸುತ್ತಿರುವುದು ಎಂಥ ಹುಚ್ಚು? ಆರ್ ಬಿಐ ಮತ್ತು ಸರ್ಕಾರ ಸೇರಿ ನಮ್ಮ ಅರ್ಥ ವ್ಯವಸ್ಥೆಯನ್ನೇ ಹಾಳುಗೆಡವುತ್ತಿದೆ ಎಂದು ತನಿಶ್ ದೇವ್ ಎನ್ನುವವರು ಕಮೆಂಟ್ ಮಾಡಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications