ಬೆಂಗಳೂರು-ಮುಂಬೈ ವಿಮಾನದಲ್ಲಿ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಂಧನ
ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾಗ ತನ್ನ ಪಕ್ಕದಲ್ಲಿದ್ದ ಮಹಿಳಾ ಪ್ರಯಾಣಿಕರ ಮುಂದೆ ಹಸ್ತ ಮೈಥುನ. 31 ವರ್ಷದ ಸಬೀನ್ ಹಮ್ಜಾ ಎಂಬ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು.
ಮುಂಬೈ, ಜುಲೈ 20: ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾಗ ತನ್ನ ಪಕ್ಕದಲ್ಲಿದ್ದ ಮಹಿಳಾ ಪ್ರಯಾಣಿಕರ ಮುಂದೆ ಹಸ್ತ ಮೈಥುನ ಮಾಡಿಕೊಂಡ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಂಗಳವಾರ (ಜು. 18) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜುಲೈ 18ರಂದು ಮುಂಜಾನೆ 6:30ಕ್ಕೆ ಆ ವಿಮಾನ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಿದೆ. ಅದರಲ್ಲಿ ಕುಳಿತಿದ್ದ 31 ವರ್ಷದ ಸಬೀನ್ ಹಮ್ಜಾ ಪ್ರಯಾಣಿಸಿದ್ದ. ಆತನ ಪಕ್ಕದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಕುಳಿತಿದ್ದರು.

ವಿಮಾನ ಗಗನಕ್ಕೆ ಹಾರಿದ ಕೆಲವು ನಿಮಿಷಗಳ ನಂತರ, ಆ ಮಹಿಳೆ ಸೊಂಪಾದ ನಿದ್ರೆಗೆ ಜಾರಿದ್ದಾರೆ. ಈ ಸಂದರ್ಭದಲ್ಲಿ, ಹಮ್ಜಾ ವಿಮಾನದಲ್ಲೇ ಹಸ್ತ ಮೈಥುನಕ್ಕೆ ಮುಂದಾಗಿದ್ದಾನೆ. ಅಷ್ಟೇ ಅಲ್ಲ, ತನ್ನ ಮತ್ತೊಂದು ಕೈನಿಂದ ಪಕ್ಕದಲ್ಲಿದ್ದ ಮಹಿಳೆಯ ಕೈ ಮುಟ್ಟಿದ್ದಾನೆ.
ತಕ್ಷಣ ಕಣ್ಣುಬಿಟ್ಟ ಆಕೆ ಪಕ್ಕದಲ್ಲಿ ಆತ ಮಾಡುತ್ತಿದ್ದ ಘನಂದಾರಿ ಕೆಲಸ ನೋಡಿ ಚೀರಿಕೊಂಡಿದ್ದಾಳೆ. ತಕ್ಷಣವೇ ವಿಮಾನದ ಸಿಬ್ಬಂದಿ ಅಲ್ಲಿಗೆ ಧಾವಿಸಿದ್ದಾರೆ. ಆಗ, ಆ ಮಹಿಳೆ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾರೆ.
ಆಗ, ಮುಂಬೈ ವಿಮಾನ ನಿಲ್ದಾಣದ ಸಿಬ್ಬಂದಿಗೆ ವಿಷಯ ಮುಟ್ಟಿಸಲಾಗಿದೆ. ಹಾಗಾಗಿ, ಮುಂಬೈನಲ್ಲಿ ವಿಮಾನ ಇಳಿಯುತ್ತಿದ್ದಂತೆ, ಆ ಆಸಾಮಿಗೆ ಪೊಲೀಸರೇ 'ಸುಸ್ವಾಗತ' ಕೋರಿದ್ದಾರೆ. ಈತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಂಥ ಘಟನೆಯು ನಡೆಯುತ್ತಿರುವುದು ಇತ್ತೀಚೆಗೆ ಇದು ಮೂರನೇ ಬಾರಿ. ಕಳೆದ ತಿಂಗಳು ಹೈದರಾಬಾದ್ ನಿಂದ ನವದೆಹಲಿಗೆ ವಿಮಾನದಲ್ಲಿ ಬಂದಿದ್ದ 56 ವರ್ಷದ ವ್ಯಕ್ತಿಯೊಬ್ಬರು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೀಗೆ ವರ್ತಿಸಿ, ಪೊಲೀಸರ ಅತಿಥಿಯಾಗಿದ್ದ.
ಅಷ್ಟೇ ಅಲ್ಲ. ಇತ್ತೀಚೆಗೆ ಮುಂಬೈನಿಂದ ಹೊರಟಿದ್ದ ರೈಲಿನಲ್ಲಿಯುವಕನೊಬ್ಬ ಕಂಪಾರ್ಟ್ ಮೆಂಟ್ ಒಂದರಲ್ಲಿ ಏಕಾಂಗಿಯಾಗಿದ್ದ ಯುವತಿಯೊಬ್ಬಳ ಮುಂದೆಯೇ ಹಸ್ತ ಮೈಥುನ ಮಾಡಿಕೊಂಡಿದ್ದ. ಈ ಪ್ರಕರಣದಲ್ಲಿ ಆ ಯುವತಿ ಮಹಿಳಾ ಸಹಾಯವಾಣಿಗೆ ದೂರು ನೀಡಿದರೂ ಅಲ್ಲಿನ ಸಿಬ್ಬಂದಿಯು ನಕ್ಕು ಸುಮ್ಮನಾಗಿದ್ದು ವಿವಾದಕ್ಕೆ ಕಾರಣವಾಗಿತ್ತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications