Get Updates
Get notified of breaking news, exclusive insights, and must-see stories!

ಯೋಧ ನಿರಂಜನ್ ಅವಹೇಳನ ಮಾಡಿದವನಿಗೆ ಪೊಲೀಸ್ ಆತಿಥ್ಯ

ಮಲಪ್ಪುರಂ, ಜನವರಿ, 05: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ವೀರ ಮರಣ ಅಪ್ಪಿದ ಯೋಧ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಕಮೆಂಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮಲಪ್ಪುರಂ ನಿವಾಸಿ ಅನ್ವರ್ ಸಾದಿಕ್(24) ಎಂಬಾತನನ್ನು ಬಂಧಿಸಲಾಗಿದೆ.

ಪಠಾಣ್ ಕೋಟ್ ನ ವಾಯನೆಲೆಯಲ್ಲಿ ಭಾನುವಾರ ಗ್ರೆನೇಡ್ ಸ್ಫೋಟಗೊಂಡು ನಿರಂಜನ್ ಉಗ್ರಗಾಮಿಗಳ ಕುತಂತ್ರಕ್ಕೆ ಬಲಿಯಾಗಿದ್ದರು. ಧೀರ ಯೋಧರಿಗಾಗಿ ಇಡೀ ದೇಶವೇ ಗೌರವ ಸಲ್ಲಿಸುತ್ತಿದ್ದರೆ, ಮಲಪ್ಪುರಂನ ಯುವಕ ಪುಂಡಾಟ ತೋರಿಸಿದ್ದ.[ಎಂಥಾ ಘೋರ ವಿಧಿ ಲಿಖಿತ,ನಿರಂಜನ್ ಸಾವಿನ ಆಘಾತ]

kerala

ಮಲಪ್ಪುರಂನ ಕೋಡುರ್ ನಿವಾಸಿಯನ್ನು ಕೋಝಿಕೋಡ್ ಅಸಿಸ್ಟೆಂಟ್ ಪೊಲೀಸ್ ಕಮೀಷನರ್ ಜೋಸೈ ಚೆರಿಯನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಆತನ ವಿರುದ್ಧ ಸೆಕ್ಷನ್ 124, ಎ ಕಲಂ ಅನ್ವಯ ದೂರು ದಾಖಲಿಸಿಕೊಂಡಿದೆ.

ಹುತಾತ್ಮ ಯೋಧ ನಿರಂಜನ್ ಕುರಿತು ಅನ್ವರ್ ತನ್ನ ಫೇಸ್ ಬುಕ್ ಪೇಜ್ ನಲ್ಲಿ, ಅವಮಾನಕರ ರೀತಿಯಲ್ಲಿ ಮಲಯಾಳಂನಲ್ಲಿ ಕಮೆಂಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿತ್ತು.[ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]

ಅನ್ವರ್ ಸಾದಿಕ್ ತಾನು ಮಲಯಾಳಂ ದೈನಿಕದಲ್ಲಿ ಕಾರ್ಯನಿರ್ವಹಿಸುದಾಗಿ ಬರೆದುಕೊಂಡಿದ್ದ. ಪೊಲೀಸರು ಪತ್ರಿಕಾ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಿದಾಗ, ಆ ಹೆಸರಿನ ಯಾವ ವ್ಯಕ್ತಿಯೂ ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದರು. ನಂತರ ಪತ್ರಿಕಾ ಕಚೇರಿಯ ಆಡಳಿತ ಮಂಡಳಿಯೇ ಆತನ ಬಗ್ಗೆ ಪೂರ್ಣವಾಗಿ ತನಿಖೆ ಕೈಕೊಳ್ಳುವಂತೆ ಮನವಿ ಮಾಡಿತ್ತು. ಯೋಧರ ಬಗ್ಗೆ, ಯೋಧರ ಬಲಿದಾನದ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದವ ಸದ್ಯ ಪೊಲೀಸರ ವಶದಲ್ಲಿದ್ದಾನೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+