ಮೊಹರಂ ದಿನದಂದು ದುರ್ಗಾ ಮೂರ್ತಿ ವಿಸರ್ಜನೆ ಅವಕಾಶ ನೀಡಿದ ಕೋರ್ಟ್
ಕೊಲ್ಕೊತ್ತಾ, ಸೆಪ್ಟೆಂಬರ್ 21: ಮೊಹರಂ ದಿನದಂದು ದುರ್ಗಾ ಮೂರ್ತಿ ವಿಸರ್ಜನೆಗೆ ಅವಕಾಶ ನಿರಾಕರಿಸಿ ಪಶ್ಚಿಮ ಬಂಗಾಳ ಸರಕಾರ ಹೊರಡಿಸಿದ್ದ ಆದೇಶವನ್ನು ಕೊಲ್ಕೊತ್ತಾ ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಮೊಹರಂ ಸೇರಿದಂತೆ ಎಲ್ಲಾ ದಿನಗಳಲ್ಲೂ ರಾತ್ರಿ 12 ಗಂಟೆವರೆಗೆ ದುರ್ಗಾ ಮೂರ್ತಿ ವಿಸರ್ಜನೆಗೆ ಕೊಲ್ಕೊತ್ತಾ ಹೈಕೋರ್ಟ್ ಅವಕಾಶ ನೀಡಿದೆ.
ವಿಜಯ ದಶಮಿಯ ದಿನ ಅಂದರೆ ಸೆಪ್ಟೆಂಬರ್ 30ರಂದು ರಾತ್ರಿ 10 ಗಂಟೆ ನಂತರ ಹಾಗೂ ಅಕ್ಟೋಬರ್ 1ರಂದು ಮೊಹರಂ ಹಬ್ಬದ ದಿನ ದುರ್ಗಾ ಮೂರ್ತಿಗಳ ವಿಸರ್ಜನೆಗೆ ಪಶ್ಚಿಮ ಬಂಗಾಳ ಸರಕಾರ ಅವಕಾಶ ನಿರಾಕರಿಸಿತ್ತು.

ಸರಕಾರದ ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಕೊಲ್ಕೊತ್ತಾ ಉಚ್ಚ ನ್ಯಾಯಾಲಯ, 'ಸರ್ಕಾರ ಈ ರೀತಿಯ ಆದೇಶ ನೀಡುವುದು ಸರಿಯಲ್ಲ' ಎಂದು ಆದೇಶದಲ್ಲಿ ಹೇಳಿದೆ.
ಈ ರೀತಿ ಆದೇಶ ಹೇರುವುದರಿಂದ ಜನರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಂತಾಗುತ್ತದೆ. ಜನ ಸಾಮಾನ್ಯರ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳಬಾರದು ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಸಾಮರಸ್ಯದಿಂದ ಹಬ್ಬಗಳನ್ನು ಆಚರಣೆ ಮಾಡಲಿ. ಅಗತ್ಯವಿದ್ದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಂಘರ್ಷ ತಪ್ಪಿಸಲು ಮೆರವಣಿಗೆಗಳ ಮೇಲೆ ನಿಯಂತ್ರಣ ಹೇರಬಹುದು ಎಂದು ನ್ಯಾಯಪೀಠ ಹೇಳಿದೆ.
ಇದೇ ಸಂದರ್ಭದಲ್ಲಿ ದುರ್ಗಾ ಮೂರ್ತಿ ಮೆರವಣಿಗೆ ಹಾಗೂ ಮೊಹರಂ ಮೆರವಣಿಗೆಗಳಿಗೆ ಸೂಕ್ತ ರೀತಿಯಲ್ಲಿ ಮಾರ್ಗ ನಿಗದಿಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯವು ನಿರ್ದೇಶನ ನೀಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications